ತಿರುಪತಿ: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯಿಭಾರ ಕುಸಿತದಿಂದ ದೇಶದ ಹಲವು ರಾಜ್ಯಗಳಲ್ಲಿ ಎಡಬಿಡದೆ ಸುರಿಯುತ್ತಿದ್ದು, ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಮೂರಾಬಟ್ಟೆಯಾಗಿದೆ. ಮನೆಗಳಿಂದ ಹೊರಗೆ ಬಾರದಂತೆ ತಿರುಪತಿ ಜನರಿಗೆ ಸೂಚನೆ ನೀಡಲಾಗಿದೆ.
ತಿರುಪತಿಯಲ್ಲಿ ಗುರುವಾರ ಸಂಜೆಯಿಂದ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಅಸ್ತಗೊಂಡಿದೆ. ಟಿಟಿಡಿಯ ಎರಡು ಘಾಟ್ ರಸ್ತೆಗಳ ಮೇಲೆ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಹಾಗೂ ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ.
ಜಿಲ್ಲೆಯಾದ್ಯಂತ ಎಲ್ಲೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ದೇಗುಲನಗರದಲ್ಲಿ ಇಂಥಹ ಭೀಕರ ಮಳೆ 1996 ಸುರಿದಿತ್ತು. ಇದಾದ ಳಿಕ ಇದೇ ಮೊದಲು ಎನ್ನಲಾಗುತ್ತಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಕ್ಕಿ ವಾಹನಗಳು ಕೊಚ್ಚಿ ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಜೊತೆಗೆ ತಿರುಮಲ ಬೆಟ್ಟಕ್ಕೆ ಹತ್ತುವ ರಸ್ತೆ ಮಾರ್ಗದಲ್ಲಿ ಹಲವೆಡೆ ಭೂ ಕುಸಿತ ಉಂಟಾಗಿದ್ದು, ಮರಗಳು ಬುಡ ಮೇಲಾಗಿವೆ.
ಇದನ್ನೂ ಓದಿ: 110 countries agree: ಭಾರತದ ಕೋವಿಡ್ ಲಸಿಕೆ ಪ್ರಮಾಣ ಪತ್ರ ಮಾನ್ಯತೆಗೆ 110 ದೇಶಗಳ ಒಪ್ಪಿಗೆ
ತಿರುಪತಿಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ನೀರು ನುಗ್ಗಿದೆ. ಟಿಟಿಡಿಯ ಎಲ್ಲ ಸರ್ವರ್, ನೆಟ್ವರ್ಕ್ ಕೂಡ ಸ್ಥಗಿತವಾಗಿದ್ದು, ನಗರದಲ್ಲಿ ರೈಲ್ವೆ ಅಂಡರ್ಪಾಸ್ಗಳು ಕೂಡ ಮುಳುಗಡೆಯಾಗಿವೆ. ಹೈದರಾಬಾದ್ ಮತ್ತು ಬೆಂಗಳೂರಿನಿಂದ ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಎರಡು ಪ್ರಯಾಣಿಕರ ವಿಮಾನಗಳಿಂದು ಪ್ರತಿಕೂಲ ಹವಾಮಾನದಿಂದಾಗಿ ಹಿಂತಿರುಗಿದೆ ಎಂದು ತಿರುಪತಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್ ಸುರೇಶ್ ತಿಳಿಸಿದ್ದಾರೆ.
ಇದನ್ನೂ ಓದಿ: 110 countries agree: ಭಾರತದ ಕೋವಿಡ್ ಲಸಿಕೆ ಪ್ರಮಾಣ ಪತ್ರ ಮಾನ್ಯತೆಗೆ 110 ದೇಶಗಳ ಒಪ್ಪಿಗೆ
Discussion about this post