ಬೆಂಗಳೂರು: ಕಂದಾಯ ಭೂಮಿಗಳಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡವರು, ಸಕ್ರಮಕ್ಕಾಗಿ ಅರ್ಜಿ ಯಾವಾಗ ಕರೆಯುತ್ತಾರೆ ಎಂಬುದಾಗಿ ಎದುರು ನೋಡುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಅಕ್ರಮವಾಗಿ ಕಂದಾಯ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿಕೊಂಡವರಿಂದ, ಸಕ್ರಮಗೊಳಿಸಲು ಅರ್ಜಿಯನ್ನು ಆಹ್ವಾನಿಸಿದೆ.
ಇದನ್ನೂ ಓದಿ: Rain storm: ಕರ್ನಾಟಕದಲ್ಲಿ ನವೆಂಬರ್ 23ರ ಬಳಿಕ ತಗ್ಗಲಿದೆ ಮಳೆ ಆರ್ಭಟ
ಈ ಕುರಿತಂತೆ ಸರ್ಕಾರದ ಸೂಚನೆ ಮೇರೆಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಪ್ರದೇಶದ ಸರ್ಕಾರಿ ಕಂದಾಯ ಭೂಮಿಗಳಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಂಡಿರುವವರು ಸಕ್ರಮಗೊಳಿಸಿಕೊಳ್ಳೋದಕ್ಕೆ, ಕಂದಾಯ ಇಲಾಖೆಯಿಂದ ಸೂಕ್ತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಆಹ್ವಾನಿಸಿದೆ. ಕಂದಾಯ ಭೂಮಿಗಳಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಂಡವರು ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 31, 2022 ಕೊನೆಯ ದಿನಾಂಕವಾಗಿದೆ.
ಇದನ್ನೂ ಓದಿ: ಜ್ಯೋತಿಷ್ಯ: ಈ ವಾರ ನಿಮ್ಮ ಗ್ರಹಗತಿಗಳು ಹೇಗಿವೆಯೆಂದು ತಿಳಿಯುವ ಕುತೂಹಲವೇ? ವಾರಭವಿಷ್ಯ ನೋಡಿ
ಆದ್ದರಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಚಾರ ನೀಡಿ, ಹೀಗೆ ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಂಡವರಿಂದ ನಮೂನೆ 94ಸಿಸಿಯಲ್ಲಿ ಅರ್ಜಿ ಪಡೆದು, ಅಗತ್ಯ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಸೂಚಿಸಿದೆ. ಇದೇ ಮಾದರಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಗ್ರಾಮೀಣ ಭಾಗದ ಜನರು ನಮೂನೆ 94ಸಿಸಿಯಲ್ಲಿ ಅರ್ಜಿಯನ್ನು ಸಲ್ಲಿಸಿ, ತಾವು ಅಕ್ರಮವಾಗಿ ನಿರ್ಮಿಸಿಕೊಂಡ ಮನೆಯನ್ನು ಸಕ್ರಮಗೊಳಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ: Recruitment in banks: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ನೇಮಕಾತಿ: ಕಾನೂನು ಅಧಿಕಾರಿ, ಕೃಷಿ ಅಧಿಕಾರಿಸಹಿತ 1828 ಹುದ್ದೆ
Discussion about this post