ಚಿಕ್ಕಮಗಳೂರು: ಸಂವಿಧಾನದ ಮೂಲಕ ದೇಶಕ್ಕೆ ಕೊಡುಗೆ ನೀಡಿರುವ ಡಾ. ಬಿ.ಆರ್.ಅಂಬೇಡ್ಕರ್ ಚಿಂತನೆ ಆದರ್ಶಗಳು ಸದಾ ಕಾಲ ಅಮರವಾಗಲಿವೆ ಎಂದು ನಗರಸಭೆ ಪೌರಾಯುಕ್ತ ಬಸವರಾಜ್ ಹೇಳಿದರು.
ಇದನ್ನೂ ಓದಿ: ಕಟ್ಟಕಡೆಯ ವ್ಯಕ್ತಿಯ ಅಭ್ಯುದಯಕ್ಕಾಗಿ ಹೋರಾಡಿದ ಮಹಾಶಯ ಅಂಬೇಡ್ಕರ್
ನಗರದ ಅಂಬೇಡ್ಕರ್ ಭವನದಲ್ಲಿ ನಗರಸಭೆ ವತಿಯಿಂದ ಆಯೋಜಿಸಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನವನ್ನು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ ಸರ್ವ ಜನಾಂಗದ ಏಳಿಗೆ ನಿಟ್ಟಿನಲ್ಲಿ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿದ್ದಾರೆ, ಮೀಸಲಾತಿ, ಮತದಾನ, ಮೂಲಕ ಮಹಿಳೆಯರು, ಹಿಂದುಗಳಿದವರು, ಶೋಷಿತ ಸಮುದಾಯಕ್ಕೆ ಸಮಾನತೆಯನ್ನು ಕಲ್ಪಿಸುವಲ್ಲಿ ಹೋರಾಟ ನಡೆಸಿದ್ದಾರೆ ಎಂದು ಸ್ಮರಿಸಿದರು.
ಇದನ್ನೂ ಓದಿ: zero: ಪರಿಷತ್ ಸದಸ್ಯರಾಗಿ ಎಂ.ಕೆ. ಪ್ರಾಣೇಶ್ ಕೊಡುಗೆ ಶೂನ್ಯ
ಸಂವಿಧಾನ ರಚನೆ ಮೂಲಕ ಎಲ್ಲಾ ವರ್ಗದ ಜನತೆಗೆ ಸಮಾನ ನ್ಯಾಯ ಒದಗಿಸಿದ್ದಾರೆ. ಬುದ್ದ, ಬಸವಣ್ಣನವರ ಸಮಕಾಲೀನರಾಗಿ ಅವರನ್ನು ಇಂದು ದೇವರಂತೆ ಪೂಜಿಸಲಾಗುತ್ತಿದೆ, ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನೀಡಿರುವ ಕೊಡುಗೆ ಅಪಾರವಾದುದು. ಅವರ ಚಿಂತನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಸಮಾನತೆಯ ಆಶಯಗಳನ್ನು ಈಡೇರಿಸಬೇಕಿದೆ ಎಂದರು.
ಇದನ್ನೂ ಓದಿ: Omikron panic: ಒಮಿಕ್ರಾನ್ ಭೀತಿ: ತಜ್ಞರ ಸಲಹೆಯಂತೆ ಮುಂದುವರಿಯುವೆ ಎಂದ ಸಿಎಂ ಬೊಮ್ಮಾಯಿ
ಅಂಬೇಡ್ಕರ್ ಅವರ ಸ್ಮರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು, ಪ್ರತಿ ದಿನವೂ ಅವರ ಸ್ಮರಣೆ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ್ ಮೂರ್ತಿ, ರಮೇಶ್, ಅಣ್ಣಯ್ಯ, ಸುನೀಲ್, ಶ್ರೀನಿವಾಸ್, ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ: Indian Army: ಭಾರತೀಯ ಸೇನೆಯಲ್ಲಿ ಖಾಲಿಯಿದೆ 1 ಲಕ್ಷಕ್ಕೂ ಅಧಿಕ ಹುದ್ದೆಗಳು
B.R. Ambedkar’s thoughts are always immortal
Discussion about this post