• Home
  • About Us
  • Contact Us
  • Terms of Use
  • Privacy Policy
Tuesday, June 30, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Aaraga Gyanendra: ಗಡಿ ಭಾಗದ ತಂಟೆಕೋರರಿಗೆ ಬಿಸಿಮುಟ್ಟಿಸಿ ಸರಿ ದಾರಿಗೆ ತರಬೇಕಿದೆ

ಗೃಹ ಸಚಿವ ಆರಗ ಜ್ಞಾನೇಂದ್ರ

Shri News Desk by Shri News Desk
Nov 1, 2021, 06:00 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು : ಕನ್ನಡದ ನೆಲದಲ್ಲೇ ಕನ್ನಡವವನ್ನೇ ಹೀಗಳಿಯುವ ಭಾಷಾ ವಿರೋಧಿಗಳಿಗೆ, ಗಡಿಭಾಗದ ತಂಟೆಕೋರರು, ಗಡಿಯೊಳಗಿನ ಪರಭಾಷಾ ವ್ಯಾಮೋಹಿಗಳಿಗೆ ತಕ್ಕ ಬಿಸಿ ಮುಟ್ಟಿಸಿ ಸರಿ ದಾರಿಗೆ ತರಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದರು.

ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ೬೬ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟç ಧ್ವಜಾರೋಹಣ ಕಾರ್ಯಕ್ರವನ್ನು ನೆರವೇರಿಸಿ ಅವರು ಮಾತನಾಡಿದರು.

ಕನ್ನಡ ಜಗದಗಲ ವಿಸ್ತರಿಸಿಕೊಳ್ಳಬೇಕೆಂಬ ಮಹದಾಸೆಯು ನಿಜವಾಗಲೆಂದು ಹಾರೈಸುವ ಹೊತ್ತಿನಲ್ಲಿ ಕನ್ನಡ ಭಾಷೆ, ನೆಲ-ಜಲದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ. ಮನುಷ್ಯ ಮನುಷ್ಯರ ನಡುವೆ ಭಾವದ ಬೆಸುಗೆ ಬೆಸೆಯುವ ಭಾಷೆ ನಮ್ಮೆಲ್ಲರ ಜೀವ ಭಾವವಾಗಬೇಕು ಎಂದರು.

ಎರಡೂವರೆ ಸಾವಿರ ವರ್ಷಗಳ ಘನ ಇತಿಹಾಸದ ಹೆಗ್ಗಳಿಕೆಯನ್ನು ಹೊಂದಿರುವ ಕನ್ನಡಕ್ಕೆ ‘ ಶಾಸ್ತಿçÃಯ ಭಾಷೆ ‘ ಎನ್ನುವ ಗೌರವವೂ ಸಿಕ್ಕಿದೆ. ಆದರೆ ಭಾಷೆ ನಿರಂತರವಾಗಿ ಬಳಕೆಯಾಗುತ್ತಿದ್ದರೆ ಮಾತ್ರವೆ. ಅದರ ಸೊಬಗು, ಸೌಂದರ್ಯ, ಅದರ ಅಭಿಮಾನಗಳು ಹೆಚ್ಚಾಗುವುದು, ಯಾವುದೇ ಕಾರಣಕ್ಕೂ ಭಾಷೆಯನ್ನು ಉದಾಸೀನ ಮಾಡಿದರೆ ಆ ಭಾಷೆ ಸೊರಗಿ ಕ್ರಮೇಣ ಕಣ್ಮರೆಯ ಆಗಿ ಹೋಗುತ್ತದೆ ಎಂದು ಸೂಚಿಸಿದರು.

ಗಡಿಭಾಗದ ತಂಟೆಕೋರರು, ಗಡಿಯೊಳಗಿನ ಪರಭಾಷಾ ವ್ಯಾಮೋಹಿಗಳು, ಕನ್ನಡ ನೆಲದಲ್ಲೇ ಕನ್ನಡವನ್ನು ಹೀಗಳೆಯುವ ಭಾಷಾ ವಿರೋಧಿಗಳಿಗೆ ಬಿಸಿ ಮುಟ್ಟಿಸಿ ಸರಿದಾರಿಗೆ ತರಬೇಕಿದೆ. ನಾಡಿನ ನೆಲ, ಜಲ ಭಾಷೆ, ಗಡಿಯ ತಂಟೆಗೆ ಯಾರೇ ಬಂದರೂ ಅವರಿಗೆ ತಕ್ಕ ಪಾಠ ಕಲಿಸಿಯೇ ತೀರಬೇಕು, ಕನ್ನಡಿಗರ ಔದಾರ್ಯವನ್ನು ದುರುಪಯೋಗ ಮಾಡಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು ಎಂದು ಕರೆ ನೀಡಿದರು.

ತಾಯಿ ಭುವನೇಶ್ವರಿಯನ್ನು ಕರುನಾಡ ದೇವಿಯಾಗಿ ಆರಾಧಿಸಿ ಕೊಂಡು ಬರುತ್ತಿದ್ದೇವೆ, ನಾವು ಕನ್ನಡಿಗರಿಗೆ ಕನ್ನಡ ಎಂದರೆ ಅದು, ಬರಿ ನುಡಿ ಅಲ್ಲ ಅದು ಜೀವ, ಭಾವ, ಉಸಿರು. ಕವಿ ಚನ್ನವೀರಕರಣವಿಯವರ ಆಶಯದಂತೆ ನಮ್ಮ ಕನ್ನಡ ಬೆಳಗಲಿ, ಕನ್ನಡ ಉಳಿಯಲಿ, ಕನ್ನಡ ಎಂದೆAದಿಗೂ ಚಿರಾಯುವಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಕಳೆದ ಒಂದೂವರೆ ವರ್ಷಗಳಿಂದ ಕೊರೋನಾ ರೋಗಾಣು ಜಗತ್ತನ್ನೇ ನಿರಂತರವಾಗಿ ಕಾಡುತ್ತಿರುವ ದಾರುಣ ಸನ್ನಿವೇಶ ಅಂತ್ಯವಾಗುವ ಸನ್ನಿಹಿತ ಬಂದಿದೆ. ಜಗತ್ತಿನ ಆರೋಗ್ಯ ಮರಳಿ ಬರಲಿ, ಒಳಿತಿನ ದಿನಗಳನ್ನು ದಯಪಾಲಿಸಲು ಅಂತಾ ತಾಯಿ ಭುವನೇಶ್ವರಿಯನ್ನು ಪ್ರಾರ್ಥಿಸಿದರು.

ಕನ್ನಡ ಮಾತನಾಡುವ ಜನರೆಲ್ಲಾ ಒಂದುಗೂಡಲು, ಹರಿದು ಹಂಚಿ ಹೋಗಿದ್ದ ಕನ್ನಡ ನಾಡನ್ನು ಒಂದು ಮಾಡಲು ಕರ್ನಾಟಕದ ಕುಲಪುರೋಹಿತರಾದ ಆಲೂರು ವೆಂಕಟರಾಯರ ಜೊತೆಗೂಡಿ ಅಸಂಖ್ಯಾತ ಕನ್ನಡಿಗರು, ಕನ್ನಡಾಭಿಮಾನಿಗಳು ಮಾಡಿದ ಹೋರಾಟದ ಫಲ ಇಂದು ನಾವು ರಾಜ್ಯೋತ್ಸವವೆಂಬ ಸಡಗರವನ್ನು ಆಚರಿಸಲು ಕಾರಣವಾಗಿದೆ. ಮಹಾಕಾವ್ಯಗಳ ರಚನೆಗೆ ಸಂಸ್ಕೃತವನ್ನು ಬಿಟ್ಟು ಕನ್ನಡವನ್ನು ಆಯ್ದುಕೊಂಡ ಅನೇಕ ಕವಿಗಳು, ಜನಪದ ಸಾಹಿತ್ಯವಂತೂ ಕನ್ನಡ ಪರಂಪರೆಯ ಅಮೂಲ್ಯ ಆಸ್ತಿ ಹೀಗೆ ಜನವಾಣಿ ಬೇರು, ಕವಿವಾಣಿ ಹೂವಾಗಿ ಅರಳಿದ ಕನ್ನಡ ಲಿಪಿ ಎಂತಹ ಸುಂದರ ಲಿಪಿ ವಿಶ್ವ ಲಿಪಿಗಳ ರಾಣಿ’ ಎಂದು ಆಚಾರ್ಯ ವಿನೋಬಾ ಭಾವೆಯವರಿಂದ ಕರೆಸಿಕೊಂಡ ಅಪೂರ್ವತೆಯ ಲಿಪಿ ನಮ್ಮ ಕನ್ನಡ ಲಿಪಿ ಎಂದು ಹೇಳಿದರು.

ಕನ್ನಡ ಪ್ರಜೆಗಳು ಕನ್ನಡದಲ್ಲೇ ನಾಡಿನ ಜವಾಬ್ದಾರಿಯುತ ಮಾತನಾಡುತ್ತೇವೆ, ಕನ್ನಡದಲ್ಲೇ ಬರೆಯುತ್ತೇವೆ, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇವೆ, ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುತ್ತೇವೆ , ಕನ್ನಡ ನಾಡು , ನುಡಿ , ಸಂಸ್ಕೃತಿ ಹಾಗೂ ಪರಂಪರೆ ಉಳಿಸಲು ಕಟಿಬದ್ಧರಾಗುತ್ತೇವೆ’ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಈ ಬಾರಿಯ ಕನ್ನಡ ರಾಜ್ಯೋತ್ಸವ ಕನ್ನಡದ ನಿತ್ಯೋತ್ಸವವೇ ಸರಿ ಎಂದರು.

ಕನ್ನಡದ ಗೇಯತೆ ಮತ್ತು ಸಿರಿವಂತಿಕೆಯನ್ನು ಬೆಳಗಿ ‘ಕೀರ್ತಿಶೇಷ’ ರಾದವರನ್ನು ನೆನೆಯುವುದರ ಜೊತೆಗೆ ನಾಡಿಗೆ ಅವರು ಕೊಟ್ಟ ಕೊಡುಗೆ , ಜೀವನಾದರ್ಶವನ್ನು ಮುಂದಿನ ತಲೆಮಾರಿಗೆ ದಾಟಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ಕನ್ನಡ ಭಾಷೆ ಕರ್ನಾಟಕದಲ್ಲಿ ಸಾರ್ವಭೌಮತ್ವವನ್ನು ಪಡೆಯಬೇಕಾದರೆ ಸರ್ವ ಕನ್ನಡಿಗರ ಸತ್‌ಸಂಕಲ್ಪ ಸರ್ಕಾರದ ಹಂಬಲಕ್ಕೆ ಜೊತೆಗೂಡಬೇಕಾಗುತ್ತದೆ. ಹಾಗಾದಾಗ ಮಾತ್ರ ಕನ್ನಡದ ಮತ್ತೊಂದು ಪರ್ವಕಾಲವನ್ನು ನಾವು ಆರಂಭಿಸಲು ಸಾಧ್ಯವಾಗುತ್ತದೆ ಎಂದರು.

ಆಧುನಿಕ ತಂತ್ರಜ್ಞಾನ ಬದಲಾದ ಸಾಮಾಜಿಕ ಚಿತ್ರಣ, ಪರಭಾಷೆಗಳ ಭೋರ್ಗರೆತದ ಮಧ್ಯೆ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಿದೆ. ಈ ನಾಡು ನಮ್ಮದು, ಈ ಭೂಮಿ ನಮ್ಮದು ಎಂಬ ಅಭಿಮಾನವನ್ನು ಪ್ರತಿಯೊಬ್ಬರಲ್ಲೂ ಉಕ್ಕಿಸಲೇಬೇಕಿದೆ ಎಂದರು.

ಭಾಷಣ ಆರಂಭಕ್ಕೂ ಮುನ್ನ ಕನ್ನಡ ಚಲನಚಿತ್ರರಂಗದ ಯುವನಟರಾದ ಮತ್ತು ಯುವ ಜನತೆಗೆ ಸ್ಫೂರ್ತಿಯಾಗಿದ್ದ ರಾಷ್ಟçಪ್ರಶಸ್ತಿ ಪುರಸ್ಕೃತರಾದ ಜಿಲ್ಲೆಯ ನಟ ಸಂಚಾರಿ ವಿಜಯ್ ಮತ್ತು ಜಿಲ್ಲೆಯ ಅಳಿಯನಾದ ಪುನೀತ್ ರಾಜ್‌ಕುಮಾರ್. ಅವರ ಅಕಾಲಿಕ ಮರಣವು ಕನ್ನಡ ಜನತೆಗೆ ಹೃದಯ ಸ್ಪರ್ಶಿ ಆಘಾತವನ್ನು ಉಂಟು ಮಾಡಿದೆ ಅಂತಾ ಸ್ಮರಿಸಿ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದರು.

ಈ ಸಂದರ್ಭದಲ್ಲಿ, ವಿಧಾನ ಪರಿಷತ್ತಿನ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕ ಸಿ.ಟಿ.ರವಿ, ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೆಗೌಡ, ಜಿಲ್ಲಾಧಿಕಾರಿ ಕೆ.ಎನ್ ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್. ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪ, ಉಪ ವಿಭಾಗಾಧಿಕಾರಿ ಡಾ.ಹೆಚ್.ಎಲ್ ನಾಗರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: Aaraga Gyanendra
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In