ಚಿಕ್ಕಮಗಳೂರು : ಸ್ಥಳೀಯ ಸಂಸ್ಥೆ ವಿಧಾನ ಪರಿಷತ್ತಿನ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಎಂ.ಕೆ.ಪ್ರಾಣೇಶ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.
ಪಕ್ಷದ ಮುಖಂಡರು, ಬೆಂಬಲಿಗರು ಹಾಗೂ ನೂರಾರು ಕಾರ್ಯಕರ್ತರೊಂದಿಗೆ ಕಾಲ್ನಡಿಯಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಡಿಸಿ ಕೆ.ಎನ್.ರಮೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ಗ್ರಾಮಪಂಚಾಯಿತಿ ಹಾಗೂ ಪುರಸಭೆ, ಪಟ್ಟಣ ಪಂಚಾಯಿತಿ, ಒಳಗೊಂಡಂತೆ ಎಲ್ಲಾ ಮತದಾರರ ಬೆಂಬಲದಿಂದ ಪರಿಷತ್ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾವಿದೆ. ಕಳೆದ ೬ ವರ್ಷದ ಕಾಲ ಪರಿಷತ್ ಸದಸ್ಯನಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದು ಅದರ ಆತ್ಮತೃಪ್ತಿ ಇದೆ. ಮತ್ತಷ್ಟು ಸೇವೆ ಮಾಡಲು ಸದಸ್ಯನಾಗಿ ಆಯ್ಕೆ ಮಾಡುವ ಮೂಲಕ ಅವಕಾಶ ನೀಡುವಂತೆ ವಿನಂತಿಸಿಕೊಂಡರು.
ಈ ಹಿಂದೆ ಚುನಾಯಿತ ಸದಸ್ಯನಾದ ಬಳಿಕ ಪ್ರತಿ ಗ್ರಾಮಪಂಚಾಯಿತಿಗಳೊಂದಿಗೂ ಪಕ್ಷಾತೀತವಾಗಿ ನಡೆದುಕೊಂಡಿದ್ದೇನೆ. ಅಲ್ಲಿನ ಸದಸ್ಯರು, ಅಧ್ಯಕ್ಷರುಗಳೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡಿದ್ದೇನೆ. ನನ್ನ ಅವಧಿಯಲ್ಲಿ ಯಾವುದೇ ಪಕ್ಷ ಬೇಧವಿಲ್ಲದೇ ೧೯೬ ಗ್ರಾಮಪಂಚಾಯಿತಿಗಳಿಗೆ ಜನರೇಟರ್ ವಿತರಣೆಗೆ ಶ್ರಮಿಸಿದ್ದೇನೆ ಎಂದು ತಿಳಿಸಿದರು.
ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮಪಂಚಾಯಿತಿ ಸದಸ್ಯರಿಗೆ ಗೌರವ ಧನವನ್ನು ನೀಡುವ ಮೂಲಕ ೫೦೦ ರಿಂದ ೧೦೦೦ ಕ್ಕೆ ಏರಿಕೆ ಮಾಡಲಾಗಿತ್ತು. ಇದೀಗ ಗೌರವ ಧನವನ್ನು ೨೫೦೦ ಏರಿಕೆ ಮಾಡುವ ಸಂಬಂಧ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ಬೆಳ್ಳಿಪ್ರಕಾಶ್, ಡಿ.ಎಸ್.ಸುರೇಶ್, ಎಂ.ಪಿ. ಕುಮಾರಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಉಪಸ್ಥಿತರಿದ್ದರು.
Legislative Council: ಕಾರ್ಯಕರ್ತರ ಬಲದೊಂದಿಗೆ ಪರಿಷತ್ ಚುನಾವಣೆ ಗೆಲ್ಲುವ ವಿಶ್ವಾಸ
Discussion about this post