ಚಿಕ್ಕಮಗಳೂರು: ಅಕಾಲಿಕ ಮಳೆಯಿಂದ ಜಿಲ್ಲಾದ್ಯಂತ ಭಾರೀ ಪ್ರಮಾಣದ ಬೆಳೆನಷ್ಟ ಉಂಟಾಗಿದ್ದು, ಶೀಘ್ರವೇ ನಷ್ಟ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಕಲ್ಪಿಸುವಂತೆ ಕಿಸಾನ್ ಕಾಂಗ್ರೆಸ್ ಸಮಿತಿ ಜಿಲ್ಲಾಕಾರ್ಯಾಧ್ಯಕ್ಷ ಕೆಂಪನಹಳ್ಳಿ ರಸೂಲ್ಖಾನ್ ರಾಜ್ಯಸರ್ಕಾರವನ್ನು ಒತ್ತಾಯಿ ಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕಾಲಿಕ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು, ತರಕಾರಿ ಬೆಳೆ ಭಾರೀ ಪ್ರಮಾಣದಲ್ಲಿ ನಾಶವಾಗಿದ್ದು ಕೋಟ್ಯಾಂತರ ರೂ. ನಷ್ಟವಾಗಿದೆ. ತಕ್ಷಣ ಬೆಳೆನಷ್ಟ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದರು.
ಕಳೆದ ಮೂನಾಲ್ಕು ವರ್ಷಗಳಿಂದ ಹವಮಾನ ವೈಪರೀತ್ಯದಿಂದ ರೈತರು ಮತ್ತು ಬೆಳೆಗಾ ರರು ನಷ್ಟ ಅನುಭವಿಸುತ್ತಿದ್ದಾರೆ. ಆದರೆ, ಜಿಲ್ಲೆಯ ಜನಪ್ರತಿನಿಧಿಗಳು ಈ ಬಗ್ಗೆ ಚಕಾರ ಎತ್ತು ತ್ತಿಲ್ಲ, ಶಾಸಕ ಸಿ.ಟಿ.ರವಿ, ಕೇಂದ್ರ ಸಚಿವೆ ಶೋಭಾಕರಂದ್ಲಾಜೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸೇರಿದಂತೆ ಯಾರು ಸರ್ಕಾರ ಮೇಲೆ ಒತ್ತಡ ತರದಿರುವುದು ಜಿಲ್ಲೆಯ ಜನರ ದುರಾದೃಷ್ಟವಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಬೆಳೆನಷ್ಟವಾಗಿರುವ ರೈತರು ಮತ್ತು ಬೆಳೆಗಾರರ ನೆರವಿಗೆ ಸರ್ಕಾರ ಮತ್ತು ಜನಪ್ರತಿನಿಧಿಗಳು ಧಾವಿಸಬೇಕು. ನಿರ್ಲಕ್ಷ್ಯವಹಿಸಿದರೆ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿ ಗಳ ಮನೆಮುಂದೇ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಂಘಟನೆಯ ಮುಖಂಡ ಆದಿತ್ಯಗೌಡ ಮಾತನಾಡಿ, ಅಕಾಲಿಕ ಮಳೆಯಿಂದ ಕಾಫಿಹಣ್ಣು ಕೊಯ್ಲು ಮಾಡಲು ಸಾಧ್ಯವಾದೆ. ಗಿಡದಿಂದ ಉದುರುತ್ತಿದೆ. ಸಂಸ್ಕರಣೆ ಮಾಡಲು ಸಾಧ್ಯ ವಾಗುತ್ತಿಲ್ಲ, ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂಬಂತೆ ರೈತರ ಪಾಡಾಗಿದ್ದು, ಇಂತಹ ಕ್ಲೀಷ್ಟ ಸಂದರ್ಭದಲ್ಲೂ ಜನಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿರುವುದು ನಮ್ಮ ದೌಭಾಗ್ಯವಾಗಿದ್ದು ಶೀಘ್ರವೇ ಸರ್ಕಾರ ರೈತರ ನೆರವಿಗೆ ಬರಬೇಕು. ಇಲ್ಲದಿದ್ದರೇ ರೈತರು ಆತ್ಮಹತ್ಯೆಯ ದಾರಿ ತುಳಿಯಬೇಕಾಗುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ಅವರೇಗೌಡ, ಅನಂತ್ಕಡೂರು, ಸಖ ರಾಯಪಟ್ಟಣ ಮಂಜುನಾಥ್ ಸೇರಿದಂತೆ ಅನೇಕರು ಇದ್ದರು.
Demand for crop loss survey and proper compensation
Discussion about this post