ಚಿಕ್ಕಮಗಳೂರು : ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘಗಳ ಒಕ್ಕೂಟದ ವತಿಯಿಂದ ಬಿಲ್ಲವ, ಆರ್ಯ ಈಡಿಗ ಸೇರಿದಂತೆ ಉಪಪಂಗಡಗಳು ಒಂದಾಗಿ ನವೆಂಬರ್ ೨೧ ರಂದು ಕುವೆಂಪು ಕಲಾಮಂದಿರದಲ್ಲಿ ಸಮಾಜ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ನಾರಾಯಣ ಗುರು ಸಮಾಜ ಸೇವಾ ಸಂಘಗಳ ಒಕ್ಕೂಟದ ಹೆಚ್.ಎಂ. ಸತೀಶ್ ತಿಳಿಸಿದರು.
ಆರ್ಯ ಈಡಿಗ ಮಹಾಸಂಸ್ಥಾನದ ನಿಯೋಜಿತ ಸ್ವಾಮೀಜಿ ಶ್ರೀ ವಿಖ್ಯಾತನಂದ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದ್ದು ಇದರ ಉದ್ದೇಶ ಸಮಾಜವನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಹಾಗೂ ಶೈಕ್ಷಣಿಕವಾಗಿ ಸಂಘಟಿತರಾಗುವಂತೆ ಮಾಡುವುದಾಗಿದೆ ನವೆಂಬರ್ ೨೧ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ಕಲಾಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಶಾಸಕ ಸಿ.ಟಿ ರವಿ ಉದ್ಘಾಟಿಸಲಿದ್ದು, ರಾಜ್ಯ ಆರ್ಯ ಈಡಿಗ ಸಂಘದ ಅಧ್ಯಕ್ಷ ಡಾ. ತಿಮ್ಮೇಗೌಡ, ಜೆ.ಪಿ. ಪ್ರತಿಷ್ಠಾನದ ಅಧ್ಯಕ್ಷ ಜೆ.ಪಿ.ಸುಧಾಕರ್, ಪ್ರಾದೇಶಿಕ ಆರ್ಯ ಈಡಿಗರ ಸಂಘದ ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಬಿಲ್ಲವ ಮಹಾ ಮಂಡಳದ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷ ನವೀನ್ ಚಂದ್ರ ಡಿ ಸುವರ್ಣ, ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷ ವೇದಕುಮಾರ್, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸ್ಥಳೀಯ ಜನಪ್ರತಿನಿಧಿಗಳಾದ ಎಸ್.ಎಲ್.ಭೋಜೇಗೌಡ, ಮಾಜಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ, ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್ಯ ಈಡಿಗ ಸಮಾಜದ ಜಿಲ್ಲಾ ಸಂಚಾಲಕರಾದ ಬಿ. ರಾಜಪ್ಪ, ಬಿಲ್ಲವ ಸಮಾಜದ ಅಧ್ಯಕ್ಷ ರಾಜು, ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘಗಳ ಒಕ್ಕೂಟ ಪ್ರಧಾನ ಕಾರ್ಯದರ್ಶಿ ವಾಸುಪೂಜಾರಿ, ಕೆ. ನಾರಾಯಣ, ಅಶೋಕ್, ಗಣೇಶ್ ಇದ್ದರು.
Discussion about this post