ಚಿಕ್ಕಮಗಳೂರು: ಗೃಹರಕ್ಷಕ ದಳದ ಸಿಬ್ಬಂದಿಗಳು ಆತ್ಮವಿಶ್ವಾಸ, ಜ್ಞಾನ, ಕರ್ತವ್ಯನಿಷ್ಠೆಯನ್ನು ಹೆಚ್ಚಿಸಿಕೊಳ್ಳುವಂತೆ ತಹಶೀಲ್ದಾರ್ ಡಾ.ಕೆ.ಜೆ.ಕಾಂತರಾಜ್ ಕಿವಿಮಾತು ಹೇಳಿದರು.
ನಗರದ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಆಯೋಜಿಸಿದ್ದ ಅಖಿಲ ಭಾರತ ಗೃಹರಕ್ಷಕರ ದಿನಾಚಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೋವಿಡ್, ಅತೀವೃಷ್ಟಿ, ಚುನಾವಣೆ ಸಂದರ್ಭದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗಳು ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ. ಪೊಲೀಸ್ ಇಲಾಖೆ, ಕಾರಾಗೃಹ ಸೇರಿದಂತೆ ಇತರೆ ಇಲಾ ಖೆಯಲ್ಲಿ ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇಲಾಖೆ ಸಿಬ್ಬಂದಿಗಳಿಗೆ ಸಿಗುವ ಸವಲತ್ತು ಗಳು ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಸಿಗುವಂತಾಗಬೇಕು ಎಂದು ಅಭಿಪ್ರಾಯಿಸಿದರು.
ಜಿಲ್ಲಾ ಕಾರಾಗೃಹ ಅಧೀಕ್ಷಕ ರಾಕೇಶ್ ಕಾಂಬಳೆ ಮಾತನಾಡಿ, ಗೃಹರಕ್ಷಕ ದಳದ ಸಿಬ್ಬಂದಿ ಗಳು ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸಿದ್ದು, ನಿಮ್ಮ ಕರ್ತವ್ಯನಿಷ್ಠೆಯನ್ನು ಪರಿಗಣಿಸಿ ಈ ಹಿಂದೇ ನಗದು ಬಹುಮಾನ ನೀಡಲಾಗಿತ್ತು. ಕೋವಿಡ್ ಕಾರಣದಿಂದ ಈ ಬಾರೀ ನೀಡಲಾಗಿರಲಿಲ್ಲ, ಸರ್ಕಾರದಿಂದ ಅನುದಾನ ಬಂದ ತಕ್ಷಣ ನಗದು ಬಹುಮಾನ ಘೋ ಷಣೆ ಮಾಡಲಾಗುವುದು ಎಂದು ತಿಳಿಸಿದರು.
ನಿಮ್ಮ ಶ್ರಮ ಶ್ಲಾಘನೀಯವಾದದ್ದು, ಪೊಲೀಸ್ ಇಲಾಖೆಗೆ ಸರಿಸಮನಾಗಿ ಕಾರ್ಯ ನಿರ್ವಹಿ ಸುತ್ತಿದ್ದರು. ಸರ್ಕಾರದಿಂದ ಹೆಚ್ಚಿನ ಸೌಲಭ್ಯಗಳು ಸಿಗುತ್ತಿಲ್ಲ, ಹಾಗೇಂದು ಶಕ್ತಿಗುಂದದೆ ಕಾರ್ಯನಿರ್ವಹಿಸುವಂತೆ ತಿಳಿಸಿದ ಅವರು, ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಉನ್ನತ ಹುದ್ದೆಗೇರುವಂತೆ ಮಾಡಲು ಮುಂದಾಗಬೇಕೆಂದು ತಿಳಿಸಿದರು.
ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಆರ್.ಅನಿಲ್ಕುಮಾರ್ ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಗಳಿಗೆ ಇತ್ತೀಚೆಗೆ ಸೆಕ್ಯೂರಿಟಿ ಗಾರ್ಡ್ಗಳನ್ನು ನೇಮಕ ಮಾಡಿಕೊಂಡಿಕೊಳ್ಳ ಲಾಗಿದೆ. ಆದರೆ ಅವರಿಗೆ ಹೆಚ್ಚಿನ ತರಬೇತಿ ಇರುವುದಿಲ್ಲ, ವ್ಯಕ್ತಿ ಯಾರು ಎಂದು ತಿಳಿದಿರು ವುದಿಲ್ಲ, ಅದರ ಬದಲು ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನೇಮಿಸಿಕೊಂಡಲ್ಲಿ ಇನ್ನೂ ಹೆಚ್ಚಿ ನ ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮಕೈಗೊಳ್ಳ ಬೇಕೆಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ೬೦೦ಜನ ಗೃಹರಕ್ಷಕ ದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಪೂರ್ಣ ವಾಧಿಯ ಕೆಲಸ ಸಿಗುತ್ತಿಲ್ಲ, ಎರಡು ಮೂರು ತಿಂಗಳು ಕೆಲಸ ನಿರ್ವಹಿಸಬೇಕಾದ ಪರಿಸ್ಥಿತಿ ಇದೆ. ಪೂರ್ಣಾವಧಿ ಕೆಲಸ ಸಿಗದಿರುವುದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಇಲಾಖೆಗಳಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗಳ ನಿಯೋಜನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.
ಗೃಹರಕ್ಷಕ ದಳದ ಸಿಬ್ಬಂದಿಗಳಲ್ಲಿ ಶ್ರದ್ಧೆ ಮತ್ತು ಆಸಕ್ತಿಯಿಂದ ತಮ್ಮ ಕರ್ತವ್ಯನಿರ್ವಹಿ ಸುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಗೃಹರಕ್ಷಕದಳದ ಸಿಬ್ಬಂದಿಗೆ ಉತ್ತಮ ಹೆಸರಿದೆ ಅದ ನ್ನು ಉಳಿಸಿ ಬೆಳೆಸುವ ಜೊತೆಗೆ ನಿಮ್ಮ ಕಿರಿಯರಿಗೆ ಮಾರ್ಗದರ್ಶಕರಾಗಬೇಕು ಎಂದು ಹೇಳಿದರು.
ಕಾರ್ಯಕ್ರಮವನ್ನು ಉಪ ಸಮಾದೇಷ್ಟಕ ಹಾಲಪ್ಪ ಸ್ವಾಗತಿಸಿದರು. ವೀರೂಪಾಕ್ಷಪ್ಪ ನಿರೂ ಪಿಸಿದರು, ಮಹೇಶ್ವರಪ್ಪ ವಂದಿಸಿದರು.
akhil bharat griharakshakara dinachane
Discussion about this post