ಬೆಂಗಳೂರು: ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪುರಸ್ಕಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸದರು. ಪುನೀತ್ ರಾಜ್ಕುಮಾರ್ ಅವರ ಅಕಾಲಿಕ ಅಗಲುವಿಕೆಯಿಂದ ಬೇಸರದಲ್ಲಿರುವ ಕರುನಾಡ ಜನತೆಗಾಗಿ ಚಿತ್ರರಂಗದ ವತಿಯಿಂದ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದರು.
ಪುನೀತ ನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಚಲನಚಿತ್ರ ಚಿತ್ರೀಕರಣಗಳನ್ನು ನಿಲ್ಲಿಸಲಾಗಿದೆ. ಚಿತ್ರಪ್ರದರ್ಶನ ಹೊರತುಪಡಿಸಿ ಯಾವ ಸಿನಿಮಾ ಕೆಲಸಗಳು ನಡೆಯುತ್ತಿಲ್ಲ. ಚಿತ್ರರಂಗದ ಎಲ್ಲ ವಿಭಾಗದವರೂ ಪುನೀತ ನಿಯಮ ಕಾರ್ಯಕ್ರಮಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಮನರಂಜನೆಗೆ ಅವಕಾಶ ಇಲ್ಲದೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.
ಪುನೀತ್ ಸಮಾಧಿ ಸ್ಥಳವನ್ನು ಡಾ. ರಾಜ್ಕುಮಾರ್ ಮತ್ತು ಪಾರ್ವತಮ್ಮ ರಾಜ್ಕುಮಾರ್ ಅವರ ಸ್ಮಾರಕದ ರೀತಿಯೇ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಸಕ್ರೆಬೈಲು ಆನೆಗೆ ಪುನೀತ್ ಹೆಸರು; ಅಭಿಮಾನಕ್ಕೆ ಎಣೆಯುಂಟೇ?
Discussion about this post