• Home
  • About Us
  • Contact Us
  • Terms of Use
  • Privacy Policy
Wednesday, May 13, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Congress: ಉಪಚುನಾವಣೆ ಫಲಿತಾಂಶ 2023 ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರ ಮುನ್ಸೂಚನೆ 

Shri News Desk by Shri News Desk
Nov 2, 2021, 05:07 pm IST
in ರಾಜಕೀಯ
Share on FacebookShare on TwitterTelegram

ಬೆಂಗಳೂರು:‘ರಾಜ್ಯದ ಜನ ಬದಲಾವಣೆ ಬಯಸಿದ್ದು, 2023 ರ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ವರ್ಗವನ್ನು ಪ್ರತಿನಿಧಿಸುವ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬುದಕ್ಕೆ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಫಲಿತಾಂಶ ಸ್ಪಷ್ಟ ಮುನ್ಸೂಚನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಪಚುನಾವಣೆ ಫಲಿತಾಂಶ ಕುರಿತು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಚುನಾವಣೆ ನಡೆದ ಎರಡೂ ಕ್ಷೇತ್ರಗಳ ಪೈಕಿ ಒಂದರಲ್ಲಿ ಬಿಜೆಪಿ, ಮತ್ತೊಂದರಲ್ಲಿ ಜೆಡಿಎಸ್ ಗೆದ್ದಿತ್ತು. ಆದರೆ ಈ ಚುನಾವಣೆಯಲ್ಲಿ ಜೆಡಿಎಸ್ ಗೆದ್ದಿದ್ದ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ, ಬಿಜೆಪಿ ಗೆದ್ದಿದ್ದ ಹಾನಗಲ್ ಕ್ಷೇತ್ರವನ್ನು ನಾವು ಗೆದ್ದುಕೊಂಡಿದ್ದೇವೆ. ಕಳೆದ ಬಾರಿ ಸಿಂದಗಿಯಲ್ಲಿ ಮೂರನೇ ಸ್ಥಾನ ಪಡೆದಿದ್ದ ಕಾಂಗ್ರೆಸ್, ಈ ಬಾರಿ ಮತಪ್ರಮಾಣ ದುಪ್ಪಟ್ಟು ಮಾಡಿಕೊಂಡು ಎರಡನೇ ಸ್ಥಾನಕ್ಕೆ ಏರಿದೆ. ಹೀಗಾಗಿ ಎರಡೂ ಕ್ಷೇತ್ರಗಳಲ್ಲಿ ಪಕ್ಷ ಉತ್ತಮ ಪ್ರದರ್ಶನ ನೀಡಿದೆ. ಇದು ಜನ ಬದಲಾವಣೆ ಬಯಸಿರುವುದರ ಮುನ್ಸೂಚನೆ’ ಎಂದರು.

ನಾನು ಈ ಹಿಂದೆ ಹೇಳಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಣ್ಣೀರಿನಲ್ಲಿ ಬಿಜೆಪಿ ಹಾಗೂ ಬಿಜೆಪಿ ಸರ್ಕಾರ ಕೊಚ್ಚಿ ಹೋಗಲಿದೆ ಎಂಬ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಜನ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಮತದಾರ ಬೇಸತ್ತಿದ್ದು, ಅದನ್ನು ಬದಲಿಸಲು ನಿರ್ಧರಿಸಿದ್ದಾನೆ. ಅದಕ್ಕೆ ಈ ಉಪಚುನಾವಣೆ ಫಲಿತಾಂಶವೇ ಸಾಕ್ಷಿ’ ಎಂದರು.

ಈ ವೇಳೆ ಅವರು ಹೇಳಿದ್ದಿಷ್ಟು: ‘ಈ ಚುನಾವಣೆಯ ಫಲಿತಾಂಶದ ಬಗ್ಗೆ ನಾನು ವಿಶ್ಲೇಷಣೆ ಮಾಡುವ ಅಗತ್ಯವಿಲ್ಲ. ಶ್ರೀನಿವಾಸ ಮಾನೆ ಅವರು ಕಳೆದ ಬಾರಿ 6 ಸಾವಿರ ನತಗಳ ಅಂತರದಲ್ಲಿ ಸೋತಿದ್ದರು. ಬಿಜೆಪಿ ಅಧಿಕಾರದಲ್ಲಿದ್ದು, ಡಬಲ್ ಇಂಜಿನ್ ಸರ್ಕಾರ ಇದೆ. ಜತೆಗರ ಮುಖ್ಯಮಂತ್ರಿಗಳ ಕ್ಷೇತ್ರ ಬೇರೆ, ಅವರು ಕ್ಷೇತ್ರದ ಅಳಿಯ. ಎಲ್ಲ ರೀತಿಯಲ್ಲೂ ಅವರಿಗೆ ಅನುಕೂಲ ಇತ್ತು. ಅವರ ಸರಕಾರದಲ್ಲಿರುವ ನಮ್ಮ ಸ್ನೇಹಿತರು ಬ್ಯಾಗ್ ತುಂಬಿಕೊಂಡು ಹೋಗಿ ಬಹಳ ಪ್ರಯತ್ನಪಟ್ಟಿದ್ದರು.

ಸಿಂದಗಿಯಲ್ಲಿ ನಾವು ಮೂರನೇ ಸ್ಥಾನದಲ್ಲಿದ್ದೆವು. ಮನಗೂಳಿ ಅವರು ತಮ್ಮ ಪುತ್ರನನ್ನು ನಮ್ಮ ಪಕ್ಷದಲ್ಲಿ ಬಿಟ್ಟು ಹೋದರು. ಅವರು ಜೆಡಿಎಸ್ ಚಿಹ್ನೆಯಲ್ಲಿ ಗೆಲ್ಲುತ್ತೇವೆ ಎಂದಿದ್ದರೆ ನಮ್ಮ ತಕರಾರು ಏನೂ ಇರಲಿಲ್ಲ. ಅವರು ಕಾಂಗ್ರೆಸ್ ಬರಲು ಮುಂದಾದಾಗ ಜಿಲ್ಲೆಯ ಎಲ್ಲ ನಾಯಕರು ಒಟ್ಟಾಗಿ ಅವರಿಗೆ ಟಿಕೆಟ್ ನೀಡಿದೆವು. ಅಲ್ಲೂ ನಾವು ಗೆಲ್ಲುವ ವಿಶ್ವಾಸ ಇತ್ತು. ಮತ ಪ್ರಮಾಣ ನೋಡಿದರೆ ನಾವು ಸೋತಿದ್ದರೂ ಸಮಾಧಾನ ತಂದಿದೆ.

ನಾವು ಒಂದೇ ದಿನದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ. ಹಂತ-ಹಂತವಾಗಿ ತರಬೇಕು. ಒಟ್ಟಾರೆಯಾಗಿ ಎರಡೂ ಕ್ಷೇತ್ರದ ಚುನಾವಣೆ ನೋಡಿದರೆ ಜನ ಬದಲಾವಣೆ ಬಯಸಿರುವುದು ಸ್ಪಷ್ಟವಾಗಿದೆ. ಮತದಾರರು ಬಿಜೆಪಿ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಕೇವಲ ಕೊರೋನಾ ವಿಚಾರ ಮಾತ್ರವಲ್ಲ, ಅವರಿಗೆ ಸಿಕ್ಕ ವ್ಯವಸ್ಥೆಯಲ್ಲಿ ಈ ಪರಿಸ್ಥಿತಿ ಬಂದಿದೆ. ಇದು ದೇಶಕ್ಕೆ ದೊಡ್ಡ ಸಂದೇಶ.

ಮುಖ್ಯಮಂತ್ರಿಗಳು, ಇತರೆ ನಾಯಕರು ಆಡಿದ ಮಾತುಗಳನ್ನು ಜನ ನೋಡಿದ್ದಾರೆ. ವೈಯಕ್ತಿಕ ಟೀಕೆಗಳನ್ನು ಕೇಳಿದ್ದಾರೆ. ಉಪಚುನಾವಣೆ ವೇಳೆ ಅದೊಂದು ಚಾಳಿ ಆಗಿದ್ದು, ನಾವೆಲ್ಲ ರಾಜಕಾರಣಿಗಳು ಸೇರಿ ಅದನ್ನು ತಪ್ಪಿಸಬೇಕಿದೆ.

ಕಾಂಗ್ರೆಸ್ ಮೇಲೆ ಜನ ಇಟ್ಟಿರುವ ಪ್ರೀತಿ, ವಿಶ್ವಾಸ, ನಂಬಿಕೆ ಉಳಿಸಿಕೊಂಡು ಅವರ ಸೇವೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಬಿಜೆಪಿ ಆಳ್ವಿಕೆಯಲ್ಲಿ ರಾಜ್ಯ 20 ವರ್ಷ ಹಿಂದಕ್ಕೆ ಹೋಗಿದ್ದು, ಅದನ್ನು ನಾವು ಸರಿ ಮಾಡುತ್ತೇವೆ ಎಂದು ದೀಪಾವಳಿ ಹಬ್ಬದ ಸಮಯದಲ್ಲಿ ಶುಭ ಘಳಿಗೆಗೆ ಹೆಜ್ಜೆ ಇಡುವ ವಿಶ್ವಾಸದಿಂದ ಹೇಳುತ್ತೇನೆ.

ಕೆಲವರು ರಾಜಕೀಯದಲ್ಲಿ ವೈಯಕ್ತಿಕ ಅಜೆಂಡಾ ಇಟ್ಟುಕೊಂಡಿರುತ್ತಾರೆ. ಒಂದು ಪಕ್ಷ ಅಂದ ಮೇಲೆ ಮೂರ್ನ್ಕಾಲ್ಕು ಆಕಾಂಕ್ಷಿಗಳು ಇರುತ್ತಾರೆ. ಅದು ಎಲ್ಲ ಪಕ್ಷಗಳಲ್ಲೂ ಇದ್ದಿದ್ದೆ. ರಾಜಕೀಯದಲ್ಲಿ ಸಾಮಾನ್ಯ. ಹಾನಗಲ್ ಕ್ಷೇತ್ರದ ಸ್ವಾಭಿಮಾನಿ ಮತದಾರರಿಗೆ, ಚುನಾವಣೆಯಲ್ಲಿ ಹಳ್ಳಿ ಹಳ್ಳಿಯಲ್ಲಿ ದುಡಿದ ಕಾರ್ಯಕರ್ತರಿಗೆ ದೊಡ್ಡ ಸೆಲ್ಯೂಟ್. ಬಿಜೆಪಿಯವರು ಏನೆಲ್ಲಾ ಪ್ರಯತ್ನ ಪಟ್ಟಿದ್ದರು, ಎಷ್ಟೆಲ್ಲಾ ಒತ್ತಡ ಹಾಕಿದ್ದರು. ಆದರೂ ಅದ್ಯಾವುದಕ್ಕೂ ಮತದಾರ ಬಗ್ಗಲಿಲ್ಲ.

ಈ ಚುನಾವಣೆ ಫಲಿತಾಂಶ ಬರೀ ಸಿಎಂಗೆ ಸಂಬಂಧಪಟ್ಟ ವಿಚಾರವಲ್ಲ. ಇಡೀ ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ಪಕ್ಷಕ್ಕೆ ಆಗಿರುವ ಮುಖಭಂಗ. ಇಡೀ ಸರ್ಕಾರ ಹಾಗೂ ಅದರ ಆಡಳಿತದ ಸೋಲು. ಆ ಪಕ್ಷದಲ್ಲಿನ ಮುಸುಕಿನ ಗುದ್ದಾಟದ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅಲ್ಲಿ ಪಕ್ಷ ಕಟ್ಟಿದವರು ಲೆಕ್ಕಕ್ಕೆ ಇಲ್ಲವಾಗಿದ್ದಾರೆ. ಈಗ ಆ ವಿಚಾರ ಬೇಡ.

ಬಿಜೆಪಿ ಆಡಳಿತ ಸಾಕು ಎಂದು ಜನ ತೀರ್ಮಾನಿಸಿದ್ದಾರೆ. ಸಿಂದಗಿಯಲ್ಲೂ ಪಕ್ಷ ಗಟ್ಟಿಯಾಗುತ್ತಿದೆ. ಫಲಿತಾಂಶದ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಅಲ್ಲಿ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾರ್ಯಕರ್ತರು ಆತ್ಮವಿಶ್ವಾಸದಿಂದ ಇರಲಿ. ಅವರು ಚುನಾವಣೆ ಸಮಯದಲ್ಲಿ ಹಗಲು ರಾತ್ರಿ ಎನ್ನದೆ ದುಡಿದಿದ್ದಾರೆ. ಅವರಿಗೆ ಧನ್ಯವಾದಗಳು.

ಕರ್ನಾಟಕದಲ್ಲಿ 2023 ಕ್ಕೆ ನಿಮ್ಮ ಆಡಳಿತ, ಜನರ ಆಡಳಿತ, ಕಾಂಗ್ರೆಸ್ ಆಡಳಿತ ಇರಲಿದೆ. ಅದು ಎಲ್ಲ ವರ್ಗದ ಆಡಳಿತ. ಜನ ಬಿಜೆಪಿಗೆ ಕೊಟ್ಟ ಅವಕಾಶದ ಸಮಯ ಮುಗಿದಿದೆ. ಈಗ ಆ ಬಗ್ಗೆ ಚರ್ಚೆ ಬೇಡ. ನಾವು ಮುಂದೆ ಒಳ್ಳೆಯ ಕೆಲಸ ಮಾಡಿಕೊಂಡು ಹೋಗುತ್ತೇವೆ.’

ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In