ನವದೆಹಲಿ: ಸರಕು ಮತ್ತು ಸೇವಾ ತರಿಗೆಯ (ಜಿಎಸ್ಟಿ) ಪರಿಹಾರದ ಮೊತ್ತವಾಗಿ ಕರ್ನಾಟಕ ರಾಜ್ಯಕ್ಕೆ 1,603 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಕುರಿತು ಕೇಂದ್ರ ಹಣಕಾಸು ಇಲಾಖೆಯ ಸಹಾಯಕ ಸಚಿವ ಪಂಕಜ್ ಚೌಧರಿ ಸಂಸತ್ಗೆ ಮಾಹಿತಿ ನೀಡಿದ್ದಾರೆ.
ಜಿಎಸ್ಟಿ ಪರಿಹಾರದ ವಿಷಯವಾಗಿ ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ‘ಏಪ್ರಿಲ್ 20ರಿಂದ ಮಾರ್ಚ್ 2021ರ ಅವಧಿಗೆ ಪಾವತಿಸಬೇಕಾದ 10.369 ಕೋಟಿ ರೂಪಾಯಿ ಭಾಗಶಃ ಪರಿಹಾರವನ್ನು ಮೊದಲೇ ಬಿಡುಗಡೆ ಮಾಡಲಾಗಿತ್ತು. ಇತ್ತೀಚೆಗೆ ಹೆಚ್ಚುವರಿ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.
2017-18, 2018-19 ಮತ್ತು 2019-20ನೇ ಹಣಕಾಸು ವರ್ಷಗಳಿಗೆ ಸಂಬಂಧಿಸಿದ ಜಿಎಸ್ಟಿ ಪರಿಹಾರವನ್ನು ಕರ್ನಾಟಕಕ್ಕೆ ಈಗಾಗಲೇ ಪಾವತಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮೂರು ವರ್ಷದಲ್ಲಿ 8 ಲಕ್ಷ ಕೋಟಿ ರೂಪಾಯಿ ಇಂಧನ ತೆರಿಗೆ ಸಂಗ್ರಹ
Discussion about this post