Sandalwood news: ಬಿಗ್ಬಾಸ್ ಕನ್ನಡ 11ರ ಸ್ಪರ್ಧಿಯಾಗಿದ್ದ ಚೈತ್ರಾ ಕುಂದಾಪುರ ಇದೇ ಮೇ 9ಕ್ಕೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಚೈತ್ರಾ ಕುಂದಾಪುರ ಅವರು ಬಿಗ್ಬಾಸ್ನಲ್ಲಿ ಸ್ಪರ್ಧಿಸುವಾಗಲೇ, ನನಗೆ ಮದುವೆ ಫಿಕ್ಸ್ ಆಗಿದೆ ಎಂದಿದ್ದರು. ಇದಾದ ಬಳಿಕ Reality Show Maja Talkies ಗೆ ಬಂದಾಗ, ಅಲ್ಲಿಯೂ ಚೈತ್ರಾ ಮದುವೆ ಬಗ್ಗೆ ಮಾತಾಡಿದ್ದರು.
ಚೈತ್ರಾ ಬ್ರೈಡಲ್ ಲುಕ್ ನೋಡಲು ಇಲ್ಲಿ ಕ್ಲಿಕ್ ಮಾಡಿ
ಚೈತ್ರಾ ಕುಂದಾಪುರ ಕಾಲೇಜು ಡೇಸ್ನಿಂದ ಪ್ರೀತಿಸಿದ ಹುಡುಗನನ್ನೇ ವಿವಾಹವಾಗುತ್ತಿದ್ದಾರೆ. 12 ವರ್ಷದ ಪ್ರೀತಿಗೆ ಮನೆಯವರು ಗ್ರೀನ್ ಸಿಗ್ನಲ್ ನೀಡಿದ್ದು, ಇದು ಲವ್ ಕಮ್ ಅರೇಂಜ್ ಮ್ಯಾರೇಜ್ ಎಂದಿದ್ದಾರೆ. ಆದರೆ ಇಲ್ಲಿಯವರೆಗೂ ಚೈತ್ರಾ ತಾವು ಮದುವೆಯಾಗುವ ಹುಡುಗನ ಹೆಸರಾಗಲಿ, ಭಾವಚಿತ್ರವಾಗಲಿ ಎಲ್ಲಿಯೂ ತೋರಿಸಿಲ್ಲ. ಹಾಗಾಗಿ ಚೈತ್ರಾಕ್ಕಾ ಮದುವೆಯಾಗುವ ವರನ್ಯಾರು ಅನ್ನೋ ಕುತೂಹಲವಂತೂ ಹಲವರಲ್ಲಿ ಮನೆ ಮಾಡಿದೆ.
ಚೈತ್ರಾ ಕುಂದಾಪುರ ಮೆಹೆಂದಿ ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಇನ್ನು ತಮ್ಮ ಮೆಹೆಂದಿ ಶಾಸ್ತ್ರದ ವೀಡಿಯೋವನ್ನು ಅಪ್ಲೋಡ್ ಮಾಡಿರುವ ಚೈತ್ರಾ, ಮೆಹೆಂದಿ ಎಂದರೇನೆಂದು ವಿವರಿಸಿದ್ದಾರೆ. ತ್ರೇತಾಯುಗದಲ್ಲಿ ಶ್ರೀರಾಮ, ಲಕ್ಷ ಣ, ಭರತ ಮತ್ತು ಶತ್ರುಘ್ನರ ವಿವಾಹದ ಸಮಯದಲ್ಲಿ ಅವರನ್ನು ಸಿಂಗರಿಸಲು ಅವರ ಕೈ, ಕಾಲು, ಹಾಗೆಯೇ ಮುಖದ ಮೇಲೆ ಪಾಷಾಣಬಣ್ಣ (ವಿವಿಧ ಬಣ್ಣದ ಕಲ್ಲುಗಳಿಂದ ತಯಾರಿಸಿದ ಬಣ್ಣ) ಮತ್ತು ಪುಷ್ಪಬಣ್ಣ (ವಿವಿಧ ಬಣ್ಣದ ಹೂವುಗಳಿಂದ ತಯಾರಿಸಿದ ಬಣ್ಣ) ಗಳ ಸಹಾಯದಿಂದ ಎಲೆ-ಹೂವು ಮುಂತಾದ ಆಕಾರಗಳನ್ನು ಬಿಡಿಸಲಾಗಿತ್ತು. ಈ ಬಣ್ಣಗಳಲ್ಲಿ ವಿವಿಧ ದಿವ್ಯ ಔಷಧೀಯ ವನಸ್ಪತಿಗಳ ರಸಗಳನ್ನು ಬೆರೆಸಲಾಗಿತ್ತು. ಈ ಸುಗಂಧಿ ಮಿಶ್ರಣಕ್ಕೆ ‘ಪತ್ರಾವಲೀ’ ಎಂದು ಹೇಳುತ್ತಿದ್ದರು. (ಆಧಾರ : ‘ಭುಶುಂಡೀ ರಾಮಾಯಣ’ ಮತ್ತು ‘ಶ್ರೀನಾಥಮುನಿ ರಾಮಾಯಣ’)
ದ್ವಾಪರಯುಗದಲ್ಲಿಯೂ ಸಿಂಗಾರಕ್ಕಾಗಿ ‘ಪತ್ರಾವಲೀ’ಯನ್ನು ಉಪಯೋಗಿಸಲಾಗುತ್ತಿತ್ತು. ‘ತೋಕ’ ಎಂಬ ಹೆಸರಿನ ಶ್ರೀಕೃಷ್ಣನ ಮಿತ್ರನು ‘ಪತ್ರಾವಲೀ’ಯಿಂದ ಶ್ರೀಕೃಷ್ಣ ನನ್ನು ಸಿಂಗರಿಸುತ್ತಿದ್ದನು’ ಎಂದು ‘ಗರ್ಗಸಂಹಿತೆ’, ‘ಶ್ರೀಮದ್ಭಾಗವತ’, ‘ಶ್ರೀಕೃಷ್ಣಕರ್ಣಾಮೃತ’ ಮುಂತಾದ ಶ್ರೀಕೃಷ್ಣನ ಬಗೆಗಿನ ಪ್ರಮುಖ ಗ್ರಂಥಗಳಲ್ಲಿ ಉಲ್ಲೇಖಿಸಿರುವುದು ಕಂಡುಬರುತ್ತದೆ. ಆ ಸಮಯದಲ್ಲಿ ಶ್ರೀಕೃಷ್ಣನ ಗೋವುಗಳನ್ನೂ ‘ಪತ್ರಾವಲಿ’ಯಿಂದ ಸಿಂಗರಿಸಲಾಗುತ್ತಿತ್ತು. ಮದರಂಗಿ ಕೇವಲ ಬಣ್ಣವಲ್ಲ ಅದು ಸಂಸ್ಕೃತಿಯ ಕೈಗನ್ನಡಿ ಎಂದು ಚೈತ್ರಾ ವಿವರಿಸಿದ್ದಾರೆ.
Discussion about this post