ಶ್ರೀನಗರ: ಎರಡು ವರ್ಷದ ಹಿಂದೆ ಕಾಂಗ್ರೆಸ್ ನಾಯಕತ್ವ ಪ್ರಶ್ನಿಸಿದ ಪತ್ರ ಬರೆದಿದ್ದ 23 ನಾಯಕರ (ಜಿ-23) ಪೈಕಿ ಒಬ್ಬರಾದ ಗುಲಾಂ ನಬಿ ಆಜಾದ್, ಈ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂಬ ಆಸೆ ನನಗೂ ಇದೆ. ಆದರೆ, ಪರಿಸ್ಥಿತಿಗಳನ್ನು ನೋಡಿದರೆ 2024ರ ಚುನಾವಣೆಯಲ್ಲೂ ಪಕ್ಷ ಅಧಿಕಾರಕ್ಕೆ ಬರುವ ಲಕ್ಷಣಗಳು ಗೋಚರಿಸುತ್ತಿಲ್ಲ” ಎಂದು ಹೇಳಿದ್ದಾರೆ. ಇದು ಕಾಂಗ್ರೆಸ್ಸಿಗರ ಹುಬ್ಬೇರುವಂತೆ ಮಾಡಿದ್ದಾರೆ. ಬಿಜೆಪಿಯವರನ್ನು ಕುತೂಹಲಗೊಳಿಸಿದೆ.
ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “2019ರ ಆಗಸ್ಟ್ನಲ್ಲಿ 370ನೇ ವಿಧಿಯನ್ನು ರದ್ದು ಮಾಡಿ ಜಮ್ಮು-ಕಾಶ್ಮೀರಕ್ಕೆ ಇದ್ದ ರಾಜ್ಯದ ಸ್ಥಾನಮಾನವನ್ನು ತೆಗೆಯಲಾಯಿತು. ಮತ್ತೆ ರಾಜ್ಯದ ಈ ಸ್ಥಾನಮಾನ ಸಿಗಬೇಕು. ಆದರೆ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವವರೆಗೆ ಇದು ಸಾಧ್ಯವಿಲ್ಲ. ಈ ಸ್ಥಿತಿಯನ್ನು ಬದಲಿಸಲು ಅಗತ್ಯವಾದ 300 ಸಂಸದರ ಬಲ ಸದ್ಯ ಕಾಂಗ್ರೆಸ್ಗೆ ಇಲ್ಲ. 2024ರ ಚುನಾವಣೆಯಲ್ಲೂ ಇದು ಕೈಗೂಡುತ್ತದೆ ಎಂಬ ನಿರೀಕ್ಷೆ ಇಲ್ಲ. ಹೀಗಾಗಿ ನಾನು, ರಾಜ್ಯದ ಸ್ಥಾನಮಾನ ಪುನರ್ಸ್ಥಾಪಿಸುತ್ತೇನೆ ಎಂದು ಸುಳ್ಳು ಆಶ್ವಾಸನೆಯನ್ನು ನೋಡುವುದಿಲ್ಲ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಅಜಾದ್ ಅಭಿಪ್ರಾಯಪಟ್ಟಿದ್ದಾರೆ.
ಒಂದೆಡೆ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಸಖ್ಯದಿಂದ ದೂರವಾಗುತ್ತಿದ್ದಾರೆ. ಇದನ್ನೊಂದೆಡೆ ಪಕ್ಷದಿಂದ ಹೊರಹೋಗುವ ನಾಯಕರ ಸಂಖ್ಯೆ ಹೆಚ್ಚಿದೆ. ಜತೆಗೆ ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ನಾಯಕತ್ವ ದೈವಿಕ ಹಕ್ಕಲ್ಲ. ಅದು ಪ್ರಜಾಪ್ರಭುತ್ವದ ಮಾದರಿಯಲ್ಲಿ ಆಯ್ಕೆ ಆಗಬೇಕು ಎಂದು ರಾಹುಲ್ ಗಾಂಧಿಯನ್ನು ಗುರಿಯಾಗಿಟ್ಟುಕೊಂಡು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಗುಲಾಂ ನಬಿ ಆಜಾದ್ ಅವರ ಹೇಳಿಕೆ ಕಾಂಗ್ರೆಸ್ಸಿಗರಲ್ಲಿ ಹತಾಶ ಭಾವನೆ ಹೆಚ್ಚಿಸಿದೆ.
ಇದನ್ನೂ ಓದಿ: Congress committed politics: ಕಾಂಗ್ರೆಸ್ ಬದ್ಧರಾಜಕಾರಣ ಮಾಡಿದರೆ ಬಿಜೆಪಿ ಸಂವಿಧಾನ ವಿರೋಧಿ ರಾಜಕಾರಣಮಾಡುತ್ತದೆ
Discussion about this post