ಚಿಕ್ಕಮಗಳೂರು: ಸರ್ಕಾರ ನಿಗಧಿಪಡಿಸಿದ ದರಕ್ಕಿಂತ ಹೆಚ್ಚು ಹಣವನ್ನು ವಸೂಲಿ ಮಾಡುವ ಮೂಲಕ ಜಿಲ್ಲೆಯ ಗ್ಯಾಸ್ ಏಜೆನ್ಸಿಯೊಂದು ಗ್ರಾಹಕರಿಂದ ಹಗಲು ದರೋಡೆ ನಡೆಸುತ್ತಿದ್ದು ಕೂಡಲೇ ಮಾಲೀಕರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಮೂಲಕ ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಾರ್ವಜನಿಕರಿಂದ ಹೆಚ್ಚು ಹಣ ವಸೂಲಿ ಮಾಡುವ ಜಿಲ್ಲೆಯ ಗ್ಯಾಸ್ ಏಜೆನ್ಸಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕರವೇ ಅಧ್ಯಕ್ಷ ತೇಗೂರು ಜಗದೀಶ್ ಮಾತನಾಡಿ ಈ ವಿಚಾರವಾಗಿ ಜಿಲ್ಲಾಧಿಕಾಗಳು ಹಾಗೂ ಆಹಾರ ಮತ್ತು ನಾಗರೀಕರ ಸರಬರಾಜು ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಕೇವಲ ಅಧಿಕಾರಿಗಳು ನೋಟಿಸ್ ನೀಡುವ ಮೂಲಕ ಸುಮ್ಮನಾಗಿದ್ದಾರೆ, ಆದ್ದರಿಂದ ಕೂಡಲೇ ಸಂಬಂಧ ಪಟ್ಟ ಗ್ಯಾಸ್ ಏಜೆನ್ಸಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಅಜ್ಜಂಪುರದಲ್ಲಿರುವ ಸಿ.ಎಸ್ಆರ್ ಗ್ಯಾಸ್ ಏಜೆನ್ಸಿ ಸರ್ಕಾರದ ನಿಯಮವನ್ನು ಗಾಳಿಗೆ ತೂರಿ ಗ್ರಾಹಕರಿಂದ ಗ್ಯಾಸ್ ಸರಬರಾಜು ಹೆಸರಿನಲ್ಲಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದು, ಈ ವಿಚಾರ ಪ್ರಶ್ನೆ ಮಾಡಲು ಹೋದಲ್ಲಿ ಸಾರ್ವಜನಿಕರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ದೂರಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಕಾರ್ಯದರ್ಶಿ ಶಶಿ ಆಣೂರು, ತಾಲ್ಲೂಕು ಅಧ್ಯಕ್ಷ ಮನೋಜ್ಶೆಟ್ಟಿ, ಕರವೇ ಯುವ ಘಟಕದ ಅಧ್ಯಕ್ಷ ಕುಮಾರ್ ಆರ್,ಶೆಟ್ಟಿ, ಭರತ್ ರಾಜ್, ನಾಗಲತಾ, ಲೋಹಿತ್, ನವೀನ್ಕುಮಾರ್ ಸೇರಿದಂತೆ ಮತ್ತಿತತರರು ಇದ್ದರು.
District Karnataka Defence Forum protest
Discussion about this post