ಚಿಕ್ಕಮಗಳೂರು: ಡಿಸೆಂಬರ್ ೧೭ ರಿಂದ ೧೯ ರವರೆಗೆ ದತ್ತಜಯಂತಿ ಕಾರ್ಯಕ್ರಮ ಆಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಮತ್ತು ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಐ.ಡಿ.ಪೀಠದಲ್ಲಿ ನಡೆಯುವ ದತ್ತಜಯಂತಿ ಕಾರ್ಯಕ್ರಮಕ್ಕೆ ರಾಜ್ಯದ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ಈ ಹಿನ್ನೆಲೆಯಲ್ಲಿ ಮೂಡಿಗೆರೆ, ಆಲ್ದೂರು, ಶೃಂಗೇರಿ ಹಾಗೂ ಬಾಳೆಹೊನ್ನೂರು ಪಟ್ಟಣಗಳಲ್ಲಿ ಶೋಭಾಯಾತ್ರೆ ಕಾರ್ಯಕ್ರಮದ ಹಿನ್ನನಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಡಿಸೆಂಬರ್ ೧೫ ರ ಬೆಳಿಗ್ಗೆ ೬ ಗಂಟೆಯಿಂದ ಡಿಸೆಂಬರ್ ೧೭ ರ ಮಧ್ಯರಾತ್ರಿ ೧೨ ಗಂಟೆಯವರೆಗೆ, ಮೂಡಿಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಡಿಸೆಂಬರ್ ೧೬ ರ ಬೆಳಿಗ್ಗೆ ೬ ಗಂಟೆಯಿಂದ ಡಿ.೧೭ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಹಾಗೂ ಚಿಕ್ಕಮಗಳೂರು ತಾಲ್ಲೂಕು ವ್ಯಾಪ್ತಿ (ಕೆಎಸ್ಬಿಸಿಎಲ್ ಹೊರತುಪಡಿಸಿ) ಡಿಸೆಂಬರ್ ೧೭ ರ ಬೆಳಿಗ್ಗೆ ೬ ಗಂಟೆಯಿಂದ ಡಿ.೧೯ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಎಲ್ಲಾ ನಮೂನೆಯ ಮದ್ಯದಂಗಡಿಗಳನ್ನು (ಸಿವಿಲ್-೨, ೪, ೬ಎ, ೭, ೯, ೧೧, ೧೪ ಎಲ್ಲಾ ತರಹದ)(ಎಎಸ್ಬಿಸಿಎಲ್ ಹೊರತುಪಡಿಸಿ) ಮುಚ್ಚುವಂತೆ ಹಾಗೂ ಮದ್ಯ, ಬೀರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ರವರು ಆದೇಶಿಸಿದ್ದಾರೆ.
Ban on sale of liquor for three days
Discussion about this post