ಚಿಕ್ಕಮಗಳೂರು: ದೇಶದಲ್ಲಿ ಬದಲಾವಣೆಯ ಕೂಗು ಹೆಚ್ಚಿದ್ದು ಆ ನಿಟ್ಟಿನಲ್ಲಿ ಕ್ಷೇತ್ರದ ಮತದಾರ ಬಂಧುಗಳು ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವಂತೆ ಕಾಂಗ್ರೆಸ್ ಮುಖಂಡ ಮಧುಬಂಗಾರಪ್ಪ ವಿನಂತಿಸಿಕೊಂಡರು.
ನಗರದ ೨೬ನೇ ವಾರ್ಡ್ನ ಅಭ್ಯರ್ಥಿ ಎಂ.ಶ್ರೀನಿವಾಸ್ ಪರವಾಗಿ ಮತಯಾಚನೆ ಮಾಡಿ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ ಜಾತಿ, ಧರ್ಮದ ಮೇಲೆ ಅಧಿಕಾರ ನಡೆಸುತ್ತಿದೆ ವಿನಃ ಅಭಿವೃದ್ಧಿಯ ಮೇಲೆ ಮತ ಕೇಳುತ್ತಿಲ್ಲ, ದೇಶದಲ್ಲಿ ಬದಲಾವಣೆಯ ಕೂಗು ಹೆಚ್ಚಿದ್ದು ಆ ನಿಟ್ಟಿನಲ್ಲಿ ನಗರಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಒಂದು ಅವಕಾಶ ಕಲ್ಪಿಸುವಂತೆ ಕೇಳಿಕೊಂಡರು.
ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಬಡವರಿಗಾಗಿ ಅನ್ನಭಾಗ್ಯ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಅಂದಿನ ಕಾರ್ಯಕ್ರಮಗಳನ್ನು ಬಿಜೆಪಿ ಅಲ್ಲಗಳೆದಿತ್ತು, ಇದೀಗ ಕೋವಿಡ್ ಲಾಕ್ಡೌನ್ ಅದೇ ಯೋಜನೆಗಳು ಬಡವರಿಗೆ ನೆರವಾಗಿವೆ ಅದನ್ನು ಬಿಜೆಪಿ ಅರಿತುಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಕಸ್ತೂರಿ ರಂಗನ್ ವರದಿ ಸೇರಿದಂತೆ ಅರಣ್ಯಕ್ಕೆ ಸಂಬಂಧಿಸಿದ ಹಲವು ಜ್ವಲಂತ ಸಮಸ್ಯೆಗಳಿವೆ ಅವುಗಳಿಗೆ ಇದುವರೆಗೂ ಪರಿಹಾರ ಸಿಗದಿರುವುದು ವಿಷಾಧನೀಯ. ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಕಾಂಗ್ರೆಸ್ ನುಡಿದಂತೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಮಾಜಿ ಸಚಿವೆ ಮೋಟಮ್ಮ ಮಾತನಾಡಿ ಬಿಜೆಪಿ ದೇಶದ ಭ್ರಷ್ಟಾಚಾರದಲ್ಲಿ ನಂಬರ್ ಒನ್. ಕಾಮಗಾರಿಯಲ್ಲಿ ಪರ್ಸೆಟೇಂಜ್ ಪಡೆಯುವ ಮೂಲಕ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯುಂಟು ಮಾಡಿದೆ. ಕಾಂಗ್ರೆಸ್ನ ಹೀಯಾಳಿಸುವ ಮೂಲಕ ಆಕ್ಷೇಪಣೆ ವ್ಯಕ್ತಪಡಿಸುವುದು ಬಿಜೆಪಿ ಕೆಲಸ, ಭೇಟಿ ಬಚಾವ್, ಭೇಟಿ ಪಡಾವ್ ಎನ್ನುವ ನರೇಂದ್ರ ಮೋದಿಯವರು ದೇಶದಲ್ಲಿ ಮಹಿಳೆಯರು, ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ,. ಹಿಂಸೆ, ದೌರ್ಜನ್ಯದ ಬಗ್ಗೆ ಯಾವುದೇ ಚಕಾರವೆತ್ತಲ್ಲ ಏಕೆ? ಎಂದು ಪ್ರಶ್ನಿಸಿದರು.
ದೇಶದಲ್ಲಿ ಪೆಟ್ರೋಲ್, ಡಿಸೇಲ್,ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನತೆ ತತ್ತರಿಸಿಹೋಗಿದ್ದಾರೆ, ಕಪ್ಪುಹಣ ದೇಶಕ್ಕೆ ವಾಪಸ್ ತರುತ್ತೇವೆ ಎಂದು ಭರವಸೆ ನೀಡಿದ್ದ ಪ್ರಧಾನಿಗಳು ಇಂದಿಗೂ ವಾಪಸ್ ತರಲು ಆಗಿಲ್ಲ, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ, ದೇಶದಲ್ಲಿ ಬಿಜೆಪಿ ತೊಲಗಲಿ ಎಂದು ಜನರು ಬಯಸುತ್ತಿದ್ದಾರೆ. ಜನರ ಮನಸ್ಸು ಪರಿವರ್ತನೆಯಾದಾಗ ಇದು ಸಾಧ್ಯವಾಗಲಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಮತ ನೀಡುವ ಮೂಲಕ ಇದನ್ನು ಸಕಾರಗೊಳಿಸಲು ಕೇಳಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಶಿಕ್ಷಣ ಸಚಿ ಕಿಮ್ಮನೆ ರತ್ನಾಕರ್, ಮುಖಂಡರಾದ ಬಿ.ಹೆಚ್.ಹರೀಶ್, ಆದರ್ಶ, ಪುಷ್ಪಾ, ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.
Allow Congress
Discussion about this post