ನವದೆಹಲಿ: ಟ್ವೆಂಟಿ-20 ಕ್ರಿಕೆಟ್ನಲ್ಲಿ ಭಾರತ ತಂಡದ ನಾಯಕತ್ವವನ್ನು ಬಿಟ್ಟುಕೊಡುವ ನಿರ್ಧಾರವನ್ನು ಮರುಪರಿಶೀಲಿಸಬೇಕು. ವಿಶ್ವಕಪ್ ಸಂದರ್ಭದಲ್ಲಿ ಇಂಥ ಮಹತ್ವದ ನಿರ್ಧಾರ ಪ್ರಕಟಿಸುವುದರಿಂದ ತಂಡದ ಮೇಲೆ ಪರಿಣಾಮ ಉಂಟಾಗಲಿದೆ ಎಂದು ವಿರಾಟ್ ಕೊಹ್ಲಿ ಅವರಿಗೆ ತಿಳಿಸಿದ್ದೆವು ಎಂದು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಹೇಳಿದ್ದಾರೆ.
ವಿಶ್ವಕಪ್ ಇನ್ನೇನು ಸಮೀಪಿಸುತ್ತಿದೆ ಎಂಬ ಸಂದರ್ಭದಲ್ಲಿ ನಾಯಕತ್ವ ತ್ಯಜಿಸುವ ಬಗ್ಗೆ ಕೊಹ್ಲಿ ಮಾಹಿತಿ ನೀಡಿದರು. ಇದರಿಂದ ಎಲ್ಲರಿಗೂ ಅಚ್ಚರಿಯಾಗಿತ್ತು. ಈ ಕುರಿತು ಏನಿದ್ದರೂ ವಿಶ್ವಕಪ್ ಮುಗಿದ ಮೇಲೆ ಚರ್ಚಿಸೋಣ ಎಂದು ಅವರಿಗೆ ತಿಳಿಸಲಾಗಿತ್ತು. ಬಿಸಿಸಿ ಪದಾಧಿಕಾರಿಗಳೂ ಇದನ್ನೇ ಹೇಳಿದ್ದರು ಎಂದು ಶರ್ಮಾ ತಿಳಿಸಿದ್ದಾರೆ.
ಟೀಮ್ ಇಂಡಿಯಾ ಹಿತದೃಷ್ಟಿಯಿಂದ ನಿರ್ಧಾರದಿಂದ ಹಿಂದೆ ಸರಿಯುವಂತೆ ಕೊಹ್ಲಿ ಅವರಿಗೆ ಸೂಚಿಸಿದ್ದೆವು. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಹಾಗೂ ಇತರ ಪದಾಧಿಕಾರಿಗಳು ಸಭೆಯಲ್ಲಿದ್ದರು. ಅವರೆಲ್ಲರೂ ಇದೇ ಮಾತನ್ನು ಹೇಳಿದ್ದರು. ಅಂತಿಮವಾಗಿ ಕೊಹ್ಲಿ ಅವರ ನಿರ್ಧಾರವನ್ನು ನಾವು ಗೌರವಿಸಿದವು. ವಿಶ್ವಕಪ್ ಸಮೀಪಿಸುತ್ತಿದ್ದ ಕಾರಣ ಇನ್ನಷ್ಟು ಗೊಂದಲ ಮಾಡುವುದು ಸಮಂಜಸವಲ್ಲ ಎಂದು ವಿಷಯವನ್ನು ಅಲ್ಲಿಗೇ ಮುಕ್ತಾಯಗೊಳಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಋತುರಾಜ್ ಗಾಯಕ್ವಾಡ್ರನ್ನು ಕೊಂಡಾಡಿದ ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ: ಕಾರಣವೇನು?
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಹ ಇತ್ತೀಚೆಗೆ ಇದೇ ಮಾತನ್ನು ಹೇಳಿದ್ದರು.
ಆದರೆ, ಟೆಸ್ಟ್ ಸರಣಿಗಾಗಿ ದಕ್ಷಿಣ ಆಫ್ರಿಕಾಕ್ಕೆ ತೆರಳುವ ಮುನ್ನ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ನೀಡಿದ್ದ ಹೇಳಿಕೆಗೆ ಇದು ವ್ಯತಿರಿಕ್ತವಾಗಿದೆ. ನಾಯಕತ್ವದಲ್ಲಿ ಮುಂದುವರಿಯುವಂತೆ ಬಿಸಿಸಿ ಆಡಳಿತ ಮಂಡಳಿಯ ಯಾರೊಬ್ಬರೂ ತಮಗೆ ಸೂಚಿಸಿರಲಿಲ್ಲ. ಏಕದಿನ ಕ್ರಿಕೆಟ್ನಲ್ಲಿ ತಂಡದ ನಾಯಕತ್ವದಿಂದ ತೆರವುಗೊಳಿಸುವ ಬಗ್ಗೆ 90 ನಿಮಿಷಗಳ ಮೊದಲು ಮಾಹಿತಿ ನೀಡಲಾಗಿತ್ತು ಎಂದು ಕೊಹ್ಲಿ ಹೇಳಿದ್ದರು.
ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ರೋಹಿತ್ ಅಲಭ್ಯ: ಕನ್ನಡಿಗ ರಾಹುಲ್ ನಾಯಕ
Discussion about this post