ಚಿಕ್ಕಮಗಳೂರು: ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿಜೆಪಿಯ ನಗರಸಭೆ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನಗರಸಭೆ ಚುನಾವಣೆಯಲ್ಲಿ ಪಕ್ಷದಿಂದ ೩೫ ವಾರ್ಡ್ಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಹಳೇ ಬೇರು ಹೊಸ ಚಿಗುರು ಎಂಬಂತೆ ದಲಿತರು, ಮಹಿಳೆಯರು, ಹಿಂದುಳಿದ, ಸಾಮಾನ್ಯ ವರ್ಗ, ಸೇರಿದಂತೆ ಎಲ್ಲ ವರ್ಗದಿಂದಲೂ ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಿ ಪಕ್ಷದಿಂದ ಬಿ.ಫಾರ್ಮ್ ನೀಡಲಾಗಿದೆ. ನೂರಕ್ಕೆ ನೂರರಷ್ಟು ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಗರಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕ ಜನಾಭಿಪ್ರಾಯ ಸಂಗ್ರಹಿಸಿದ್ದು ಜತೆಗೆ ಆನ್ಲೈನ್ ಮೂಲಕ ವೋಟಿಂಗ್ ನಡೆಸಿ ಅಭ್ಯರ್ಥಿಗಳ ಅಂತಿಮಗೊಳಿಸಲಾಗಿದೆ. ೨೦೦೪ ರಿಂದ ಶಾಸಕರಾಗಿ ಸಿ.ಟಿ ರವಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದು ಈ ಬಾರಿಯ ಚುನಾವಣೆಯಲ್ಲೂ ಸಂಘಟಿತ ಪ್ರಯತ್ನದಿಂದ ಗೆಲುವು ಸಾಧಿಸಲಿದ್ದೇವೆ ಎಂದರು.
ಇನ್ನು ನಗರದ ೨೦ ಮತ್ತು ೨೨ ನೇ ವಾರ್ಡ್ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ, ಎಂದು ಅವರು ಪರಿಷತ್ ಗೆಲುವಿಗೆ ಸಂಬಂಧಿಸಿದಂತೆ ಚುನಾವಣಾ ಫಲಿತಾಂಶ ಅಷ್ಟೇನು ಸಮಾಧಾನ ತಂದಿಲ್ಲ, ನಮ್ಮ ಲೆಕ್ಕಾಚಾರವೇ ಬೇರೆ ಇತ್ತು, ಮತದಾರರ ತೀರ್ಪುನ್ನು ಗೌರವಿಸಲೇಬೇಕು, ಫಲಿತಾಂಶದ ಏರುಪೇರಿನ ಬಗ್ಗೆ ಪಕ್ಷದ ಕೋರ್ ಕಮಿಟಿಯಲ್ಲಿ ಆಂತರಿಕವಾಗಿ ತೀರ್ಮಾನಿಸಲಾಗುವುದ ಎಂದರು.
ಮುಂಬರುವ ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸ ಬಿಟ್ಟು, ಶ್ರಮವಹಿಸಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು, ಇಂದಿನ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದ್ದು ಮುಂದಿನ ದಿನಗಳಲ್ಲಿ ಪ್ರತಿಸ್ಪರ್ಧಿಗಳ ವಿರುದ್ದ ಎಚ್ಚರಿಕೆ ಮಾರ್ಗ ಅನುಸರಿಸಲಾಗುವುದು. ಈ ಸಂದರ್ಭದಲ್ಲಿ ರಾಜ್ಯ ಫಲಾನುಭವಿಗಳ ಪ್ರಕೋಷ್ಠ ಸದಸ್ಯ ಬಿ.ರಾಜಪ್ಪ, ಬಿಜೆಪಿ ನಗರ ಅಧ್ಯಕ್ಷ ಮಧುಕುಮಾರ್ರಾಜ್ ಅರಸ್ ಉಪಸ್ಥಿತರಿದ್ದರು.
BJP candidates contest
Discussion about this post