ಚಿಕ್ಕಮಗಳೂರು: ಡಿಸೆಂಬರ್ ೩ ರಂದು ಜಿಲ್ಲೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿರುವ ಕಾಂಗ್ರೆಸ್ ಮತದಾರರ ಸಮಾವೇಶದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದೇನೆ ಎಂದು ಜೆಡಿಎಸ್ ಮುಖಂಡ ಬಿ.ಹೆಚ್. ಹರೀಶ್ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕ್ಕೆ ಸೇರ್ಪಡೆಗೊಳುತ್ತಿದ್ದೇನೆ. ಬಿಜೆಪಿಯ ದುರಾಳಿತ ವ್ಯವಸ್ಥೆ ವಿರುದ್ದವಾಗಿ ಹೋರಾಟ ನಡೆಸಲಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಎಂದು ನನಗನಿಸಿದೆ. ಆ ನಿಟ್ಟಿನಲ್ಲಿ ಬೆಂಬಲಿಗರು, ಹಾಗೂ ರೈತರೊಂದಿಗೆ ಚರ್ಚಿಸಿ, ಸಲಹೆ, ಅಭಿಪ್ರಾಯ ಪಡೆದು ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದಾಗ ೩೦ ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಸಮೀಪದ ಸ್ಪರ್ಧಿಯಿಂದ ಸೋಲು ಅನುಭವಿಸಿದ್ದೇ. ನಾನೊಬ್ಬ ರೈತನ ಮಗನಾಗಿದ್ದು ರೈತರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆ ಒಳಿತು ಎಂದು ತೀರ್ಮಾನಿಸಿದ್ದೇನೆ. ಕಾಂಗ್ರೆಸ್ ನಾಯಕರ ಜತೆ ಮಾತುಕತೆ ನಡೆಸಿದ್ದು ಕಾಂಗ್ರೆಸ್ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಚಂದ್ರಶೇಖರ್, ಅಬ್ದುಲ್ ಅಜೀದ್, ಉಮೇಶ್, ಬಾಬುಶೇಠ್, ಪುಟ್ಟಸ್ವಾಮಿ ಉಪಸ್ಥಿತರಿದ್ದರು.
D. JD(S) leader Bh Harish joins Congress at 3
Discussion about this post