• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕೃಷಿ

ಕೃಷಿ ಟ್ರೇಡರ್ಸ್‌ಗಳಿಗೆ ಸಾಲದ ನೆರವು ಒದಗಿಸಲು ಬಂದಿದೆ ‘ಅಗ್ರಿ ಫೈ’ !

ದೊಡ್ಡ ಕಂಪನಿಗಳಲ್ಲಿ ಉದ್ಯೋಗ ಮಾಡುತ್ತಾ ತಿಂಗಳ ವೇತನ ಪಡೆಯುವವರಿಗೆ ಬ್ಯಾಂಕ್‌ಗಳು ನಾ ಮುಂದು ತಾ ಮುಂದು ಎಂದು ಕ್ರೆಡಿಟ್ ಕಾರ್ಡ್, ಸಾಲಸೌಲಭ್ಯ ನೀಡುತ್ತವೆ. ಆದರೆ, ದೇಶದ ಬೆನ್ನೆಲುಬು ಎನಿಸಿಕೊಂಡಿರುವ ರೈತನಿಗೆ ಸಾಲ ಎಂಬುದು ಸುಲಭದ ಮಾತಲ್ಲ.

Shri News Desk by Shri News Desk
Dec 29, 2021, 02:29 pm IST
in ಕೃಷಿ, ವಾಣಿಜ್ಯ
KrashiKatha

ಕೃಷಿ ಖಾತಾ ಆಪ್‌ನ ಚಿತ್ರ

Share on FacebookShare on TwitterTelegram

ಬೆಂಗಳೂರು: ಕೃಷಿಕನ ಸಂಕಷ್ಟಗಳು ಒಂದೆರಡಲ್ಲ. ಸರಿಯಾದ ಸಮಯಕ್ಕೆ ಮಳೆ ಬರುವುದಿಲ್ಲ, ಒಂದು ವೇಳೆ ಮಳೆ ಬಂದರೆ ಬೀಜ ಮತ್ತು ರಸಗೊಬ್ಬರ ಸಿಗುವುದಿಲ್ಲ. ಎಷ್ಟೋ ಬಾರಿ ಹಣಕಾಸಿನ ಮುಗ್ಗಟ್ಟಿನಿಂದಲೇ ತಡವಾಗಿ ಬಿತ್ತನೆ ಮಾಡಿ ಬೆಳೆ ನಷ್ಟದಂತಹ ಸಮಸ್ಯೆಗಳಿಗೆ ಒಳಗಾಗಿ ಸಾಲದ ಸುಳಿಯಲ್ಲಿ ಸಿಲುಕುತ್ತಾನೆ. ಗ್ರಾಮೀಣ ಭಾಗದ ರೈತರು ಈಗಲೂ ತಮಗೆ ಸಾಲ ಸೌಲಭ್ಯ ಬೇಕು ಎಂದರೆ ಬ್ಯಾಂಕ್‌ಗಳಿಗಿಂತ ಹೆಚ್ಚಾಗಿ ಬೀಜ, ರಸಗೊಬ್ಬರ ಮಾರಾಟ ಮಾಡುವ ಕೃಷಿ ವ್ಯಾಪಾರಸ್ಥರನ್ನೇ ಅವಲಂಬಿಸಿದ್ದಾರೆ.

ಎಪಿಎಂಸಿ ಮಾರುಕಟ್ಟೆಗಳು, ಗಂಜ್‌ಗಳಲ್ಲಿ ಇರುವಂತಹ ಇಂತಹ ಕೃಷಿ ವ್ಯಾಪಾರಸ್ಥರು ಸೀಮಿತ ರೈತರಿಗೆ ಆ ವರ್ಷಕ್ಕೆ ಬೇಕಾದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಒದಗಿಸುತ್ತಾರೆ. ವರ್ಷದ ಬೆಳೆ ಬಂದ ನಂತರ ಅದನ್ನು ಅವರ ಬಳಿಯೇ ಮರಾಟ ಮಾಡಬೇಕು. ಹಿಂದೆ ತಾವು ನೀಡಿದ ಸಾಲವನ್ನು ಮರುಪಾವತಿ ಮಾಡಿಕೊಂಡು ಬಾಕಿ ಹಣ ರೈತನಿಗೆ ಕೊಡುತ್ತಾರೆ. ಇದು ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಪದ್ಧತಿ, ಹೆಚ್ಚಿನ ಕಡೆ ರೈತರು ಇದೇ ವ್ಯವಸ್ಥೆಯನ್ನು ಈಗಲೂ ಅವಲಂಬಿಸಿದ್ದಾರೆ.

ಈ ರೀತಿಯ ಕೃಷಿ ವ್ಯಾಪಾರಸ್ಥರೂ ಸಹ ಸೀಮಿತವಾಗಿಯೇ ತಮ್ಮ ವ್ಯವಹಾರ ನಡೆಸುತ್ತಾರೆ. ಅವರಲ್ಲಿರುವ ಸೀಮಿತ ಹಣಕಾಸು ವ್ಯವಸ್ಥೆಯಡಿ ಕೆಲವೇ ಕೆಲವು ರೈತರೊಂದಿಗೆ ವ್ಯವಹಾರ ನಡೆಸುತ್ತಾರೆ. ಇಂತಹ ಕೃಷಿ ವ್ಯಾಪಾರಸ್ಥರನ್ನು ಗುರುತಿಸಿ ಅವರ ಸಿಬಿಲ್ ಸ್ಕೋರ್ ಹೆಚ್ಚಿಸುವ ಮೂಲಕ, ಸಾಲ ಸೌಲಭ್ಯದ ನೆರವು ಒದಗಿಸಿ ಆ ಮೂಲಕ ರೈತರಿಗೆ ಸಕಾಲಕ್ಕೆ ಎಲ್ಲ ನೆರವೂ ಸಿಗುವಂತಹ ಉದ್ದೇಶದೊಂದಿಗೆ ‘ಅಗ್ರಿಫೈ’ ಸ್ಟಾರ್ಟಪ್‌ ಕಾರ್ಯ ಆರಂಭಿಸಿದೆ. ಈಗಾಗಲೇ ಹಲವು ಜಿಲ್ಲೆಗಳ ರೈತರು ಅಗ್ರಿಫೈ ಮೂಲಕ ಸಾಲಸೌಲಭ್ಯ ಪಡೆದಿದ್ದಾರೆ.

ಏನಿದು ಅಗ್ರಿಫೈ

 

Agrifi credit model
ಅಗ್ರಿಫೈ ಕ್ರೆಡಿಟ್‌ ಮಾಡೆಲ್‌ ಹೇಗೆ ಕೆಲಸ ಮಾಡುತ್ತದೆ ಎನ್ನುವುದರ ಚಿತ್ರ

ಸ್ಟಾರ್ಟಪ್ ಎಂದರೆ ಹೆಚ್ಚಾಗಿ ತಂತ್ರಜ್ಞಾನ ಆಧಾರಿತವಾಗಿ ಇರುವುದು ಸಾಮಾನ್ಯ. ಆದರೆ, ಕೃಷಿ ತಂತ್ರಜ್ಞಾನ ಕ್ಷೇತ್ರದಲ್ಲಿಯೇ ಕೆಲಸ ಮಾಡುತ್ತಿದ್ದಂತಹ ಅಭಿಲಾಷ್ ತಿರುಪತಿ, ಕೆ.ಆರ್. ರಘುಚಂದ್ರ ಮತ್ತು ಮಿತಿಲೇಶ್ ಕುಮಾರ್ ಎಂಬುವವರು ಅಗ್ರಿನ್ನೋವ್ ಟೆಕ್ನಾಲಜೀಸ್ ಪ್ರೈ.ಲಿ. ಎಂಬ ಕಂಪನಿ ಸ್ಥಾಪಿಸಿ ಆ ಮೂಲಕ ‘ಅಗ್ರಿ ಫೈ’ (Agrifi) ಹೆಸರಿನಲ್ಲಿ ಕೃಷಿ ಕ್ಷೇತ್ರದ ಒಟ್ಟಾರೆ ಬೆಳವಣಿಗೆಗಾಗಿ ಸ್ಟಾರ್ಟಪ್ ಯೋಜನೆಗಳನ್ನು ರೂಪಿಸಿದ್ದಾರೆ.

ಅಗ್ರಿ ಫೈ ಮೂಲಕ ಈಗಾಗಲೇ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕೇರಳದಲ್ಲಿ ಕೃಷಿ ಟ್ರೇಡರ್ಸ್‌ಗಳನ್ನು ಹುಡುಕಿ ಅವರಿಗೆ ಸಾಲದ ನೆರವು ಒದಗಿಸುತ್ತದೆ. ರೈತರಿಗೆ ಸಾಲಸೌಲಭ್ಯ ನೀಡುವಂತಹ ವ್ಯಾಪಾರಸ್ಥರಿಗೆ ಸಾಲಸೌಲಭ್ಯ ಒದಗಿಸಿ ಆ ಮೂಲಕ ಹೆಚ್ಚಿನ ರೈತರಿಗೆ ಸಾಲದ ನೆರವು ಒದಗಿಸಬೇಕು ಎಂಬುದು ಅಗ್ರಿಫೈನ ಮುಖ್ಯ ಉದ್ದೇಶ.

ಸಾಲ ಬೇಕೆಂದರೆ ಏನು ಮಾಡಬೇಕು?

ನೀವೂ ಸಹ ಕೃಷಿ ಕ್ಷೇತ್ರದಲ್ಲಿ ಟ್ರೇಡರ್ಸ್ ಆಗಿದ್ದು, ನಿಮಗೂ ಸಾಲಸೌಲಭ್ಯ ದೊರಕಬೇಕು ಎಂಬ ಇಚ್ಛೆ ಇದ್ದರೆ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಕೃಷಿ ಖಾತಾ (Krishi Khata) ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. ಅಲ್ಲಿ ಕೇಳಿರುವ ವಿವರಗಳನ್ನು ಭರ್ತಿ ಮಾಡುವ ಮೂಲಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ಅಗ್ರಿಫೈ ಕಡೆಯಿಂದ ನಿಮ್ಮ ದಾಖಲೆಗಳನ್ನು ಪರಿಶೀಲಿಸಿ ಬ್ಯಾಂಕ್ ಅಥವಾ ಖಾಸಗಿ ಹಣಕಾಸು ಸಂಸ್ಥೆಗಳಿಂದ ನಿಮಗೆ ಸಾಲದ ನೆರವು ಒದಗಿಸಿಕೊಡುತ್ತಾರೆ. ಇನ್ನು ನಿಮ್ಮ ಸಿಬಿಲ್ ಸಂಖ್ಯೆ ಕಡಿಮೆ ಇದ್ದರೂ ಸಹ ನಿಮ್ಮ ವಹಿವಾಟು ಪರಿಗಣಿಸಿ ಸಾಲದ ನೆರವು ಒದಗಿಸಲೂ ಪ್ರಯತ್ನಿಸಲಾಗುತ್ತದೆ.

‘ಕೃಷಿ ವ್ಯಾಪಾರಸ್ಥರು ಅಥವಾ ರೈತರು ಈ ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ಬಳಿಕ ತಮ್ಮ ದೈನಂದಿನ ವಹಿವಾಟನ್ನು ಅದರಲ್ಲಿ ದಾಖಲಿಸಬೇಕು. ಇದಕ್ಕಾಗಿಯೇ ಆ್ಯಪ್‌ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಹೀಗೆ ತಮ್ಮ ವಹಿವಾಟು ದಾಖಲಿಸುವುದರಿಂದ ಸಿಬಿಲ್ ಸ್ಕೋರ್ ಹೆಚ್ಚಿಸಲು ಇದೂ ಸಹ ನೆರವಾಗುತ್ತದೆ. ಕೃಷಿ ವ್ಯಾಪಾರಸ್ಥರು ಹೀಗೆ ಕೃಷಿ ಖಾತಾದಲ್ಲಿ ದಾಖಲಿಸಿರುವ ಅಂಕಿ ಅಂಶಗಳನ್ನು ಗಮನಿಸಿ ಅವರಿಗೆ ವಿಶೇಷ ಸ್ಕೋರ್ ಸಿದ್ಧಪಡಿಸಲಾಗುತ್ತದೆ. ಅವರ ವೈಯಕ್ತಿಕ ಸಿಬಿಲ್ ಮತ್ತು ಪ್ರತಿನಿತ್ಯದ ವಹಿವಾಟಿನ ಸ್ಕೋರ್ ಎರಡನ್ನೂ ಪರಿಗಣಿಸಿ ಅಗ್ರಿಫೈ ಸಂಸ್ಥೆಯು ವ್ಯಾಪಾರಸ್ಥರ ಪರವಾಗಿ ಬ್ಯಾಂಕ್ ಅಥವಾ ಖಾಸಗಿ ಹಣಕಾಸು ಸಂಸ್ಥೆಗಳ ಮುಂದೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿ ಸಾಲ ಒದಗಿಸಲು ಸಹಾಯ ಮಾಡುತ್ತಾರೆ. ಆ ಮೂಲಕ ಸುಲಭವಾಗಿ ಸಾಲದ ನೆರವು ಒದಗಿಸಬಹುದು’ ಎನ್ನುತ್ತಾರೆ ಅಗ್ರಿಫೈ ಸ್ಟಾರ್ಟ್‌ಅಪ್‌ನ ಮಾತೃ ಸಂಸ್ಥೆ ಅಗ್ರಿನ್ನೋವ್ ಟೆಕ್ನಾಲಜೀಸ್ ಪ್ರೈ.ಲಿ. ಸಹ ಸ್ಥಾಪಕ ಕೆ.ಆರ್. ರಘುಚಂದ್ರ.

ಸದ್ಯ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸುತ್ತಿರುವವರು ಈ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಸಾಲಕ್ಕಾಗಿಯೂ ಅರ್ಜಿ ಸಲ್ಲಿಸಿದ್ದಾರೆ. ನಮ್ಮ ಸಿಬ್ಬಂದಿ ಅವರ ವಹಿವಾಟು ಬಗ್ಗೆ ವರದಿ ತಯಾರಿಸಿ ಸಾಲ ಕೊಡಿಸಲು ನೆರವು ನೀಡುತ್ತಿದ್ದಾರೆ. ಇಡೀ ದೇಶದಲ್ಲಿ ಒಟ್ಟಾರೆ ಐದು ಮಿಲಿಯನ್ ವ್ಯಾಪಾರಸ್ಥರನ್ನು ಈ ವ್ಯವಸ್ಥೆಯಡಿ ತರುವ ಉದ್ದೇಶ ಹೊಂದಲಾಗಿದೆ ಎಂದು ರಘುಚಂದ್ರ ವಿವರಿಸಿದರು.

ನಿತ್ಯ ಕೃಷಿ ಮಾಹಿತಿ

‘ಕೃಷಿ ಖಾತಾ ಆ್ಯಪ್ ಮೂಲಕ ರೈತರಿಗೆ ಮತ್ತು ಟ್ರೇಡರ್ಸ್‌ಗಳಿಗೆ ಕೇವಲ ಸಾಲದ ನೆರವು ನೀಡುವುದಷ್ಟೇ ಅಲ್ಲದೆ, ರೈತರ ಅಗತ್ಯಕ್ಕೆ ತಕ್ಕಂತೆ ದೈನಂದಿನ ಮತ್ತು ತಾಂತ್ರಿಕ ಮಾಹಿತಿಗಳನ್ನೂ ಒದಗಿಸಲಾಗುವುದು. ಯಾವುದೇ ಜಿಲ್ಲೆ ಅಥವಾ ಹೋಬಳಿಯ ರೈತ ತನ್ನ ಜಮೀನು ಮತ್ತು ತಾನು ಬೆಳೆಯುವ ಬೆಳೆಯ ವಿವರವನ್ನು ದಾಖಲಿಸಿದರೆ ಅಲ್ಲಿ ಮಳೆ ಯಾವಾಗ ಬರುತ್ತದೆ, ಈ ವರ್ಷ ಯಾವ ಬೆಳೆ ಹೇಗೆ ಇಳುವರಿ ಕೊಡಬಹುದು, ಯಾವ ಬೆಳೆಗೆ ಮಾರುಕಟ್ಟೆಯ ದರ ಎಷ್ಟಿರಬಹುದು, ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಬೇಡಿಕೆ ಸೃಷ್ಟಿಸುವಂತ ಧಾನ್ಯ ಅಥವಾ ತೋಟಗಾರಿಕಾ ಬೆಳೆ ಯಾವವು, ಬೆಳೆಗೆ ತಗುಲಬಹುದಾದ ರೋಗದ ಮಾಹಿತಿ ಮತ್ತು ಅದಕ್ಕೆ ಪರಿಹಾರ ಹೀಗೆ ಹತ್ತು ಹಲವು ಪ್ರಯೋಜನಗಳನ್ನು ರೈತರೂ ಪಡೆದುಕೊಳ್ಳಬಹುದು’ ಅಗ್ರಿಫೈ ಸ್ಥಾಪಕ ಅಭಿಲಾಷ್ ತಿರುಪತಿ ಎಂದು ವಿವರಿಸಿದರು.

‘ರೈತ ವ್ಯಾಪಾರಸ್ಥರಿಗೆ ಸಾಲದ ನೆರವು ಒದಗಿಸವಂತಹ ಯೋಜನೆಯನ್ನು ಸದ್ಯ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಪ್ರಾರಂಭಿಸಲಾಗಿದೆ. ಈಗಾಗಲೇ ಕೊಪ್ಪಳ, ಬಳ್ಳಾರಿ, ಗದಗ ಮತ್ತು ಹಾವೇರಿ ಜಿಲ್ಲೆಯಲ್ಲಿ ಕೆಲವರು ಇದರ ಉಪಯೋಗ ಪಡೆದಿದ್ದಾರೆ. ಇಡೀ ದೇಶದಲ್ಲಿ ಒಟ್ಟಾರೆ ಐದು ಮಿಲಿಯನ್ ವ್ಯಾಪಾರಸ್ಥರನ್ನು ಈ ವ್ಯವಸ್ಥೆಯಡಿ ತರುವ ಉದ್ದೇಶ ಹೊಂದಲಾಗಿದೆ’ ಎಂದು ಮತ್ತೋರ್ವ ಸಹ ಸ್ಥಾಪಕ ಮಿತಿಲೇಶ್ ಕುಮಾರ್ ಹೇಳಿದರು.

Agrifi App to lend money for Agriculture Traders

ಇದನ್ನೂ ಓದಿ: Modern agriculture: ಆಧುನಿಕ ಕೃಷಿಯ ಪರಿಣಾಮ ಕೃಷಿ ಬಿಕ್ಕಟ್ಟುಗಳು ಆರಂಭ

 

Tags: AgricultureCommerce newsTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Congress Demanding for Dam in Mekedatu

Mekedatu Explainer: ಏನಿದು ಮೇಕೆದಾಟು ಅಣೆಕಟ್ಟು ಯೋಜನೆ? ವಿವಾದ ಏಕೆ? ಇಲ್ಲಿದೆ ಸಮಗ್ರ ಮಾಹಿತಿ

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In