ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದಾಗಿ ಸಂಭವಿಸಿದ ಬೆಳೆಹಾನಿ ನಷ್ಟದ ಕುರಿತು ಕಾಫಿ ಮಂಡಳಿ ಕಾರ್ಯದರ್ಶಿ ಡಾ.ಕೆ.ಜೆ ಜಗದೀಶ್ ಮೂಡಿಗೆರೆ ತಾಲ್ಲೂಕಿನ ಬಾಳೂರು ಗ್ರಾಮದ ಸುವರ್ಣಗಿರಿ ಎಸ್ಟೇಟ್ಗೆ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಸುವರ್ಣಗಿರಿ ಎಸ್ಟೇಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಕಾಫಿ ಬೆಳೆ ಹಾನಿಯಾಗಿದ್ದು ಹಾನಿಯಾಗಿರುವ ನಷ್ಟಗಳ ಬೆಳೆಗಾರರೊಂದಿಗೆ ಚರ್ಚಿಸಿದರು. ಮೂಡಿಗೆರೆ ತಾಲ್ಲೂಕು ಬೆಳೆಗಾರರ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ಬೆಳೆಗಾರರ ಸಮಸ್ಯೆಗಳನ್ನು ಕಾರ್ಯದರ್ಶಿಗಳ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ. ಹೆಚ್.ಟಿ.ಮೋಹನ್ಕುಮಾರ್, ಮಾಜಿ ಅಧ್ಯಕ್ಷ ಸುಬ್ಬೇಗೌಡ, ಬಿ.ಎಸ್.ಜೈರಾಂ, ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಕಾರ್ಯದರ್ಶಿ ಮನೋಹರ್, ನಿರ್ದೇಶಕ ಶಿವಣ್ಣ ಹಳಸೆ, ದೇವರಾಜು, ಚನ್ನಕೇಶವಗೌಡ್ರು, ಬಿ.ಎಸ್. ಕಲ್ಲೇಶ್, ಹಾಗೂ ಕಾಫಿ ಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:
Discussion about this post