ಬೆಳಗಾವಿ: ರೈತರ ಎಲ್ಲಾ ಬೇಡಿಕೆಗಳ ಬಗ್ಗೆ ಅವರೊಂದಿಗೆ ಮಾತನಾಡಲು ನಾವು ಸಿದ್ದರಿದ್ದೇವೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಯಾವುದೇ ಭರವಸೆ ನೀಡಿಲ್ಲ
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಾರ್ವಜನಿಕ ಹಿತಾಸಕ್ತಿ ಇದ್ದರೆ ಕೃಷಿ ಕಾನೂನುಗಳು ಮತ್ತು ಇತರ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವು ರೈತರೊಂದಿಗೆ ಮಾತನಾಡಲು ಮುಕ್ತರಾಗಿದ್ದೇವೆ. ಅವರು ಏನ್ನನ್ನು ಬಯಸುತ್ತಾರೆ ಎಂಬುದನ್ನು ನಾವು ಆಲಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.
‘ಚಳಿಗಾಲದ ಅಧಿವೇಶನವನ್ನು ಫಲಪ್ರದವಾಗಿ ನಡೆಸಲು ನಾವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಕೆಲವು ಮಸೂದೆಗಳನ್ನು ಅಂಗೀಕರಿಸಲು, ಅಧಿವೇಶನದಲ್ಲಿ ಚರ್ಚಿಸಲು ನಾವು ಸಿದ್ಧರಿದ್ದೇವೆ. ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳನ್ನು ಎದುರಿಸಲು ನಾವು ಸಿದ್ಧರಿದ್ದೇವೆ. ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಕೆಲವು ದೀರ್ಘಾವಧಿಯ ಬೇಡಿಕೆಗಳನ್ನು ಪರಿಹರಿಸಲು ನಾವು ಸಿದ್ದರಿದ್ದೇವೆ’ ಎಂದು ತಿಳಿಸಿದರು.
ರೈತರಿಗೆ ಅತಿವೃಷ್ಟಿ ಪರಿಹಾರ ಪಾವತಿ ವಿಳಂಬದ ಕುರಿತು ಕೇಳಿದ ಪ್ರಶ್ನೆಗೆ ಸದನದ ವೇದಿಕೆಯಲ್ಲಿ ಉತ್ತರ ನೀಡಲಾಗುವುದು ಎಂದರು. ‘ವಿರೋಧ ಪಕ್ಷದ ನಾಯಕರಿಗೆ ಇಂತಹ ಸಮಸ್ಯೆಗಳನ್ನು ಎತ್ತಲು ಹಲವಾರು ಅವಕಾಶಗಳಿವೆ. ನಾವು ಅವರಿಗೆ ಉತ್ತರಿಸುತ್ತೇವೆ. ಸದನ ನಡೆಯುತ್ತಿರುವಾಗ ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದು ಸರಿಯಲ್ಲ’ ಎಂದರು.
ಮತಾಂತರ ನಿಷೇಧ ಕಾಯ್ದೆ ಕುರಿತು ಕೇಳಲಾದ ಪ್ರಶ್ನೆಗೆ “ಮತಾಂತರ ಕಾಯ್ದೆ ಕಾನೂನು ಇಲಾಖೆಯ ಪರಿಶೀಲನಾ ಸಮಿತಿಯಲ್ಲಿದ್ದು, ಒಪ್ಪಿಗೆಯಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಬೇಕು. ನಂತರ ಸದನದಲ್ಲಿ ಮಂಡಿಸಲಾಗುವುದು ಎಂದರು.
Ready for talks with farmers

























Discussion about this post