ಕೊಡಗು: ಕೊಡಗು ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಡವಾಗಿದ್ದು, ಕಾಫಿ ಬೆಳೆ ಹಾನಿ ಸಂಬಂಧ ಮರು ಸರ್ವೆ ಮಾಡಿ 15 ದಿನಗಳಲ್ಲಿ ವರದಿ ನೀಡಿ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಇದನ್ನೂ ಓದಿ: Farmers distrust: ಕೃಷಿ ಕಾಯ್ದೆ ಹಿಂಪಡೆದ ಮಾತ್ರಕ್ಕೆ ರೈತರ ಅಪನಂಬಿಕೆ ಕಡಿಮೆಯಾಗದು
ಅಕಾಲಿಕ ಮಳೆಯಿಂದಾಗಿ ಸೋಮವಾರಪೇಟೆ ತಾಲೂಕಿನ ವಿವಿಧೆಡೆ ಕಾಫಿ, ಭತ್ತ, ಮುಸುಕಿನ ಜೋಳದ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಪರಿಸ್ಥಿತಿ ಹೇಗಿದೆ.? ಸಚಿವರು ಹೇಳಿದ್ದೇನು.?
ಇದನ್ನೂ ಓದಿ: e Paper – November 24, 2021
ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಭಾರಿ ಮಳೆಯಿಂದಾಗಿ 146 ಮನೆಗಳು ಹಾನಿಯಾಗಿವೆ. 40,878 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ, 22 ಜಾನುವಾರುಗಳ ಪ್ರಾಣ ಹಾನಿ, 10 ಜಾನುವಾರು ಕೊಟ್ಟಿಗೆ ಹಾನಿ ಹಾಗೂ 127 ಕೋಟಿ ರೂ.ಗಳ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದು, ಈಗಾಗಲೇ ಹಲವು ಹಾನಿ ಪ್ರಕರಣಕ್ಕೆ ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ. ಸದ್ಯ ಅಕಾಲಿಕ ಮಳೆಯಿಂದ ಹಾನಿಯಾಗಿರುವ ಬೆಳೆ ಹಾನಿಗೆ 15 ದಿನಗಳಲ್ಲಿ ಪರಿಹಾರ ಭರಿಸಲಾಗುವುದು.
ಇದನ್ನೂ ಓದಿ: Electoral Code of Conduct : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಚುನಾವಣಾಧಿಕಾರಿ ಮೇಲೆ ಬಿಜೆಪಿ ದೂರು
ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಹೆಚ್ಚಿನ ಹಣವಿದೆ. ಕೃಷಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಸಚಿವರು ನುಡಿದರು. ನವೆಂಬರ್ 26 ಮತ್ತು 27 ರಂದು ಜಿಲ್ಲೆಯಲ್ಲಿಯೂ ಅಕಾಲಿಕ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಕೃಷಿಕರು ಮುನ್ನೆಚ್ಚರ ವಹಿಸಬೇಕು ಎಂದು ಆರ್.ಅಶೋಕ್ ಸಲಹೆ ಮಾಡಿದರು.
ಇದನ್ನೂ ಓದಿ: BJP : ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಎಂ.ಕೆ.ಪ್ರಾಣೇಶ್ ನಾಮಪತ್ರ ಸಲ್ಲಿಕೆ
ಅಕಾಲಿಕ ಮಳೆಯಿಂದಾಗಿ ಸೋಮವಾರಪೇಟೆ ತಾಲೂಕಿನ ಹೆಬ್ಬಾಲೆ ಗ್ರಾ.ಪಂ.ವ್ಯಾಪ್ತಿಯ ಮರೂರು ಗ್ರಾಮದಲ್ಲಿ ಅಧಿಕ ಮಳೆಯಿಂದಾಗಿ ಮುಸುಕಿನ ಜೋಳ ಮೊಳಕೆ ಬರುತ್ತಿದೆ. ಹಾಗೆಯೇ ಶುಂಠಿ ಬೆಳೆ ಕೊಳೆಯುತ್ತಿದೆ. ಆದ್ದರಿಂದ ಕೂಡಲೇ 15ದಿನದೊಳಗೆ ಬೆಳೆ ಹಾನಿಯಾದ ಕೃಷಿಕರಿಗೆ ಪರಿಹಾರ ವಿತರಿಸಲು ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವರು ಹೇಳಿದರು.
ಇದನ್ನೂ ಓದಿ: legislative council : ಬಿ.ಫಾರ್ಮ್ ನೊಂದಿಗೆ ತೆರಳಿ ಗಾಯತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಭಾರಿ ಮಳೆಯಿಂದ ಮೂರು ಮಾನವ ಪ್ರಾಣ ಹಾನಿಗೆ ಪರಿಹಾರ ವಿತರಿಸಲಾಗಿದೆ. 22 ಜಾನುವಾರು ಪ್ರಾಣ ಹಾನಿ ಪ್ರಕರಣಗಳಿಗೆ 4.86 ಲಕ್ಷ ರೂ ಪರಿಹಾರ ನೀಡಲಾಗಿದೆ. ಗುಡಿಸಲು ಹಾನಿ ಹಾಗೂ ಜಾನುವಾರು ಕೊಟ್ಟಿಗೆ ಹಾನಿ ಪ್ರಕರಣಗಳಿಗೆ ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.
Crop damage relief
Discussion about this post