ದೆಹಲಿ: ಅರಣ್ಯಹಕ್ಕು ಕಾಯಿದೆಅಡಿಯಲ್ಲಿ ಭೂಮಿ ಮಂಜೂರು ಮಾಡಲು ಕಾಯಿದೆಗೆ ಸೂಕ್ತ ತಿದ್ದುಪಡಿ ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ.
ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.50ಕ್ಕಿಂತ ಹೆಚ್ಚು ಭೂಮಿ ಅರಣ್ಯದಿಂದ ಕೂಡಿದೆ. ಪಶ್ಚಿು ಘಟ್ಟಗಳ ಪ್ರಮುಖ ಪ್ರದೇಶ ನನ್ನ ಕ್ಷೇತ್ರದಲ್ಲಿ ಬರುತ್ತದೆ. ಸಾವಿರಕ್ಕೂ ಹೆಚ್ಚು ಹಳ್ಳಿಗಳು ಮತ್ತು ಕುಗ್ರಾಮಗಳು ಕಾಡಿನಲ್ಲಿ ಅಥವಾ ಕಾಡಿನ ಅಂಚಿನಲ್ಲಿವೆ. ಅರಣ್ಯ ವಾಸಿಗರು ತಮ್ಮ ಜೀವನೋಪಾಯಕ್ಕಾಗಿ ಮುಖ್ಯವಾಗಿ ಅರಣ್ಯವನ್ನು ಅವಲಂಬಿಸಿದ್ದಾರೆ. ಇವರುಗಳಿಗೆ ಹಕ್ಕುಪತ್ರ ಕೊಡಲು ಕಾಯಿದೆ ತಿದ್ದುಪಡಿ ಅಗತ್ಯವಿದೆ ಎಂದರು.
ಆದ್ದರಿಂದ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರು ಇದನ್ನು ಪರಿಶೀಲಿಸಲು ಮತ್ತು ಇತರ ಸಾಂಪ್ರದಾಯಿಕ ಅರಣ್ಯವಾಸಿಗಳಿಗೆ ಅವರು ಅರ್ಜಿ ಸಲ್ಲಿಸಿದ ದಿನಾಂಕದ ಪೂರ್ವದಲ್ಲಿ 25 ವರ್ಷಗಳಿಂದ (ಒಂದು ತಲೆಮಾರು) ವಾಸಿಸುತ್ತಿರುವುದನ್ನು ಪರಿಗಣಿಸಿ ಅವರಿಗೆ ಅರಣ್ಯ ಹಕ್ಕು ಕಾಯಿದೆಅಡಿಯಲ್ಲಿ ಭೂಮಿ ಮಂಜೂರು ಮಾಡಲು ಕಾಯಿದೆಗೆ ಸೂಕ್ತ ತಿದ್ದುಪಡಿಯನ್ನು ತರಲು ಮನವಿ ಮಾಡಿದರು.
Amendment in The Forest Rights Act
Discussion about this post