• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

2019ರಲ್ಲಿ ಕಾಂಗ್ರೆಸ್ ಪಕ್ಷವೇ ಮುಕ್ತ ಕೃಷಿ ಮಾರುಕಟ್ಟೆಯ ಬಗ್ಗೆ ಪ್ರಸ್ತಾಪಿಸಿತ್ತು: ಸಿ ಟಿ ರವಿ

ನಮ್ಮ ಭಾಗದಲ್ಲಿ ಮಿನಿ ಸೌತೆಕಾಯಿ ಬೆಳೆಯುತ್ತಿದ್ದು, ಅದನ್ನು ಖರೀದಿಸಲು ಅಲಿಖಿತ ಒಪ್ಪಂದ ಇದೆ. ಚೆಂಡು ಹೂ, ಆಲೂಗಡ್ಡೆ ವಿಚಾರದಲ್ಲೂ ಇಂಥ ಒಪ್ಪಂದಗಳಾಗುತ್ತಿವೆ.

Shri News Desk by Shri News Desk
Nov 23, 2021, 10:18 pm IST
in ರಾಜಕೀಯ
CT Ravi

ಸಿ ಟಿ ರವಿ

Share on FacebookShare on TwitterTelegram

ಬೆಂಗಳೂರು: 2019ರಲ್ಲಿ ಕಾಂಗ್ರೆಸ್ ಪಕ್ಷವೇ ತನ್ನ ಪ್ರಣಾಳಿಕೆಯಲ್ಲಿ ಕೃಷಿ ಮಾರುಕಟ್ಟೆಯನ್ನು ಮುಕ್ತ ಮಾಡುವುದಾಗಿ ಹೇಳಿತ್ತು. ರೈತರು ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ಕೊಡುವ ಪ್ರಸ್ತಾಪ ಅಲ್ಲಿತ್ತು. ಭಾರತೀಯ ಕಿಸಾನ್ ಯೂನಿಯನ್‍ನ ರಾಕೇಶ್ ಸಿಂಗ್ ಟಿಕಾಯತ್ ಅವರೇ ಮಾರುಕಟ್ಟೆಯನ್ನು ಮುಕ್ತ ಮಾಡಬೇಕೆಂದು ತಮ್ಮ ಬೇಡಿಕೆಗಳ ಪಟ್ಟಿಯಲ್ಲಿ ಹೇಳಿದ್ದರು. ಅವರು ಬೇಡಿಕೆ ವಿಸ್ತರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಯ ಹುನ್ನಾರ ಇದೆ ಎಂದು ಅನಿಸುತ್ತದೆ ಎಂದು ತಿಳಿಸಿದರು. ಜಾಸ್ತಿ ಬೆಲೆ ಸಿಗುವಲ್ಲಿ, ದೇಶದ ಯಾವುದೇ ಭಾಗದಲ್ಲಿ ಉತ್ಪನ್ನ ಮಾರಾಟಕ್ಕೆ ಮಸೂದೆ ಅವಕಾಶ ನೀಡಿತ್ತು. ರಫ್ತು ಮಾಡಲೂ ಅವಕಾಶ ಕೊಡಲಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟೀಕಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಹೆಸರಿನಲ್ಲಿ ರೈತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೇರೇನೋ ನಡೆಯುತ್ತಿದೆ ಎಂಬ ಸಂಶಯ ಕೆಂಪುಕೋಟೆ ಮೇಲೆ ಖಲಿಸ್ಥಾನ ಧ್ವಜವನ್ನು ಹಾರಿಸಿದ ಸಂದರ್ಭದಲ್ಲೇ ಬಂದಿತ್ತು. ಉಗ್ರಗಾಮಿ ಸಂಘಟನೆಯು ಆಫರ್ ಕೊಟ್ಟಿದ್ದು, ಇದಕ್ಕೆ ಪುಷ್ಟಿ ಕೊಡುವಂತಿದೆ ಎಂದ ಅವರು, ಕೃಷಿ ಮಸೂದೆಯ ಯಾವ ಅಂಶ ರೈತ ವಿರೋಧಿ? ಎಂದು ಪ್ರಶ್ನಿಸಿದರು.

ನಮ್ಮ ಭಾಗದಲ್ಲಿ ಮಿನಿ ಸೌತೆಕಾಯಿ ಬೆಳೆಯುತ್ತಿದ್ದು, ಅದನ್ನು ಖರೀದಿಸಲು ಅಲಿಖಿತ ಒಪ್ಪಂದ ಇದೆ. ಚೆಂಡು ಹೂ, ಆಲೂಗಡ್ಡೆ ವಿಚಾರದಲ್ಲೂ ಇಂಥ ಒಪ್ಪಂದಗಳಾಗುತ್ತಿವೆ. ಪಂಜಾಬ್‍ನಲ್ಲಿ ಈ ಹಿಂದಿನಿಂದಲೇ ಆಲೂಗಡ್ಡೆ ಬೆಳೆ ಖರೀದಿ ಸಂಬಂಧ ಅಲಿಖಿತ ಒಪ್ಪಂದ ಇತ್ತು. ಮೋದಿಯವರ ನೇತೃತ್ವದ ಬಿಜೆಪಿ ಸರಕಾರ ರೈತರಿಗೆ ಶಾಸನದ ಬಲ ಕೊಟ್ಟಿತ್ತು. ಫಾರ್ಮರ್ಸ್ ಪ್ರೊಡ್ಯೂಸ್ ಆರ್ಗನೈಸೇಶನ್ ಮೂಲಕ ಮೌಲ್ಯವರ್ಧನೆ ಅವಕಾಶ ಕೊಡಲಾಗಿದೆ. ಎಪಿಎಂಸಿ ಯಥಾವತ್ ಮುಂದುವರಿಯುತ್ತದೆ ಎಂದ ಬಳಿಕ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಬಗ್ಗೆ ಮಾತನಾಡಿದರು. ರೈತರ ಮುಂದಿಟ್ಟುಕೊಂಡು ಹೊಸ ಬೇಡಿಕೆ ಇಡುವುದನ್ನು ಗಮನಿಸಿದರೆ ಇದರ ಹಿಂದೆ ಬೇರೇನೋ ಸಂಚು ಇದ್ದಂತೆ ಕಾಣುತ್ತದೆ ಎಂದು ತಿಳಿಸಿದರು.

ನಗರ ನಕ್ಸಲರು, ಸಿಎಎ ವಿರುದ್ಧ ಹೋರಾಟ ಮಾಡಿದವರು ಈ ಹೋರಾಟದಲ್ಲಿದ್ದರು. ಅರ್ಬನ್ ನಕ್ಸಲರನ್ನು ಬಿಡುಗಡೆ ಮಾಡಬೇಕೆಂದು ಕೋರಿಕೆಯನ್ನೂ ಅವರು ಮುಂದಿಟ್ಟಿದ್ದರು. ಕೆಲವರು ರಾತ್ರಿ ಬೆಳಗಾಗುವುದರೊಳಗೆ ರೈತರಾಗಿ ಬದಲಾಗಿದ್ದರು. ಭಾರತದ ವಿಭಜನೆ ಸಾಧ್ಯತೆ ಬಗ್ಗೆ ಪಂಜಾಬ್‍ನ ಹಿಂದಿನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ತಿಳಿಸಿದ್ದರು. ಚಳವಳಿ ಮುಂದುವರಿಕೆ, ಸಂಸತ್ತಿಗೆ ಮುತ್ತಿಗೆ ಹಾಕುವ ಹೇಳಿಕೆ ಹಿನ್ನೆಲೆಯಲ್ಲಿ ವ್ಯವಸ್ಥಿತ ಷಡ್ಯಂತ್ರ ಇದೆ ಎಂದು ತಿಳಿಸಿದರು. ಇದರ ಹಿಂದೆ ರೈತವಿರೋಧಿ ಷಡ್ಯಂತ್ರ ಇದ್ದಂತಿದೆ ಎಂದರು.

ರಾಷ್ಟ್ರವ್ಯಾಪಿ ಆಂದೋಲನ ಹುಟ್ಟುಹಾಕುವ ಸಾಧ್ಯತೆ ಮತ್ತು ಅರಾಜಕತೆ ಸೃಷ್ಟಿಸುವ ಸಾಧ್ಯತೆಯನ್ನು ಗಮನಿಸಿ ಈ ಕಾಯಿದೆ ಹಿಂದಕ್ಕೆ ಪಡೆಯಲಾಗಿದೆ. ಇದರ ಹಿಂದೆ ರಾಜಕೀಯ ಉದ್ದೇಶ ಇಲ್ಲ. ದೇಶದ ವಿವಿಧೆಡೆ ನಡೆದ ರಾಜ್ಯಗಳ ಚುನಾವಣೆಯಲ್ಲಿ ನಾವು ಗೆದ್ದಿದ್ದೆವು ಎಂದು ಅವರು ಸ್ಪಷ್ಟಪಡಿಸಿದರು. ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಳ್ಳಬಾರದೆಂದು ಯೋಚಿಸಿ ಮೋದಿಯವರು ಈ ನಿರ್ಧಾರಕ್ಕೆ ಬಂದಿದ್ದಾರೆ. ತಾತ್ಕಾಲಿಕ ಹಿನ್ನಡೆ ಆಗಿದೆ. ಇದರ ಕುರಿತು ಅಧ್ಯಯನ ಮಾಡಿ ಪರಿಣಾಮಕಾರಿ ಮಸೂದೆ ತರಲಿದ್ದೇವೆ ಎಂದರು. ಪ್ರಧಾನಿಯವರು ಮತ ಆಧರಿತ, ಜಾತಿ ಆಧರಿತ ರಾಜಕೀಯ ಮಾಡಿಲ್ಲ ಎಂದರು. ಸಮಗ್ರ ಪರಿವರ್ತನೆ ಮತ್ತು ದೇಶದ ಹಿತದೃಷ್ಟಿಯಿಂದಲೇ ಅವರು ಕೆಲಸ ಮಾಡಿದವರು ಎಂದು ತಿಳಿಸಿದರು.

ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ಹೆಚ್ಚಳ, ಕಿಸಾನ್ ಸಮ್ಮಾನ್ ಯೋಜನೆ ಜಾರಿ, ಬೇವು ಲೇಪಿತ ಯೂರಿಯಾ ಬಿಡುಗಡೆ- ಇವೆಲ್ಲವೂ ರೈತ ವಿರೋಧಿಯೇ ಎಂದು ಪ್ರಶ್ನಿಸಿದರು. ದೇಶದ ವಿವಿಧೆಡೆ ಅಮಾವಾಸ್ಯೆ-ಹುಣ್ಣಿಮೆಗೊಂದು ಚುನಾವಣೆ ಬರುತ್ತದೆ. ಕೇಡರ್ ಬೇಸ್‍ಡ್ ಸಂಘಟನೆಗೆ ಚುನಾವಣೆ ಬಗ್ಗೆ ಭಯವಿಲ್ಲ ಎಂದು ತಿಳಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಡಾ. ಅಂಬೇಡ್ಕರರ ಜನ್ಮಸ್ಥಳ ಸೇರಿ ಪಂಚಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಿತ್ತು. ಸರ್ದಾರ್ ವಲ್ಲಭಭಾಯಿ ಪಟೇಲ್‍ರನ್ನು ವಿಶ್ವಕ್ಕೆ ಪರಿಚಯಿಸಿದ ಬಳಿಕ ಕಾಂಗ್ರೆಸ್‍ನವರಿಗೆ ಅವರ ನೆನಪಾಗಿದೆ ಎಂದು ತಿಳಿಸಿದರು.

ಬಿಟ್ ಕಾಯಿನ್ ವಿಚಾರದಲ್ಲಿ ಸಾಕ್ಷ್ಯಾಧಾರ ಇದ್ದರೆ ಅದನ್ನು ಸದನದ ಮುಂದಿಡಬಹುದು ಎಂದು ಪ್ರಶ್ನೆಗೆ ಉತ್ತರಿಸಿದರು. ಆಗ ಉಪ್ಪು ತಿಂದವರು ನೀರು ಕುಡೀತಾರೆ ಎಂದು ತಿಳಿಸಿದರು. ಒಂದು ಪಾರ್ಟಿಯಾಗಿ ಕುಟುಂಬ ರಾಜಕೀಯದ ಮೇಲ್ಪಂಕ್ತಿಯನ್ನು ನಮ್ಮ ಪಕ್ಷ ಯಾವತ್ತೂ ಹಾಕಿಲ್ಲ. ವಂಶದ ಕಾರಣಕ್ಕೆ ಯಾರನ್ನೂ ಏಕಾಏಕಿ ರಾಷ್ಟ್ರೀಯ ನಾಯಕರನ್ನಾಗಿ ಬಿಜೆಪಿ ಮಾಡಿಲ್ಲ ಎಂದು ಈ ಕುರಿತ ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್‍ನಲ್ಲಿ ಡಿಎನ್‍ಎ ಮೂಲಕ ನಾಯಕತ್ವದ ಮೇಲ್ಪಂಕ್ತಿ ಹಾಕಿದೆ. ಆರ್‍ಜೆಡಿ, ಸಮಾಜವಾದಿ ಪಾರ್ಟಿ, ಎನ್‍ಸಿಪಿ, ಟಿಎಂಸಿ, ಜೆಡಿಎಸ್ ಮತ್ತಿತರ ಪಕ್ಷಗಳು ಇದನ್ನೇ ಮೇಲ್ಪಂಕ್ತಿಯಾಗಿ ಹಾಕಿವೆ ಎಂದರು.

ನಾವು 100 ಕೋಟಿ ಕೋವಿಡ್ ಲಸಿಕೆ, 84 ಕೋಟಿ ಬಡಜನರಿಗೆ ಪಡಿತರ ನೀಡಿಕೆ, 43 ಕೋಟಿ ಜನ್‍ಧನ್ ಖಾತೆಯನ್ನು ವಿಶ್ವದಾಖಲೆಯ ಸಾಧನೆ ಎಂದುಕೊಂಡರೆ, ಕೆಲವರು ಎಷ್ಟು ಜನ ಕುಟುಂಬಸ್ಥರು ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ ಎಂಬುದನ್ನೇ ಸಾರ್ವಕಾಲಿಕ ದಾಖಲೆ ಮಾಡಲು ಕೆಲವು ರಾಜಕೀಯ ಪಕ್ಷಗಳು ಹೊರಟಿವೆ. ಕೆಲವರಿಗೆ ನಾಲ್ಕು ತಲೆಮಾರಿನ ಸಕ್ರಿಯ ರಾಜಕಾರಣ, ಒಂದು ಕುಟುಂಬದಲ್ಲಿ ಗರಿಷ್ಠ ಎಂಪಿ, ಎಂಎಲ್‍ಎ ಮಾಡಿಕೊಳ್ಳುವುದನ್ನೇ ಹೆಮ್ಮೆಯ ವಿಷಯ ಎಂದುಕೊಂಡಿವೆ. ಯಾರ್ಯಾರು ಈ ರೀತಿ ಇರುತ್ತಾರೋ ಅವರೆಲ್ಲರೂ ಹೆಗಲು ಮುಟ್ಟಿ ನೋಡಿಕೊಳ್ಳಲಿ ಎಂದರು.

ಬಿಜೆಪಿ ರಾಜ್ಯ ವಕ್ತಾರರು ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಜನತೆಗೆ, ರಾಜಕಾರಣಿಗಳಿಗೆ ಮಾದರಿ ಶಿಕ್ಷಣ ಸಚಿವರು : ರೈಲಿನಲ್ಲೇ ಸಂಚಾರ

Tags: bjpCongressCT RaviKarnataka PoliticsTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In