ಚಿಕ್ಕಮಗಳೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕಾಗಿ ಹೋರಾಡಿದ ಮಹಾಶಯ ಡಾ. ಬಿ.ಆರ್.ಅಂಬೇಡ್ಕರ್ ಎಂದು ಬಿಜೆಪಿ ಯುವಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯ ಪುಣ್ಯಪಾಲ್ ಸ್ಮರಿಸಿದರು.
ಇದನ್ನೂ ಓದಿ: zero: ಪರಿಷತ್ ಸದಸ್ಯರಾಗಿ ಎಂ.ಕೆ. ಪ್ರಾಣೇಶ್ ಕೊಡುಗೆ ಶೂನ್ಯ
ಜಿಲ್ಲಾ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಎಸ್.ಸಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿ ಶೋಷಣೆಗೆ ಒಳಗಾಗಿ ಬಡತನದಲ್ಲಿ ಬೆಳೆದವರು ಮುಂದೆ ಶೋಷಿತರ ಧ್ವನಿಯಾಗಿ ಜಾತಿ, ಅಸ್ಪೃಶ್ಯತೆ ವ್ಯವಸ್ಥೆ ವಿರುದ್ದ ಹೋರಾಡಿದ ಮಹಾಶಯ ಎಂದು ಸ್ಮರಿಸಿದರು.
ಇದನ್ನೂ ಓದಿ: Police service unique: ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅನನ್ಯ
ಸ್ವಾತಂತ್ರ್ಯ ಪೂರ್ವದಲ್ಲಿ ಹರಿದು ಹಂಚಿ ಹೋಗಿದ್ದ ಸಂಸ್ಥಾನಗಳನ್ನು ಒಗ್ಗೂಡಿಸುವ ಮೂಲಕ ದೇಶದ ಐಕ್ಯತೆ, ಸಮಗ್ರತೆಗಾಗಿ ಶ್ರಮಿಸಿದವರು ಸರ್ದಾರ್ ವಲ್ಲಭಬಾಯ್ ಪಟೇಲರು. ಅಂದಿನ ರಾಷ್ಡ್ರೀಯ ಸರ್ಕಾರವು ದೇಶಕ್ಕೆ ಕಾನೂನುಗಳನ್ನು ರೂಪಿಸುವಾಗ ಅಂಬೇಡ್ಕರ್ ಅವರನ್ನು ಕರಡು ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ದೇಶಕ್ಕೆ ಅಮೂಲ್ಯ ಸಂವಿಧಾನ ರಚಿಸಲು ಕಾರಣವಾಯಿತು ಎಂದು ಕೊಂಡಾಡಿದರು.
ಇದನ್ನೂ ಓದಿ: Omikron panic: ಒಮಿಕ್ರಾನ್ ಭೀತಿ: ತಜ್ಞರ ಸಲಹೆಯಂತೆ ಮುಂದುವರಿಯುವೆ ಎಂದ ಸಿಎಂ ಬೊಮ್ಮಾಯಿ
೭೦ ವರ್ಷಗಳ ಹಿಂದೆ ರಚನೆಗೊಂಡ ಅಂಬೇಡ್ಕರ್ ಸಂವಿಧಾನ ಇಂದು ಅನೇಕ ದೇಶಗಳಿಗೆ ಮಾದರಿಯಾಗಿದೆ, ಮಹಿಳೆಯರು, ಶೋಷಿತರು, ಬಡ ವರ್ಗದವರು ಸೇರಿದಂತೆ ಸರ್ವ ಜನಾಂಗಕ್ಕೂ ಸಮಾನ ನ್ಯಾಯ ಒದಗಿಸಲಾಗಿದೆ. ಸ್ವಾತಂತ್ರ್ಯ, ಸಮಾನತೆ, ಬಾತೃತ್ವವೆಂಬ ತಳಹದಿಯ ಮೇಲೆ ಸಂವಿಧಾನ ರಚಿತವಾಗಿದೆ ಅದರ ಆಶಯಗಳನ್ನು ಈಡೇರಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮುಂದಾಗಿದೆ ಎಂದರು.
ಇದನ್ನೂ ಓದಿ: Indian Army: ಭಾರತೀಯ ಸೇನೆಯಲ್ಲಿ ಖಾಲಿಯಿದೆ 1 ಲಕ್ಷಕ್ಕೂ ಅಧಿಕ ಹುದ್ದೆಗಳು
ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಮಾನತೆ ಸಿಗಬೇಕು ಎಂಬುದು ಅಂಬೇಡ್ಕರ್ ಅವರ ಮೂಲ ಆಶಯವಾಗಿತ್ತು. ಪಂಡಿತ್ ಧೀನ್ ದಯಾಳ್ ಉಪಾಧ್ಯಯ ಅವರು ಅಂತ್ಯೋದಯ ಮೂಲಕ ಬಡವರಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: Dowry: ವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್
ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ ಕಲ್ಮರುಡಪ್ಪ ಮಾತನಾಡಿ ನವ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಅಂಬೇಡ್ಕರ್ ಸಂವಿಧಾನ ಮೂಲ ಪ್ರೇರಕವಾಗಿದೆ. ಕಾಯ್ದೆ ಕಾನೂನುಗಳ ಮೂಲಕ ಅಪಾರ ಕೊಡುಗೆ ನೀಡಿದ್ದು ಅವರನ್ನು ಕೇವಲ ಸ್ಮರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ದಿನವೂ ಸ್ಮರಿಸುವಂತಾಗಬೇಕು ಎಂದರು.
ಇದನ್ನೂ ಓದಿ: Indian Army: ಭಾರತೀಯ ಸೇನೆಯಲ್ಲಿ ಖಾಲಿಯಿದೆ 1 ಲಕ್ಷಕ್ಕೂ ಅಧಿಕ ಹುದ್ದೆಗಳು
ಅಂಬೇಡ್ಕರ್ ಬಡತನದಲ್ಲಿ ಬೆಳೆದು ಉನ್ನತ ಶಿಕ್ಷಣ ಪಡೆಯುವ ಮೂಲಕ ದೇಶಕ್ಕೆ ಸಂವಿಧಾನವನ್ನು ಬರೆದು ಕೊಡುಗೆ ನೀಡಿದ್ದಾರೆ ಅವರ ಆದರ್ಶಗಳು, ಚಿಂತನೆ, ವ್ಯಕ್ತಿತ್ವ ನಮ್ಮೆಲ್ಲರಿಗೂ ಮಾದರಿಯಾಗಬೇಕು ಎಂದರು.
ಇದನ್ನೂ ಓದಿ: ಎರಡು ಡೋಸ್ ಕೊರೋನಾ ಲಸಿಕೆ ತೆಗೆದುಕೊಂಡಿದ್ದರೆ ಒಮಿಕ್ರಾನ್ ತೀವ್ರತೆ ಕಡಿಮೆ
ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್, ಎಸ್,ಸಿ ಘಟಕದ ಅಧ್ಯಕ್ಷ ಕೆ.ಪಿ. ವೆಂಕಟೇಶ್, ಮುಖಂಡರಾದ ಹೆಚ್.ಡಿ. ತಮ್ಮಯ್ಯ, ರಾಜಪ್ಪ, ದೇವರಾಜ್ಶೆಟ್ಟಿ, ಸೀತಾರಾಮ ಭರಣ್ಯ, ಲಕ್ಷ್ಮಣ್ನಾಯ್ಕ್, ರುದ್ರಪ್ಪ, ಪುಷ್ಪರಾಜ್, ಪುಟ್ಟೇಗೌಡ ಇದ್ದರು ಲಕ್ಷ್ಮಣ್ಹುಲ್ಲೇಹಳ್ಳಿ ಸ್ವಾಗತಿಸಿ, ಹಿರೇಮಗಳೂರುಕೇಶವ ನಿರೂಪಿಸಿದರು, ರಾಜ್ಕುಮಾರ್ ವಂದಿಸಿದರು.
Ambedkar fought for the prosperity of the last person
Discussion about this post