ನವದೆಹಲಿ: ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಯುವ ಕ್ರಿಕೆಟಿಗರಾದ ಋತುರಾಜ್ ಗಾಯಕವಾಡ್ ಹಾಗೂ ವೆಂಕಟೇಶ್ ಅಯ್ಯರ್ಗೆ ಟೀಂ ಇಂಡಿಯಾದಲ್ಲಿ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಅದೇ ರೀತಿ, ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ನೀರ ಪ್ರದಶರ್ನ ನೀಡಿರುವ ಅನುಭವಿ ಆಟಗಾರ ಶಿಖರ್ ಧವನ್ಗೆ ಸ್ಥಾನ ದೊರೆಯುವ ಸಾಧ್ಯತೆ ಕಡಿಮೆ ಎಂದೂ ಹೇಳಲಾಗಿದೆ.
ಇದನ್ನೂ ಓದಿ: ವಿರಾಟ್ ಕೊಹ್ಲಿಯ ಕೊಂಡಾಡಿದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್: ಕಾರಣವೇನು?
ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಕ್ರಿಕೆಟ್ ಸರಣಿ ಜನವರಿಯಲ್ಲಿ ನಡೆಯಲಿದೆ. ತಂಡದ ನಾಯಕನಾಗಿ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಈಗಾಗಲೇ ಆಯ್ಕೆಯಾಗಿದ್ದು, ತಂಡದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.
ಕಳೆದ ಐಪಿಎಲ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಗಾಯಕವಾಡ್ ಹಾಗೂ ವೆಂಕಟೇಶ ಅಯ್ಯರ್ ಇದೀಗ ವಿಜಯ್ ಹಜಾರೆ ಟೂರ್ನಿಯಲ್ಲಿಯೂ ಭರ್ಜರಿ ಆಟವಾಡುತ್ತಿದ್ದಾರೆ. ಐಪಿಎಲ್ನಲ್ಲಿ ಗಾಯಕವಾಡ್ ಅವರಿಗೆ ಆರೆಂಜ್ ಕ್ಯಾಪ್ ದೊರೆತಿತ್ತು.
ಇದನ್ನೂ ಓದಿ: ವಿರಾಟ್ ಕೊಹ್ಲಿ ಈಗಲೂ ತಂಡದ ನಾಯಕ, ಅವರ ಶ್ರೇಷ್ಠ ಆಟ ಟೀಂ ಇಂಡಿಯಾಗೆ ಅಗತ್ಯ: ರೋಹಿತ್ ಶರ್ಮಾ
Discussion about this post