ಚಿಕ್ಕಮಗಳೂರು: ಕಾಂಗ್ರೆಸ್ ಜಾತ್ಯತೀತ ನಿಲುವನ್ನು ಪ್ರತಿಪಾದಿಸುವ ಮೂಲಕ ಸಂವಿಧಾನ ಬದ್ಧರಾಜಕಾರಣ ಮಾಡಿದರೆ, ಬಿಜೆಪಿ ಜಾತಿ,ಧರ್ಮದ ಆಧರದ ಮೇಲೆ ಹಾಗೂ ಸಂವಿಧಾನ ವಿರೋಧಿಯಾಗಿ ರಾಜಕಾರಣಮಾಡುತ್ತದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಅವರುನಗರದ ವಕ್ಕಲಿಗರ ಸಮುದಾಯಭವನದಲ್ಲಿ ಶುಕ್ರವಾರ ಜಿಲ್ಲಾಕಾಂಗ್ರೆಸ್ ಹಮ್ಮಿಕೊಂಡಿದ್ದ ಗ್ರಾಮಸ್ವರಾಜ್ ಸಮಾವೇಶ ಮತ್ತು ವಿಧಾನಪರಿಷತ್ ಸದಸ್ಯೆ ಗಾಯತ್ರಿಶಾಂತೇಗೌಡ ಅವರ ಮತಯಾಚನೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಬಿಜೆಪಿ ಒಪ್ಪುವುದಿಲ್ಲ,ದೇಶದಲ್ಲಿ ಸಂವಿಧಾನ ಉಳಿದರೆ ಮಾತ್ರ ನಾವೆಲ್ಲ ಉಳಿಯಲು ಸಾಧ್ಯವೆಂದು ಪ್ರತಿಪಾದಿಸಿದರು.
ಕೋಮುವಾದಿ ಶಕ್ತಿಯನ್ನು ಸೋಲಿಸಲು ರಾಜ್ಯದಲ್ಲಿ ಜಾತ್ಯತೀತ ಪಕ್ಷಗಳು ಕೈಗೊಂಡಿರುವ ನಿರ್ಧಾರ ಒಳ್ಳೆಯ ಬೆಳವಣಿಗೆ. ಜಾತ್ಯತೀತ ಶಕ್ತಿಗಳು ಗಟ್ಟಿಯಾಗಿ ನಿಂತಾಗ ಮಾತ್ರ ದೇಶದ ಸಂವಿಧಾನ,ಪ್ರಜಾಪ್ರಭುತ್ವ ಉಳಿಯಲು ಸಾಧ್ಯವೆಂದು ಎಂದು ಹೇಳಿ, ಬಿಜೆಪಿಗೆ ಸಾಮಾಜಿಕ ನ್ಯಾಯ, ಜಾತ್ಯತೀತತೆ ಬಗ್ಗೆ ನಂಬಿಕೆ ಇಲ್ಲ,ನಾವೇನೂ ಬಿಜೆಪಿ ವಿರೋಧಿಗಳಲ್ಲ ಆದರೆ ತಾತ್ವಿಕ, ಸೈದ್ಧಾಂತಿಕವಾಗಿ ವಿರೋಧವಿದೆ.ರಾಜ್ಯದಲ್ಲಿ ಬಿಜೆಪಿ ವಿರುದ್ಧ ಗಾಳಿ ಬೀಸಲು ಆರಂಭವಾಗಿದೆ. ಈ ಸರ್ಕಾರದ ಆಡಳಿತದಿಂದ ಜನರು ಬೇಸರಗೊಂಡು ಭ್ರಮನಿರಸನಗೊಂಡಿದ್ದಾರೆ.ಜನಮನ್ನಣೆಯಿಂದ ಬಿಜೆಪಿ ಅಧಿಕಾರ ಪಡೆದಿಲ್ಲ, ಆಪರೇಷನ್ ಕಮನದ ಮೂಲಕ ಅಧಿಕಾರಹಿಡಿದಿದ್ದಾರೆಂದರು.
ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಇರಲಿಲ್ಲ, ಈ ಸರ್ಕಾರದಲ್ಲಿ ಗುತ್ತಿಗೆದಾರರರು ಶೇ.೪೦ ಹಣವನ್ನು ಕೊಡಬೇಕಾಗಿದೆ.ತಮ್ಮ ಅವಧಿಯಲ್ಲಿ ನಾನು ಎನ್ಓಸಿ ಕೊಡಲು ಒಂದೇ ಒಂದು ಪೈಸೆ ತೆಗೆದುಕೊಂಡಿರುವುದನ್ನು ಸಾಬೀತು ಪಡೆಸಿದರೆ ರಾಜಕೀಯ ನಿವೃತ್ತಿ ಪಡೆದುಕೊಳ್ಳುವುದಾಗಿ ಆಡಳಿತ ಪಕ್ಷಕ್ಕೆ ಸವಾಲೆಸೆದರು.
ಚಿಕ್ಕಮಗಳೂರು ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿಶಾಂತೇಗೌಡ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ. ಅವರ ಗೆಲುವು ಕಾಂಗ್ರೆಸ್ ಪಕ್ಷದ ಗೆಲುವಾಗುತ್ತದೆ ರಾಜ್ಯದಲಿ ಒಟ್ಟು ೧೫ ಸ್ಥಾನಗಳನ್ನು ಗೆಲ್ಲಲಿದ್ದೇವೆಂದರು. ಅಧ್ಯಕ್ಷತೆಯನ್ನು ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್ವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಮಾಜಿ ಸಚಿವ ಕೆ.ಜೆ.ಜಾರ್ಜ್ ಮಾತನಾಡಿದರು.
ಕೆಪಿಸಿಸಿ ವಕ್ತಾರ ಡಾ.ಬಿ.ಎಲ್.ಶಂಕರ್,ಮಾಜಿ ಸಚಿವರಾದ ಮೋಟಮ್ಮ,ಸಿ.ಆರ್.ಸಗೀರ್ ಅಹ್ಮದ್, ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಶಾಸಕರಾದ ಎಸ್.ಎಂ.ನಾಗರಾಜ್, ಶಿವಶಂಕರಪ್ಪ, ಜಿ.ಎಚ್.ಶ್ರೀನಿವಾಸ, ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ಮುಖಂಡರಾದ ಎಂ.ಎಲ್.ಮೂರ್ತಿ,ಕೆ.ಮಹ್ಮದ್,ಬಿ.ಸಿ.ಗೀತಾ,ಎ.ಎನ್.ಮಹೇಶ್,ಕೆಂಪರಾಜ್, ಡಾ.ಡಿ.ಎಲ್.ವಿಜಯಕುಮಾರ್, ಆನಂದ್, ರೇಖಾಹುಲಿಯಪ್ಪಗೌಡ, ಸಚಿನ್ಮೀಗಾ, ಶಿವಾನಂದಸ್ವಾಮಿ,ಕ್ಷೇತ್ರ ಸಮಿತಿ ಅಧ್ಯಕ್ಷ ಹಂಪಾಪುರ ಮಂಜೇಗೌಡ ಇದ್ದರು.
Congress committed politics
Discussion about this post