ಚಿಕ್ಕಮಗಳೂರು: ಚುನಾವಣಾ ಆಯೋಗದ ಅನುಮತಿ ಪಡೆದು ಬೆಳೆ ಹಾನಿ ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.
ಇದನ್ನೂ ಓದಿ: High Court: ಡಿಸೆಂಬರ್ 30ರೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ
ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು ರಾಜಕಾರಣಿಗಳು, ಮಂತ್ರಿಗಳು, ಶಾಸಕರನ್ನ ಕರೆದುಕೊಂಡು ಹೋಗದೆ ಅಧಿಕಾರಿಗಳಷ್ಟೆ ಹೋಗಿ ಬೆಳೆ ಹಾನಿ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಇದನ್ನೂ ಓದಿ: Bitcoin: ಬಿಟ್ ಕಾಯಿನ್ ಪ್ರಕರಣ: ಯಾರೇ ಭಾಗಿಯಾಗಿದ್ದರೂ ಅವರ ಮೇಲೆ ಸೂಕ್ತ ಕ್ರಮ
ಇಂದು ಹಣ ಬಿಡುಗಡೆ ಮಾಡಬೇಕಿತ್ತು, ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಅದು ಸಾಧ್ಯವಾಗಿಲ್ಲ. ಬೆಳೆ ಹಾನಿಯ ಕುರಿತಾಗಿ ಮಾಹಿತಿ ಪಟ್ಟಿ ಇದ್ದು. ಕೊಟ್ಯಾಂತರ ಹಣ ಬಿಡುಗಡೆ ಮಾಡಬೇಕು, ಚುನಾವಣಾ ಆಯೋಗದ ಅನುಮತಿ ಸಿಕ್ಕರೆ ಮಾಡುವುದಾಗಿ ತಿಳಿಸಿದರು.
ಬೆಳಗಾವಿ, ಬಾಗಲಕೋಟೆ, ಹಾವೇರಿ, ಉತ್ತರಕನ್ನಡ, ಗದಗದಲ್ಲಿ ಸೇರಿದಂತೆ ವಿವಿಡೆದೆ ಹೆಚ್ಚಿನ ಹಾನಿಯಾಗಿದೆ. ಬೆಳಗಾವಿ 76 ಸಾವಿರ ರೈತರ ಬೆಳೆ ಹಾನಿ, ಬಾಗಲಕೋಟೆ 20 ಸಾವಿರ ರೈತರ ಬೆಳೆ ಹಾನಿಯಾಗಿದ್ದು, ಎಲ್ಲೆಲ್ಲಿ , ಬೆಳೆಹಾನಿಯಾಗಿದೆ ಅವರಿಗೆಲ್ಲಾ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
Distribution of crop damage relief with the permission of the Election Commission
Discussion about this post