• Home
  • About Us
  • Contact Us
  • Terms of Use
  • Privacy Policy
Friday, May 8, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Case under Goondas Act: ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ದೇಶದ್ರೋಹ ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣ

ತನಿಖೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Shri News Desk by Shri News Desk
Dec 21, 2021, 07:54 am IST
in ರಾಜಕೀಯ, ರಾಜ್ಯ
Share on FacebookShare on TwitterTelegram

ಬೆಳಗಾವಿ:  ಭಾಷಾವಾರು ಪ್ರಾಂತ್ಯ ರಚನೆ  ಕುರಿತು ನ್ಯಾ.ಮಹಾಜನ್ ಸಮಿತಿ ನೀಡಿರುವ ವರದಿಯೇ ಅಂತಿಮವಾಗಿದೆ. ದೇಶಭಕ್ತರ, ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳನ್ನು ಭಗ್ನಗೊಳಿಸಿ, ಗಡಿ ವಿವಾದದ ಮೂಲಕ ರಾಜಕೀಯ ಲಾಭ ಪಡೆಯುವ ದುರುದ್ದೇಶ ಹೊಂದಿರುವವರನ್ನು ಈಗಾಗಲೇ ಬಂಧಿಸಲಾಗಿದೆ. ಅವರ ವಿರುದ್ಧ ದೇಶದ್ರೋಹ ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿಂದು ಸಾರ್ವಜನಿಕ ಮಹತ್ವದ ವಿಚಾರದ ಕುರಿತು ಸಭಾಧ್ಯಕ್ಷರ ಅನುಮತಿ ಮೇರೆಗೆ ನಡೆದ ಚರ್ಚೆ ನಂತರ ಸರ್ಕಾರದ ಪರವಾಗಿ ಉತ್ತರಿಸಿ ಮಾತನಾಡಿ, ಭಾಷಾವಾರು ಪ್ರಾಂತ್ಯಗಳ ರಚನೆ ನಂತರ ಗಡಿ ತಂಟೆಗೆ ಮಹಾರಾಷ್ಟ್ರ ಸದಾ ಒಂದಿಲ್ಲೊಂದು ಕ್ಯಾತೆ ತೆಗೆಯುತ್ತಿದೆ. ಭಾಷಾವಾರು ಪ್ರಾಂತ್ಯಗಳ ರಚನೆಯ ಪುನರ್ ವಿಮರ್ಶೆಗೆ ಅವಕಾಶ ಇಲ್ಲದಿದ್ದರೂ ಕೂಡ ಅಂದಿನ ಮಹಾರಾಷ್ಟ್ರದ ಮುಖ್ಯಮಂತ್ರಿ ವಿ.ಪಿ.ನಾಯ್ಕ್ ಅವರು ನ್ಯಾ.ಮಹಾಜನ್ ನೇತೃತ್ವದಲ್ಲಿ ಸಮಿತಿ ರಚಿಸಿದರು.

ಸಮಿತಿಯು ವಿವಾದಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ನೀಡಿದೆ. ಆ ನಂತರವೂ ಮಹಾರಾಷ್ಟ್ರ ತನ್ನ ಅಪಸ್ವರ ಮುಂದುವರೆಸುತ್ತಿದೆ. ಗಡಿ ವಿವಾದವನ್ನು ಬಂಡವಾಳ ಮಾಡಿಕೊಂಡು ರಾಜಕೀಯ ಮಾಡುತ್ತಿರುವವರ ಹುನ್ನಾರ ಇದರ ಹಿಂದೆ ಇದೆ. ಕ್ರಿಮಿನಲ್ ಮನೋಭಾವ ಹೊಂದಿರುವ ವ್ಯಕ್ತಿಗಳು ಅಶಾಂತಿ ಮೂಡಿಸುವ ದರುದ್ದೇಶದಿಂದ ಪೂರ್ವ ನಿಯೋಜಿತವಾಗಿ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ,  ಖಾನಾಪುರದಲ್ಲಿ ಬಸವಣ್ಣನವರ ಭಾವಚಿತ್ರ ವಿರೂಪಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ ಕೆಲವರು ಶಿವಾಜಿ ಪ್ರತಿಮೆಗೆ ಮಸಿ ಬಳೆದಿದ್ದಾರೆ. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಜಾಮೀನಿನ ಮೇಲೆ ಬಿಡುಗಡೆ ಮಾಡುವುದಕ್ಕೆ ಪ್ರಕರಣವನ್ನು ಸೀಮಿತಗೊಳಿಸುವುದಿಲ್ಲ. ಈ ಪ್ರಕರಣದ ಸಮಗ್ರ ತನಿಖೆ ಮಾಡಿ ಕೃತ್ಯದ ಹಿಂದಿರುವ ಬಲ, ಸಂಚು, ಷಡ್ಯಂತ್ರ ರೂಪಿಸಿರುವುದು ದೇಶದ್ರೋಹದ ಕೃತ್ಯವಾಗಿದೆ. ಇವರ ವಿರುದ್ಧ ದೇಶದ್ರೋಹ ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಅದೇ ರೀತಿ ವಿಚಾರಣೆ ನಡೆಸಲು ಸೂಚಿಸಲಾಗಿದೆ ಎಂದರು.

ಕರ್ನಾಟಕದಲ್ಲಿರುವ ಮರಾಠಿಗರು, ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಸಾಮರಸ್ಯದಿಂದ ಇದ್ದಾರೆ. ಗಡಿ ವಿವಾದ ಸಮಸ್ಯೆ ಅಲ್ಲ. ಇದು ಗಡಿ ತಂಟೆಯನ್ನೇ ರಾಜಕೀಯ ಮಾಡಿಕೊಂಡಿರುವ ವ್ಯಕ್ತಿಗಳು ಹಾಗೂ ರಾಜಕೀಯ ಸಂಘಟನೆಗಳ ಬಂಡವಾಳವಾಗಿದೆ. ಕರ್ನಾಟಕದಲ್ಲಿ ನೆಲೆಸಿರುವ ಗಡಿಭಾಗದ ಮರಾಠಿಗರು ಇಲ್ಲಿನ ಅಭಿವೃದ್ಧಿ ಹಾಗೂ ಸರ್ಕಾರದ ಸ್ಪಂದನೆಗೆ ಮೆಚ್ಚಿಕೊಂಡು ರಾಜ್ಯದಲ್ಲಿಯೇ ಮುಂದುವರೆಯಲು ಮನಃಪೂರ್ವಕವಾಗಿ ಒಪ್ಪಿದ್ದಾರೆ. ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಭಾಗದಲ್ಲಿ ಆರ್ಥಿಕ, ವಾಣಿಜ್ಯ, ಕೈಗಾರಿಕೆ ಹಾಗೂ ರಕ್ಷಣಾ ವಲಯದಲ್ಲಿ ಬೆಳಗಾವಿ ಮಹತ್ವದ ಸ್ಥಳವಾಗಿದೆ. ಇಲ್ಲಿ ಗಲಭೆ, ಅಶಾಂತಿ, ಅಸ್ಥಿರತೆ ಸೃಷ್ಟಿಸುವುದು ಖಂಡನೀಯ.

ಮಹಾರಾಷ್ಟ್ರ ಏಕೀಕರಣ ಸಮಿತಿ ತನ್ನ ರಾಜಕೀಯ ಅಸ್ತಿತ್ವವನ್ನು ರಾಜ್ಯದಲ್ಲಿ ಕಳೆದುಕೊಂಡಿದೆ. 1978ರಲ್ಲಿ ಮಹಾರಾಷ್ಟ್ರದ ಕೆಲವು ನಾಯಕರು ಬೆಳಗಾವಿಗೆ ಬಂದಾಗ ಗಲಭೆಯಾಗಿತ್ತು. ಆಗ ನಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರ ಮೇಲೆಯೂ ಹಲ್ಲೆಯಾಗಿತ್ತು. ಇತ್ತೀಚಿನ ದಿನಗಳಲ್ಲಿ ಜನತೆ ಎಂಇಎಸ್ ತಿರಸ್ಕರಿಸಿದ್ದಾರೆ ಎಂದರು.

ಮಹಾರಾಷ್ಟ್ರದ ಜತ್ತ ತಾಲೂಕು ತೀವ್ರ ಬರಪೀಡಿತ ಹಾಗೂ ಕನ್ನಡಿಗರು ಅಧಿಕವಾಗಿರುವ ಪ್ರದೇಶವಾಗಿದೆ. ಅಲ್ಲಿನ ಸುಮಾರು 40 ಗ್ರಾಮ ಪಂಚಾಯಿತಿಗಳು ತಮ್ಮನ್ನು ಕರ್ನಾಟಕಕ್ಕೆ ಸೇರಿಸಲು ಹಿಂದೊಮ್ಮೆ ನಿರ್ಣಯ ಕೈಗೊಂಡು ಒತ್ತಾಯ ಪಡಿಸಿದ್ದನ್ನು ಸದನದಲ್ಲಿ ಮುಖ್ಯಮಂತ್ರಿಗಳು ಪ್ರಸ್ತಾಪಿಸಿದರು.
ಎಂಇಎಸ್ ರಾಜಕೀಯ ಪುಂಡರ ಬಗ್ಗೆ ನಾವೆಲ್ಲ ಒಕ್ಕೊರಲಿನಿಂದ  ಕಠಿಣ ನಿಲುವು ತಳೆಯಬೇಕು. ಬೆಳಗಾವಿಯ ಸುವರ್ಣಸೌಧ ಕರ್ನಾಟಕದ ಇನ್ನೊಂದು ಶಕ್ತಿ ಕೇಂದ್ರವಾಗಿದೆ. ಸೂರ್ಯ ಚಂದ್ರ ಇರುವವರೆಗೂ ಇದು ಕರ್ನಾಟಕದ ಅವಿಭಾಜ್ಯ ಅಂಗವಾಗಿರುತ್ತದೆ.  ಈ ನಿಟ್ಟಿನಲ್ಲಿ ಯಾವುದೇ ರಾಜಿ, ಮಾತುಕತೆ ಅಗತ್ಯ ಇಲ್ಲ. ಕರ್ನಾಟಕದ ಒಂದಿಂಚೂ ಗಡಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಘಟನೆ ಕುರಿತು ಅಲ್ಲಿನ ಗೃಹ ಕಾರ್ಯದರ್ಶಿಗಳೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಅಲ್ಲಿನ ಪೊಲೀಸ್ ಮಹಾ ನಿರ್ದೇಶಕರೊಂದಿಗೆ ನಮ್ಮ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಮಾತನಾಡಿ, ಕನ್ನಡಿಗರ ರಕ್ಷಣೆಯ ಹೊಣೆ ಕುರಿತು ಚರ್ಚಿಸಿದ್ದಾರೆ. ನಾನು ಕೂಡ ಮಹಾರಾಷ್ಟ್ರದ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದರು.

ರಾಜ್ಯದಲ್ಲಿ ಪ್ರತಿಮೆಗಳನ್ನು ಭಗ್ನಗೊಳಿಸಿದ, ಅವಮಾನಿಸಿದ ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ. ತನಿಖೆ ಪೂರ್ಣಗೊಂಡ ನಂತರ ಆರೋಪಿಗಳ ಹೆಸರುಗಳನ್ನು ಬಹಿರಂಗ ಪಡಿಸಲಾಗುವುದು. ಎರಡೂ ರಾಜ್ಯಗಳ ಜನತೆಯ ಮಧ್ಯೆ ವಿಶ್ವಾಸದ ಕೊರತೆಯಿಲ್ಲ. ಕೆಲವು ಪುಂಡರು ಗಡಿ ವಿಚಾರದಲ್ಲಿ ಶಾಂತಿ ಕದಡುವ ಮೂಲಕ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣದ ಮೇಲೆ ಪ್ರಭಾವ ಬೀರುವ ಭ್ರಮೆಯಲ್ಲಿ ಇದ್ದಾರೆ. ಅದು ಈಡೇರುವುದಿಲ್ಲ. ಶಾಶ್ವತ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ಸದನದ ಭಾವನೆಯಾಗಿದೆ ಎಂದರು.

ನೆಲ ಜಲದ ಹಿತಾಸಕ್ತಿಗೆ ಈ ಹಿಂದಿನ ಎಲ್ಲಾ ಸರ್ಕಾರಗಳು ನಿರಂತರವಾಗಿ ಕೆಲಸ ಮಾಡಿವೆ. ಅದನ್ನು ಇನ್ನಷ್ಟು ಗಟ್ಟಿಗೊಳಿಸಲಾಗುವುದು. ಈ ವಿಷಯದಲ್ಲಿ ಯಾರಿಗೂ ಅನುಮಾನ ಬೇಡ. ಎಂಇಎಸ್ ನಿಷೇಧಕ್ಕೆ ಪ್ರತಿಪಕ್ಷಗಳ ಸದಸ್ಯರು ಸಲಹೆ ನೀಡಿದ್ದಾರೆ. ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಒತ್ತಡಕ್ಕೆ ಮಣಿಯದೇ ಕನ್ನಡದ ಗಡಿಗಳ ಅಭಿವೃದ್ಧಿ ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳಲಾಗುವುದು. ಮಹಾರಾಷ್ಟ್ರ ಕನ್ನಡ ಶಾಲೆಗಳ ಅಭಿವೃದ್ಧಿ ಕುರಿತು ಅಲ್ಲಿನ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ಸದನಕ್ಕೆ ವಿವರಿಸಿದರು.

ಮಹಾಜನ್ ವರದಿಯೇ ಅಂತಿಮ : ಪ್ರತಿಮೆಗಳನ್ನು ಅವಮಾನಿಸಿದರ ವಿರುದ್ದ ದೇಶದ್ರೋಹ ಪ್ರಕರಣ ವಿಧಾನ ಸಭೆಯಲ್ಲಿ ಒಮ್ಮತದ ನಿರ್ಣಯ
ಗಡಿ ವಿವಾದ ಕುರಿತು ನ್ಯಾ.ಮಹಾಜನ್ ಆಯೋಗ ನೀಡಿರುವ ವರದಿಯೇ ಅಂತಿಮ ಎಂದು ರಾಜ್ಯ ಈಗಾಗಲೇ ಒಪ್ಪಿಕೊಂಡಿದೆ. ಆದಾಗ್ಯೂ ಕೆಲವು ವ್ಯಕ್ತಿ, ಸಂಘಟನೆಗಳು ಆಗಿಂದಾಗ್ಗೆ ಇದನ್ನು ಕೆದಕಿ ಶಾಂತಿ ಕದಡುತ್ತಿವೆ. ಶಿವಾಜಿ, ರಾಯಣ್ಣ ಪ್ರತಿಮೆಗಳು ಹಾಗೂ ಬಸವಣ್ಣ ಭಾವಚಿತ್ರಕ್ಕೆ ಆಗಿರುವ ಅವಮಾನದ ಘಟನೆಯನ್ನು ಸದನ ಖಂಡಿಸುತ್ತದೆ. ಇದಕ್ಕೆ ಕಾರಣವಾದವರ ವಿರುದ್ಧ ದೇಶÀದ್ರೋಹ ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೇಂದ್ರ ಗೃಹ ಮಂತ್ರಾಲಯಕ್ಕೆ ಕಳಿಸಲಾಗುವುದು. ಎರಡೂ ರಾಜ್ಯಗಳಲ್ಲಿ ಸಾಮರಸ್ಯ ಬಯಸುತ್ತೇವೆ. ಗಡಿಯಿಂದ ಆಚೆ ಪುಂಡಾಟಿಕೆ ನಿಲ್ಲಿಸಲು ಸದನ ಕೈಗೊಂಡ ನಿರ್ಣಯವನ್ನು ಪಕ್ಷಾತೀತವಾಗಿ ಎಲ್ಲ ಸದಸ್ಯರು ಬೆಂಬಲಿಸಿದರು.

ಸುವರ್ಣಸೌಧ ಆವರಣದಲ್ಲಿ ಚೆನ್ನಮ್ಮ ಹಾಗೂ ರಾಯಣ್ಣ ಪ್ರತಿಮೆ ಸ್ಥಾಪನೆ: ಬೆಳಗಾವಿಯ ಸುವರ್ಣಸೌಧ ಆವರಣದ ದ್ವಾರಗಳಲ್ಲಿ ದೇಶಪ್ರೇಮಿಗಳು ಮತ್ತು ಹೋರಾಟಗಾರರ ಪ್ರತಿಮೆಗಳನ್ನು ಸ್ಥಾಪಿಸುವ ಕುರಿತು ಸದಸ್ಯರು ನೀಡಿರುವ ಸಲಹೆಗಳನ್ನು ಸರ್ಕಾರ ಸ್ವಾಗತಿಸುತ್ತದೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಗಳನ್ನು ಸುವರ್ಣಸೌಧ ಆವರಣದ ಪ್ರಮುಖ ಸ್ಥಳಗಳಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಕನ್ನಡ ನಾಡು ನುಡಿ ರಕ್ಷಣೆ ಸದನದಲ್ಲಿ ಒಮ್ಮತದ ಧ್ವನಿ ಸಭಾಧ್ಯಕ್ಷ ಹರ್ಷ
ಕನ್ನಡ ನಾಡಿನ ಜನತೆಯ ನೆಲ ಜಲ ಭಾಷೆ ಕುರಿತು ವಿಧಾನ ಸಭೆಯ ಸದಸ್ಯರು ಪಕ್ಷಭೇದ ಮರೆತು ಒಮ್ಮತದ ಧ್ವನಿಯನ್ನು ಸದನದ ಮೂಲಕ ದೇಶಕ್ಕೆ ರವಾನಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಪ್ರತಿಮೆ ಭಂಜಕರ ವಿರುದ್ಧ ವಿಧಾನ ಸಭೆಯಲ್ಲಿ ಕೈಗೊಂಡ ನಿರ್ಣಯ ಮತ್ತು ಚರ್ಚೆಗಳು ಪುಂಡರಿಗೆ ಎಚ್ಚರಿಕೆ ಗಂಟೆಯಾಗಿವೆ. ಸ್ವಾರ್ಥ ಸಾಧಕರು ಇಂತಹ ಕೃತ್ಯಗಳನ್ನು ಕೈಬಿಡಬೇಕು ಎಂದು ಅವರು ಹೇಳಿದರು.

ವಿಧಾನ ಪರಿಷತ್‍ನಲ್ಲಿ ಮೊಳಗಿದ ಪ್ರತಿಧ್ವನಿ
ಪ್ರತಿಮೆ ಭಂಜಕರ ವಿರುದ್ಧ ದೇಶದ್ರೋಹ ಹಾಗೂ ಗೂಂಡಾಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳುವ ಕುರಿತು ವಿಧಾನ ಪರಿಷತ್‍ನಲ್ಲಿಯೂ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮಂಡಿಸಿದ ನಿರ್ಣಯಕ್ಕೆ ಸದನದ ಸದಸ್ಯರೆಲ್ಲರೂ ಬೆಂಬಲ ಸೂಚಿಸಿದರು.

Case under Goondas Act

Tags: Case under Goondas ActTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In