ಚಿಕ್ಕಮಗಳೂರು: ರಾಜ್ಯಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನದಲ್ಲಿ ನಗರದ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿಗಾರರು, ಸಾಹಿತಿಗಳು, ನಿವೃತ್ತ ಉಪನ್ಯಾಸಕರಾದ ಬಿ.ತಿಪ್ಪೇರುದ್ರಪ್ಪ ಅವರಿಗೆ ಡಾ.ಎಚ್ ನರಸಿಂಹಯ್ಯ ಪ್ರಶಸ್ತಿ ದೊರೆತಿದ್ದು ಡಿಸೆಂಬರ್ ೨೯ರಂದು ಬೆಳಗ್ಗೆ ೧೦. ಗಂಟೆಗೆ ಶಿವಮೊಗ್ಗದ ಕುವೆಂಪು ಕಲಾಮಂದಿರದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿ?ತ್ತು. ದೊಡ್ಡಬಳ್ಳಾಪುರ. ರಾಜ್ಯ ಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ೨೦೨೧ (ಸಾಹಿತ್ಯ, ವಿಜ್ಞಾನ, ಸಂಸ್ಕೃತಿ, ಸಮಾಗಮದಲ್ಲಿ) ಆಜಾದಿ ಕಾ ಅಮೃತ ಮಹೋತ್ಸವ, ವಿಶ್ವಮಾನವ ದಿನಾಚರಣೆ, ವಿಶೇಷವಾಗಿ ರಾಜ್ಯಮಟ್ಟದ ಹೆಚ್ಎನ್. ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಿದ್ದು ಇಲ್ಲಿ ಪ್ರಶಸ್ತಿಯನ್ನು ಗಣ್ಯರಿಂದ ಸ್ವೀಕರಿಸಲಿದ್ದಾರೆ.
ಇಸ್ರೋ ಮಾಜಿ ಅಧ್ಯಕ್ಷ ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ಕನ್ನಡಿಗ ಕಿರಣ್ಕುಮಾರ್ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು. ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ. ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಪ್ರಶಸ್ತಿ ಪ್ರಧಾನದ ಬಳಿಕ ವಿಶ್ವಕವಿ ಕುವೆಂಪು, ಹಾಗೂ ಡಾ.ಎಚ್. ನರಸಿಂಹಯ್ಯ ಕುರಿತ ವಿಚಾರಗೋಷ್ಠಿ ನಡೆಯಲಿದ್ದು ಮಾಜಿ ಸಿಎಂ ಕುಮಾರಸ್ವಾಮಿ ಉದ್ಘಾಟನೆ ಮಾಡಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಡಾ.ಎಚ್.ಎನ್.ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.
ಚಿತ್ರದುರ್ಗದ ಶ್ರೀ ಶಿವಮೂರ್ತಿ ಮುರುಘಾ ಶರಣರು ದಿವ್ಯ ಸಾನಿಧ್ಯ ವಹಿಸಲಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯದ ೩೧ ಜಿಲ್ಲೆಗಳಿಂದ ಒಬ್ಬಬ್ಬ ಸಾಧಕರನ್ನು ಆಯ್ಕೆ ಮಾಡಿ ಡಾ.ಎಚ್ ನರಸಿಂಹಯ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
Dr. H Narasimhaiya Award
Discussion about this post