• Home
  • About Us
  • Contact Us
  • Terms of Use
  • Privacy Policy
Monday, June 16, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

Cricket: 2018-20ರ ಅವಧಿಯಲ್ಲಿ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಬಗ್ಗೆ ಗಂಭೀರವಾಗಿ ಆಲೋಚಿಸಿದ್ದೆ: ಅಶ್ವಿನ್‌

ಗಾಯಗಳಿಂದ ನರಳುತ್ತಿದ್ದ ಸಮಯದಲ್ಲಿ ಎಷ್ಟೇ ಶ್ರಮ ಪಟ್ಟರೂ ಯಶಸ್ಸು ಸಿಗದಿದ್ದಾಗ ಜನ ಬೆಂಬಲದ ಕೊರತೆಯೂ ಉಂಟಾಗಿ ನೋವನ್ನು ತಂದಿತ್ತು.

Shri News Desk by Shri News Desk
Dec 21, 2021, 12:03 pm IST
in ಕ್ರಿಕೆಟ್, ಬ್ಯೂಟಿ ಟಿಪ್ಸ್
Cricketer Ravichandran Ashwin

ರವಿಚಂದ್ರನ್‌ ಅಶ್ವಿನ್‌

Share on FacebookShare on TwitterTelegram

ಬೆಂಗಳೂರು: ಆರ್ ಅಶ್ವಿನ್ ಭಾರತೀಯ ಕ್ರಿಕೆಟ್‌ಗೆ ಅತ್ಯದ್ಭುತ ಸೇವೆ ಸಲ್ಲಿಸುತ್ತಿರುವ ಹಾಗೂ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಹೆಸರಾಂತ ಆಲ್‌ರೌಂಡ್‌ ಕ್ರಿಕೆಟ್ ಆಟಗಾರ. ಸ್ಪಿನ್‌ ಮಾಂತ್ರಿಕರಾದ ಅನಿಲ್‌ ಕುಂಬ್ಳೆ ಹಾಗೂ ಹರಭಜನ್‌ ಸಿಂಗ್‌ ತೆರೆಮರೆಗೆ ಸರಿದ ನಂತರ ತಂಡದ ಸ್ಪಿನ್‌ ವಿಭಾಗದ ಚುಕ್ಕಾಣಿ ಹಿಡಿದು ಹಿಂದಿನ ತಲೆಮಾರಿನ ಆಟಗಾರರ ಸಾಧನೆಯನ್ನು ಮುಂದುವರೆಸುತ್ತಿರುವ ಭರವಸೆಯ ಆಟಗಾರ. ಸ್ಪಿನ್ ಬೌಲಿಂಗನಲ್ಲಿ ಮಾತ್ರವಲ್ಲದೇ ಉತ್ತಮ ಬ್ಯಾಟ್ಸ್‌ಮನ್ ಆಗಿಯೂ ಸಹ ಅನೇಕ ಸಂಕಷ್ಟದ ಸಂದರ್ಭಗಳಲ್ಲಿ ತಂಡಕ್ಕೆ ಆಪದ್ಬಾಂಧವನಾಗಿ ನೆರವಾಗಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಸಾಧನೆಯನ್ನೂ ಮಾಡಿದ್ದಾರೆ ಅಶ್ವಿನ್. ಇಲ್ಲಿಯವರೆಗೆ ಟೆಸ್ಟ್‌ ಪಂದ್ಯಗಳಲ್ಲಿ 427 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್‌ ಅನಿಲ್‌ ಕುಂಬ್ಳೆ ಹಾಗೂ ಕಪಿಲ್‌ ದೇವ್‌ರ ನಂತರ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದಿರುವ ಭಾರತದ ಬೌಲರ್ ಎಂಬ ಹೆಗ್ಗಳಿಕೆಯನ್ನೂ ಹೊಂದಿದ್ದಾರೆ. ಕ್ರಿಕೆಟ್‌ನ ಎಲ್ಲಾ ಮಾದರಿಗಳಲ್ಲೂ ಅದ್ಭುತ ಸಾಧನೆ ಮಾಡಿದ್ದಾರೆ ಅಶ್ವಿನ್‌.

ಕ್ರಿಕೆಟ್‌ ಆಟವನ್ನು ಕೇವಲ ಶಾರೀರಿಕವಾಗಿ ಆಡದೇ ಅದನ್ನು ಬುದ್ಧಿಶಕ್ತಿಯಿಂದಲೂ ಆಡಬೇಕಾಗುತ್ತದೆ ಎಂಬುದನ್ನು ತೋರಿಸಿಕೊಟ್ಟ ಕೆಲವೇ ಬುದ್ಧಿವಂತ ಆಟಗಾರರಲ್ಲಿ ಅಶ್ವಿನ್ ಕೂಡ ಒಬ್ಬರು. ಇಂತಹ ಆಲ್‌ರೌಂಡ್‌ ಸಾಧಕ ಕೆಲವೇ ವರ್ಷಗಳ ಹಿಂದೆ ನಿವೃತ್ತಿಯ ಬಗ್ಗೆ ಗಂಭೀರವಾಗಿ ಆಲೋಚಿಸಿದ್ದರೆಂದರೆ ನೀವು ನಂಬುತ್ತೀರಾ? ಈ ವಿಷಯ ಅವರಿಂದಲೇ ಬಹಿರಂಗವಾಗಿದ್ದು ಕ್ರಿಕೆಟ್‌ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಇತ್ತೀಚೆಗೆ ಪತ್ರಕರ್ತರೊಂದಿಗೆ ಮುಖಾಮುಖಿಯಾಗಿದ್ದ 35ರ ಹರೆಯದ ಅಶ್ವಿನ್ ಇದಕ್ಕೆ ನೀಡಿದ ಕಾರಣವೆಂದರೆ ದೀರ್ಘಕಾಲದಿಂದ ಗಾಯಗಳಿಂದ್ ಬಳಲಿದ್ದು ಹಾಗೂ ಕೆಲವೊಮ್ಮೆ ನಿರೀಕ್ಷಿತ ಸಾಧನೆ ಬರದಿದ್ದಾಗ ಎದುರಾದ ಬೆಂಬಲದ ಕೊರತೆ.

ಅವರೇ ಹೇಳುವಂತೆ, “2018 ಮತ್ತು 2020ರ ಮಧ್ಯದ ಅವಧಿಯಲ್ಲಿ ನಾನು ಕ್ರಿಕಟ್‌ ಆಡುವುದನ್ನು ನಿಲ್ಲಿಸಿಬಿಡಬೇಕೆಂದುಕೊಂಡಿದ್ದೆ. ಇದಕ್ಕೆ ಅನೇಕ ಕಾರಣಗಳಿದ್ದವು. ಎಷ್ಟೇ ಕಠಿಣ ಪರಿಶ್ರಮ ಹಾಕಿದರೂ ಯಶಸ್ಸು ಮರೀಚಿಕೆಯಾಗಿತ್ತು. ನಾನು ಹೆಚ್ಚು-ಹೆಚ್ಚು ಶ್ರಮ ಪಟ್ಟಷ್ಟೂ ಯಶಸ್ಸು ನನ್ನಿಂದ ಅಷ್ಟೇ ದೂರ ಹೋಗುತ್ತಿತ್ತು. ಸ್ನಾಯುಗಳ ಉರಿಯೂತದ ಸಮಸ್ಯೆಯು ಯಾವ ಮಟ್ಟಕ್ಕೆ ಉಲ್ಬಣಗೊಂಡಿತೆಂದರೆ ಆರು ಚೆಂಡುಗಳ ಒಂದು ಓವರ್ ಬೌಲ್‌ ಮಾಡಿದ ನಂತರ ಉಸಿರು ತೆಗೆದುಕೊಳ್ಳಲು ಪರಿತಪಿಸುವಂತಾಗುತ್ತಿತ್ತು ಹಾಗೂ ಇಡೀ ದೇಹದ ತುಂಬಾ ನೋವು ಆವರಿಸುತ್ತಿತ್ತು.  ಇದರಿಂದಾಗಿ ಆಟದಲ್ಲಿ ಮುಂದುವರೆಯಲು ನಾನು ಅನೇಕ ಹೊಂದಾಣಿಕೆಗಳನ್ನು ಮಾಡಿಕೊಳ್ಳಬೇಕಾಗಿ ಬಂದಿತ್ತು. ಅತಿಯಾದ ನೋವು ನನ್ನ ಬೌಲಿಂಗ್ ಸಾಧನೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿತ್ತು. ಬೌಲಿಂಗ್ ಮಾಡುವಾಗ ಹೆಚ್ಚು ಜಿಗಿದು ಬೌಲ್ ಮಾಡಲಾಗುತ್ತಿರಲಿಲ್ಲ. ಆದರೆ ಪರಿಣಾಮಕಾರಿಯಾಗಿ ಚೆಂಡೆಸೆಯಲು ಬೆನ್ನು ಹಾಗೂ ಭುಜಗಳನ್ನು ಹೆಚ್ಚು ಉಪಯೋಗಿಸಬೇಕಾಗುತ್ತಿತ್ತು ಹಾಗೂ ಇದರಿಂದಾಗಿ ಸಮಸ್ಯೆ ಇನ್ನೂ ಉಲ್ಬಣಿಸುತ್ತಿತ್ತು. ಅದೇ ಸಮಯದಲ್ಲಿ ಜನರಿಂದ ನನಗೆ ದೊರೆಯುತ್ತಿದ್ದ ಬೆಂಬಲ ಕಡಿಮೆಯಾಗುತ್ತಿತ್ತು.  ಒಮ್ಮೊಮ್ಮೆ ಜನರು ನನ್ನ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಹಾಗೂ ಮೊದಲಿನಂತೆ ಬೆಂಬಲ ನೀಡುತ್ತಿಲ್ಲ ಎಂದುಕೊಳ್ಳುತ್ತಿದ್ದೆ. ಇಂತಹ ಸಮಯಗಳಲ್ಲಿ ಬಹಳಷ್ಟು ಜನರಿಗೆ ಸಿಕ್ಕಿರುವ ಬೆಂಬಲ ನನಗೇಕೆ ಸಿಗುತ್ತಿಲ್ಲ? ತಂಡಕ್ಕಾಗಿ ನಾನು ಹಲವಾರು ಜಯಗಳನ್ನು ತಂದಿಲ್ಲವೇ? ನನ್ನ ಸಾಧನೆಯಲ್ಲಿ ಕೊರತೆಯಿದೆಯೇ ಎನ್ನುವ ಅನೇಕ ಪ್ರಶ್ನೆಗಳು ನನ್ನನ್ನು ಕಾಡುತ್ತಿದ್ದವು. ಕ್ರಿಕೆಟ್‌ ಬಿಟ್ಟು ಬೇರೆ ಏನನ್ನಾದರೂ ಮಾಡುವ ಬಗ್ಗೆಯೂ ಯೋಚಿಸುತ್ತಿದ್ದೆ.”

ಕ್ರಿಕೆಟ್‌ ಆಡುವುದನ್ನು ಬಿಟ್ಟುಬಿಡುವ ಆಲೋಚನೆ ಅನೇಕ ಬಾರಿ ಬರುತ್ತಿತ್ತು ಎಂದ ಅವರು 2018ರ ಇಂಗ್ಲೆಂಡ್ ಪ್ರವಾಸದ ಸಮಯದಲ್ಲೂ ಇದೇ ಪರಿಸ್ಥಿತಿ ಇತ್ತು ಎಂದರು. ನಂತರದ ಆಸ್ಟ್ರೇಲಿಯಾ ಪ್ರವಾಸದಲ್ಲೂ ತೀವ್ರವಾಗಿ ಗಾಯಗೊಂಡಾಗ ಹೀಗೆಯೇ ಯೋಚಿಸುತ್ತಿದ್ದೆ ಎಂದರು ಅಶ್ವಿನ್. ಈ ವಿಷಯವನ್ನು ನಾನು ನನ್ನ ಪತ್ನಿಯನ್ನು ಬಿಟ್ಟು ಬೇರೆ ಯಾರೊಂದಿಗೂ ಚರ್ಚಿಸುತ್ತಿರಲಿಲ್ಲ ಎಂದ ಅಶ್ವಿನ್, ನನ್ನ ತಂದೆ ಮಾತ್ರ ನಾನು ಮತ್ತೊಮ್ಮೆ ಚುಟುಕು ಕ್ರಿಕೆಟ್‌ ಆಡಿಯೇ ತೀರುತ್ತೇನೆಂದು ಹಾಗೂ ತಾವು ಮರಣಿಸುವ ಮೊದಲು ಅದನ್ನು ನೋಡುವುದಾಗಿ ಅವರು ದೃಢವಾಗಿ ನಂಬಿದ್ದರು ಎಂದು ನೆನಪಿಸಿಕೊಂಡರು.

ಎಂತಹ ಕಠಿಣ ಪರಿಸ್ಥಿತಿಗಳೇ ಎದುರಾದರೂ ಧೈರ್ಯಗೆಡದೇ ಪ್ರಯತ್ನಶೀಲರಾದರೆ ಸಾಧನೆ ಅಸಾಧ್ಯವಲ್ಲ ಎನ್ನುವುದನ್ನು ಇಂತಹ ಸಾಧಕರನ್ನು ನೋಡಿಯೇ ತಿಳಿಯಬೇಕು.

Ashwin says he was planning to leave cricket during 2018-20 due injuries and lack of support from people

ಇದನ್ನೂ ಓದಿ: Cricket: ಟೆಸ್ಟ್‌ ತಂಡದ ಉಪನಾಯಕನ ಪಟ್ಟಕ್ಕೆ ರಾಹುಲ್‌ ಆಯ್ಕೆ ಅತ್ಯಂತ ಸೂಕ್ತ ಹಾಗೂ ಸಮಯೋಚಿತ: ಸಬಾ ಕರೀಮ್‌

ಇದನ್ನೂ ಓದಿ: IND vs SA Test Cricket: ಮುಂದಿನ ಮೂರು ದಿನಗಳ ಅಭ್ಯಾಸ ನಿರ್ಣಾಯಕವೆಂದ ರಾಹುಲ್ ದ್ರಾವಿಡ್

Tags: Indian CricketR AshwinTeam IndiaTOP NEWS
ShareSendTweetShare
Join us on:

Related Posts

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Recipe: ಸ್ಪೆಶಲ್ ಕ್ಯಾಪ್ಸಿಕಂ ರೈಸ್ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In