ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಕರ್ನಾಟಕದ ಎಲ್ಲಾ ಸವಾಲುಗಳಿಂದ ಮುಕ್ತವಾಗಿ, ಜನರ ಬದುಕು ಹಸನಾಗಿ ಹೊಸ ವರ್ಷ ಎಲ್ಲರಿಗೂ ಹರುಷ ತರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾರೈಸಿದ್ದಾರೆ.
ಇಂದು ಅವರು ಆರ್.ಟಿ.ನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಜಿಲ್ಲಾ ಮಟ್ಟದ ಹಲವಾರು ಆಡಳಿತಾತ್ಮಕ ವಿಚಾರ ಮತ್ತು ಯೋಜನೆಗಳ ಅನುಷ್ಠಾನದೊಂದಿಗೆ ಹೊಸ ವರ್ಷದ ಪ್ರಾರಂಭದಲ್ಲಿಯೇ ಹೊಸ ಚೈತನ್ಯ ಹಾಗೂ ಹೊಸ ದಿಕ್ಸೂಚಿಯೊಂದಿಗೆ ಅಧಿಕಾರಿಗಳು ಇನ್ನಷ್ಟು ಜನಸ್ನೇಹಿಯಾಗಿ ಆಡಳಿತ ನಡೆಸುವ ಚಿಂತನೆಯಲ್ಲಿ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.
Happy New Year























Discussion about this post