ಬೆಳಗಾವಿ: ಬೆಳೆ ಹಾನಿಗೆ ಒಳಗಾದ ರೈತರಿಗೆ ಡಿಸೆಂಬರ ಅಂತ್ಯದೊಳಗೆ ಪರಿಹಾರ ಒದಗಿಸಲಾಗುವದು. ಮನೆ ಹಾನಿಗೆ ಒಳಗಾದವರಿಗೆ ನಿಯಮಾನುಸಾರ ಪರಿಶೀಲಿಸಿ ಜನೇವರಿ ೧೫ ಒಳಗಾಗಿ ಪಾವತಿಸಲು ಕಾಲಾವಧಿ ನಿಗದಿ ಪಡಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿ ಕಿತ್ತೂರು ತಾಲೂಕಿನಲ್ಲಿ ಬೆಳೆಹಾನಿಗೆ ಒಳಗಾದ ೮೭೭ ಅರ್ಹರಿಗೆ ೨೬.೭೯ ಲಕ್ಷ ರೂ. ಹಾಗೂ ಬೈಲಹೊಂಗಲ ತಾಲೂಕಿನ ೫೧೪೭ ಅರ್ಹರಿಗೆ ೫೬೨.೭೦ ಲಕ್ಷ ರೂ ಪಾವತಿಸಲಾಗಿದೆ.
ಎ ಮತ್ತು ಬಿ ವರ್ಗದ ಮನೆ ಹಾನಿಗೆ ಮೊದಲ ಕಂತಿನಲ್ಲಿ ತಲಾ ೯೫,೧೦೦ರೂ ಹಾಗೂ ಸಿ ವರ್ಗದ ಮನೆಗಳಿಗೆ ಒಂದೇ ಕಂತಿನಲ್ಲಿ ತಲಾ ೫೦,೦೦೦ ರೂ. ಪಾವತಿಸಲು ಸೂಚಿಸಿ ಅನುದಾನ ಬಿಡುಗಡೆ ಮಾಡಲಾಗಿದೆ. ಮೂಲಭೂತ ಸೌಕರ್ಯಗಳ ತುರ್ತು ದುರಸ್ತಿಗೆ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ನಗರಾಭಿವೃದ್ಧಿ, ಜಲಸಂಪನ್ಮೂಲ ಇಲಾಖೆಯಲ್ಲಿ ಲಭ್ಯವಿರುವ ಅನುದಾನಕ್ಕೆ ಅನುಗುಣವಾಗಿ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ವಿರೋಧ ಪಕ್ಷದ ಸದಸ್ಯರು ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಸಚಿವರ ರಾಜೀನಾಮೆಗೆ ಆಗ್ರಹಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು. ಜೆಡಿಎಸ್ ಸದಸ್ಯರು ಭಾಷೆಯ ಕಾರಣಕ್ಕಾಗಿ ಕೊಲ್ಲಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿರುವದು, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆ ಮಸಿ ಬಳಿದ ಕಿಡಿಗೇಡಿಗಳನ್ನು ಬಂಧಿಸಲು ಆಗ್ರಹಿಸಿ ಚರ್ಚೆಗೆ ಅವಕಾಶ ಕೋರುತ್ತಿದ್ದರು. ಗದ್ದಲದ ನಡುವೆಯೇ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಶ್ನೋತ್ತರ ಕಲಾಪವನ್ನು ಪೂರ್ಣಗೊಳಿಸಿದರು.
ಬೆಳೆ ಹಾನಿ ಪರಿಹಾರ ಡಿಸೆಂಬರ್ ಅಂತ್ಯಕ್ಕೆ ಪಾವತಿ: ಸಚಿವ ಆರ್ ಅಶೋಕ
ಬೆಳಗಾವಿ ಸುವರ್ಣಸೌಧ (ಕರ್ನಾಟಕ ವಾರ್ತೆ)ಡಿ.೨೦; ಬೆಳೆ ಹಾನಿಗೆ ಒಳಗಾದ ರೈತರಿಗೆ ಡಿಸೆಂಬರ ಅಂತ್ಯದೊಳಗೆ ಪರಿಹಾರ ಒದಗಿಸಲಾಗುವದು. ಮನೆ ಹಾನಿಗೆ ಒಳಗಾದವರಿಗೆ ನಿಯಮಾನುಸಾರ ಪರಿಶೀಲಿಸಿ ಜನೇವರಿ ೧೫ ಒಳಗಾಗಿ ಪಾವತಿಸಲು ಕಾಲಾವಧಿ ನಿಗದಿ ಪಡಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ಕಿತ್ತೂರು ತಾಲೂಕಿನಲ್ಲಿ ಬೆಳೆಹಾನಿಗೆ ಒಳಗಾದ ೮೭೭ ಅರ್ಹರಿಗೆ ೨೬.೭೯ ಲಕ್ಷ ರೂ. ಹಾಗೂ ಬೈಲಹೊಂಗಲ ತಾಲೂಕಿನ ೫೧೪೭ ಅರ್ಹರಿಗೆ ೫೬೨.೭೦ ಲಕ್ಷ ರೂ ಪಾವತಿಸಲಾಗಿದೆ. ಎ ಮತ್ತು ಬಿ ವರ್ಗದ ಮನೆ ಹಾನಿಗೆ ಮೊದಲ ಕಂತಿನಲ್ಲಿ ತಲಾ ೯೫,೧೦೦ರೂ ಹಾಗೂ ಸಿ ವರ್ಗದ ಮನೆಗಳಿಗೆ ಒಂದೇ ಕಂತಿನಲ್ಲಿ ತಲಾ ೫೦,೦೦೦ ರೂ. ಪಾವತಿಸಲು ಸೂಚಿಸಿ ಅನುದಾನ ಬಿಡುಗಡೆ ಮಾಡಲಾಗಿದೆ. ಮೂಲಭೂತ ಸೌಕರ್ಯಗಳ ತುರ್ತು ದುರಸ್ತಿಗೆ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ನಗರಾಭಿವೃದ್ಧಿ, ಜಲಸಂಪನ್ಮೂಲ ಇಲಾಖೆಯಲ್ಲಿ ಲಭ್ಯವಿರುವ ಅನುದಾನಕ್ಕೆ ಅನುಗುಣವಾಗಿ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ವಿರೋಧ ಪಕ್ಷದ ಸದಸ್ಯರು ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಸಚಿವರ ರಾಜೀನಾಮೆಗೆ ಆಗ್ರಹಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು. ಜೆಡಿಎಸ್ ಸದಸ್ಯರು ಭಾಷೆಯ ಕಾರಣಕ್ಕಾಗಿ ಕೊಲ್ಲಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿರುವದು, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆ ಮಸಿ ಬಳಿದ ಕಿಡಿಗೇಡಿಗಳನ್ನು ಬಂಧಿಸಲು ಆಗ್ರಹಿಸಿ ಚರ್ಚೆಗೆ ಅವಕಾಶ ಕೋರುತ್ತಿದ್ದರು. ಗದ್ದಲದ ನಡುವೆಯೇ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಶ್ನೋತ್ತರ ಕಲಾಪವನ್ನು ಪೂರ್ಣಗೊಳಿಸಿದರು.
Crop Damage Compensation Paid At End of December
+
Discussion about this post