ನವದೆಹಲಿ: ದೇಶದ ಮಾಹಿತಿ ತಂತ್ರಜ್ಞಾನ ಹಾಗೂ ಸಂಬಂಧಿತ ಕ್ಷೇತ್ರಗಳಲ್ಲಿ ದೊಡ್ಡಮಟ್ಟದಲ್ಲಿ ಕೇಂದ್ರ ಸರ್ಕಾರದ ಹೊಸ ಉದ್ಯೋಗಾವಕಾಶಗಳು ಶೀಘ್ರವೇ ಸೃಷ್ಟಿಯಾಗಲಿವೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ದೇಶದ ಎರಡು ಮತ್ತು ಮೂರನೇ ದರ್ಜೆ ನಗರಗಳಲ್ಲಿ ಐಟಿ ಹಾಗೂ ಸಂಬಂಧಿಸಿದ ಕ್ಷೇತ್ರದ ಪದವೀಧರರಿಗೆ ಅಪಾರ ಪ್ರಮಾಣದ ಉದ್ಯೋಗಾವಕಾಶ ಸೃಷ್ಟಿಯಾಗಲಿವೆ.
ಕರ್ನಾಟಕದಲ್ಲೂ ಹೊಸ ಉದ್ಯೋಗಾವಕಾಶ ಸೃಷ್ಟಿಯ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೂಡಿ ಕೆಲಸ ಮಾಡಲಾಗುತ್ತಿದೆ. ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ, ಹಣಕಾಸು ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಗಳೊಂದಿಗೆ ಸೇರಿ ಉದ್ಯೋಗ ಸೃಷ್ಟಿಸಲು ಸರ್ಕಾರ ಸೂಕ್ತ ಯೋಜನೆ ರೂಪಿಸಿದೆ. ಅಲ್ಲದೆ, ನಿರುದ್ಯೋಗಿಗಳಿಗೆ ಸ್ವ ಉದ್ಯೋಗಕ್ಕೆ ಮುದ್ರಾ ಯೋಜನೆಯಡಿ ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.
ಠೇವಣಿದಾರರು ದೇಶದ ಬ್ಯಾಂಕಿಂಗ್ ವ್ಯವಸ್ಥೆಯ ಪ್ರಮುಖ ಪಾಲುದಾರರು. ಅಂತಹ ಠೇವಣಿದಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಮಹತ್ವದ ಸುಧಾರಣೆ ಮಾಡಿದೆ. ಠೇವಣಿ ವಿಮೆ ಪರಿಹಾರವನ್ನು 1 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸುವ ಮೂಲಕ ದೇಶದ ಶೇ.80ರಷ್ಟು ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ
ಸರ್ಕಾರ ಮುಂದಾಗಿದೆ.
ಬ್ಯಾಂಕಿಂಗ್ ವಲಯದ ಮೇಲೆ ವಿಶ್ವಾಸಾರ್ಹತೆ ಹೆಚ್ಚಿಸುವ ಕೆಲಸವನ್ನು ಪ್ರಧಾನ ಮಂತ್ರಿಗಳು ಮಾಡಿದ್ದಾರೆ. ಕೇವಲ ನಗರ ಪ್ರದೇಶಗಳಿಗೆ ಮಾತ್ರವಲ್ಲದೇ ಗ್ರಾಮೀಣ ಪ್ರದೇಶದ ಠೇವಣಿದಾರರಿಗೂ ಅನುಕೂಲ ಮಾಡಿಕೊಟ್ಟಿರುವುದರಿಂದ ಇದೊಂದು ಮಹತ್ವದ ದಿನವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.
Job creation
ಇದನ್ನೂ ಓದಿ: e Paper – December 13, 2021
ಇದನ್ನೂ ಓದಿ: ಡಿಸೆಂಬರ್ 13ರಂದು ಕಾಶಿ ವಿಶ್ವನಾಥ ಕಾರಿಡಾರ್-1 ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಇದನ್ನೂ ಓದಿ: ರಕ್ಷಿತ್ ಶೆಟ್ಟರು ಕೊಟ್ಟರು ಹೊಸ ಅಪ್ಡೇಟ್; 777 ಚಾರ್ಲಿ ಬಿಡುಗಡೆ ಯಾವಾಗ?
Discussion about this post