ಬೆಂಗಳೂರು: ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿಗಳ ಬಗ್ಗೆ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಕ್ಲಸ್ಟರ್ಗಳಲ್ಲಿ ಕೋವಿಡ್ನ ಸ್ಥಿತಿಗತಿ ಹಾಗೂ ನಿರ್ವಹಣೆ ಹೊಸ ತಳಿ ಒಮಿಕ್ರಾನ್ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಗಳ ವಿವರ, ವಿವಿಧ ದೇಶಗಳಲ್ಲಿ ಒಮಿಕ್ರಾನ್ ತಳಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆಯಲಾಗಿದೆ ಎಂದು ತಿಳಿಸಿದರು.
2022ರ ಮಾರ್ಚ್ವರೆಗೆ ಕೋವಿಡ್ ನಿಯಂತ್ರಣಕ್ಕೆ ಬೇಕಾದ ಹಣಕಾಸಿನ ವಿವರಗಳು ಪಡೆದು 2 ನೇ ಅಲೆಯಲ್ಲಿ ಬಿಬಿಎಂಪಿ, ಕಂದಾಯ,ವೈದ್ಯಕೀಯ, ಆರೋಗ್ಯ ಇಲಾಖೆಗಳು ಆಕ್ಸಿಜನ್ ಘಟಕಗಳು, ಲ್ಯಾಬ್ಗಳು ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳಿಗೆ ಬಾಕಿ ಹಣ ಬಿಡುಗಡೆ ಮಾಡುವ ಬಗ್ಗೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.
Cabinet meeting decides on guidelines























Discussion about this post