ಚಿಕ್ಕಮಗಳೂರು : ಕಳೆದ ಕೆಲ ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿಯ ಪತ್ನಿಗೆ 30 ಲಕ್ಷದ ವಿಮೆ ಪರಿಹಾರದ ಚೆಕ್ ವಿತರಿಸಲಾಯಿತು.
ಹಿರೇಗೌಜ ಗ್ರಾಮದ ಬಳಿ ರಸ್ತೆ ಅಪಘಾತದಲ್ಲಿ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದರಾಮಪ್ಪ ನಿಧನರಾಗಿದ್ದರು.
ಅವರ ಪತ್ನಿ ವಾಣಿ ಅವರಿಗೆ ಭಾರತೀಯ ಸ್ಟೇಟ್ ಬ್ಯಾಂಕ್ ಚಿಕ್ಕಮಗಳೂರು ಪ್ರಾದೇಶಿಕ ಕಛೇರಿಯಿಂದ ವಿಮಾ ಮೊತ್ತ 30 ಲಕ್ಷಗಳ ಚೆಕ್ ಅನ್ನು ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್. ಸಮ್ಮುಖದಲ್ಲಿ ಬ್ಯಾಂಕಿನ ಮಹಾಪ್ರಬಂಧಕ ರಾಜೇಶ್ ಗುಪ್ತಾ ಹಸ್ತಾಂತರ ಮಾಡಿದರು.
Discussion about this post