ಖ್ಯಾತ ಚಿಂತಕರು, ಸುಪ್ರಸಿದ್ಧ ಲೇಖಕರು, ಮೇರು ವಿದ್ವಾಂಸರಾಗಿದ್ದ ಪ್ರೊ। ಕೆ.ಎಸ್. ನಾರಾಯಣಾಚಾರ್ಯರ ಅವರು ಇಂದು ಬೆಳಗಿನ ಜಾವ ನಿಧನರಾಗಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಪ್ರೊ। ಕೆ.ಎಸ್. ನಾರಾಯಣಾಚಾರ್ಯರ ಅವರ ನಿಧನ ಅತೀವ ದುಃಖ ತಂದಿದೆ. ಅವರು ರಾಷ್ಚ್ರಭಕ್ತಿ, ಸಂಸ್ಕೃತಿಗಳ ಪರಮ ಆರಾಧಕರಾಗಿದ್ದರು. ಅವರ ನಿಧನವು ಕನ್ನಡ ಸಾರಸ್ವತ ಹಾಗೂ ವಿದ್ವತ್ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ. ಅವರ ಕೃತಿಗಳ ಮೂಲಕ ಸದಾಕಾಲ ಅವರ ನೆನಪು ಸದಾಕಾಲ ಉಳಿಯಲಿ ಮತ್ತು ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಅವರು ಕೂ ಮಾಡಿದ್ದಾರೆ.
ಖ್ಯಾತ ವಿದ್ವಾಂಸ ಡಾ. ಕೆ. ಎಸ್.ನಾರಾಯಣಾಚಾರ್ಯ ನಿಧನಕ್ಕೆ ದತ್ತಾತ್ರೇಯ ಹೊಸಬಾಳೆ ಸಂತಾಪ
ಸುಪ್ರಸಿದ್ಧ ಲೇಖಕರೂ ಮೇರು ವಿದ್ವಾಂಸರೂ ಹಿಂದುತ್ವ – ರಾಷ್ಟ್ರೀಯತೆಯ ಪ್ರಖರ ಪ್ರತಿಪಾದಕರೂ ಆಗಿದ್ದ ಪ್ರೊ। ಕೆ.ಎಸ್. ನಾರಾಯಣಾಚಾರ್ಯರ ನಿಧನ ನಾಡಿಗೆ ಅತೀವ ದುಃಖ ತಂದಿದೆ. ಅವರ ಮರಣದಿಂದಾಗಿ ವಿದ್ವತ್ ಲೋಕಕ್ಕಷ್ಟೇ ಅಲ್ಲ, ಸಾಮಾನ್ಯ ಜನತೆಗೂ ಅಪಾರ ನೋವು ಹಾಗೂ ನಷ್ಟ ಉಂಟಾಗಿದೆ. ರಾಷ್ಟ್ರಭಕ್ತಿ, ಸಂಸ್ಕೃತಿಗಳ ಪರಮ ಆರಾಧಕರಾಗಿದ್ದು ಅವುಗಳ ಬಗ್ಗೆ ಆಗ್ರಹದಿಂದ ಅಧಿಕಾರಪೂರ್ವಕವಾಗಿ ಹೇಳುತ್ತಿದ್ದ ಆಚಾರ್ಯರ ನಿಧನಕ್ಕೆ ತೀವ್ರ ಸಂತಾಪಗಳು. ಪರಮಾತ್ಮ ಎಲ್ಲರಿಗೂ ನೋವನ್ನು ಭರಿಸುವ ಶಕ್ತಿಯನ್ನೂ ದಿವಂಗತರಿಗೆ ಸದ್ಗತಿಯನ್ನೂ ನೀಡಲೆಂದು ಪ್ರಾರ್ಥನೆ ಎಂಬುದಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ: ಮದಗಜ ಟ್ರೇಲರ್ ಲೋಕಾರ್ಪಣೆಗೊಳಿಸಿದ ಸಿಎಂ ಬಸವರಾಜ್ ಬೊಮ್ಮಾಯಿ
Discussion about this post