ಚಿಕ್ಕಮಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಲಾಗಿದೆ ಎಂದು ಸಿಪಿಐ ಜಿಲ್ಲಾಕಾರ್ಯದರ್ಶಿ ಎಚ್.ಎಂ.ರೇಣುಕಾರಾಧ್ಯ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಿಪಿಐ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದು, ವಿಧಾನಪರಿಷತ್ ಮತ್ತು ನಗರಸಭೆ ಮುಂಬರುವ ಜಿಲ್ಲಾಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ಬಗ್ಗೆ ಮಾತುಕತೆಗಳು ನಡೆದಿದ್ದು, ಕಾಂಗ್ರೆಸ್ ಮುಖಂಡರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಹೇಳಿದರು.
ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಹಣಾಹಣಿ ನಡೆಯಲಿದೆ. ಸಂವಿಧಾನ, ಪ್ರಗತಿ,ಜಾತ್ಯತೀತ ವ್ಯವಸ್ಥೆ ವಿರೋಧಿಯಾಗಿರುವ ಬಿಜೆಪಿ ಸೋಲಿಸಲು ಪಕ್ಷದ ಬೆಂಬಲಿತ ಸದಸ್ಯರನ್ನು ವಿನಂತಿಸಲಾಗಿದೆ ಎಂದರು.
ನಗರಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ನೀಡಲಾಗುವುದು, ಕಾಂಗ್ರೆಸ್ ಮುಖಂಡರು ಆ ಪಕ್ಷದ ಅಭ್ಯರ್ಥಿಗಳ ಪಟ್ಟಿನೀಡುತ್ತಿದ್ದು, ಕುಳಿತು ಚರ್ಚಿಸಿ ಯಾವವಾರ್ಡಿನಲ್ಲಿ ಯಾರು ಸ್ಪರ್ಧಿಸಬೇಕೆಂದು ತೀರ್ಮಾನಕ್ಕೆ ಬರಲಾಗುವುದು ಎಂದು ನುಡಿದರು.
ನಗರಸಭೆಗೆ ಬಿಡುಗಡೆಯಾದ ಅಭಿವೃದ್ಧಿ ಅನುದಾನವನ್ನು ಅಧಿಕಾರ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ದುರ್ಬಳಿಕೆ ಮಾಡಿಕೊಂಡಿದೆ ಎಂದು ಆರೋಪಿಸಿದ ಅವರು,ನಗರವನ್ನು ಕೊಳಚೆಯನ್ನಾಗಿಸಿ ರಸ್ತೆಗಳನ್ನು ಅಗೆದು ಹಾಳುಗೆಡವಿರುವುದೇ ಬಿಜೆಪಿ ಸಾಧನೆಯಾಗಿದೆ ಎಂದು ದೂರಿದರು.
ಯಾವುದಾದರೊಂದು ನೆಪಹೇಳಿಕೊಂಡು ನಗರಸಭೆಗೆ ಚುನಾವಣೆ ನಡೆಯದಂತೆ ನೋಡಿಕೊಳ್ಳಲಾಗಿದೆ.ಶಾಸಕರು ತಮ್ಮ ಹಿಂಬಾಲಕರನ್ನು ಮುಂದಿಟ್ಟುಕೊಂಡು ನ್ಯಾಯಾಲಯದಲ್ಲಿರುವ ಅರ್ಜಿಯನ್ನು ವಾಪಸ್ ಪಡೆಯದೆ ಚುನಾವಣೆ ಮುಂದೂಡಿಕೊಂಡು ಬಂದಿರುವ ಬಿಜೆಪಿ ನಡೆ ನಗರದ ಜನರಿಗೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದರು.
ಶಾಸಕರ ಬೆಂಬಲಿಗರು ಸಲ್ಲಿಸಿರುವ ಅರ್ಜಿಯನ್ನು ಹಿಂಪಡೆಯಲು ಶಾಸಕರು ಸೂಚಿಸಬೇಕೆಂದು ಒತ್ತಾಯಿಸಿದರು.ಪಕ್ಷದ ರಾಜ್ಯಮಂಡಳಿ ಸದಸ್ಯ ಗುಣಶೇಖರ್, ಮುಖಂಡ ಎಸ್.ವಿಜಯಕುಮಾರ್ ಇದ್ದರು.
CPI supports Congress party candidate

























Discussion about this post