ಚಿಕ್ಕಮಗಳೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕನ ಹೊಣೆಯಾಗಿದ್ದು, ಪರಿಸರವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ತಿಳಿಸಿದರು.
ಸಂಸ್ಥಾಪನಾ ದಿನಾಚರಣೆ ಹಾಗೂ ಸ್ವಾತಂತ್ಯೋತ್ಸವದ ಅಮೃತ ಮಹೋತ್ಸವ, ಅಂಗವಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ನಿಷೇಧ ಕುರಿತಾದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಪರಿಸರವನ್ನು ಸಂರಕ್ಷಿಸಿರುವ ಹೊಣೆ ನಮ್ಮದಾಗಿದೆ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಬೇಕು ಹೆಚ್ಚು ಗಿಡಗಳನ್ನು ಬೆಳೆಸಬೇಕು, ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ ಬದಲಾಗಿ ಬಟ್ಟೆಯ ಬ್ಯಾಗ್ಗಳನ್ನು ಉಪಯೋಗಿಸಬೇಕು ಇದರಿಂದ ಪರಿಸರದಲ್ಲಿ ಕಲುಷಿತವಾಗುವುದು ಕಡಿಮೆಯಾಗಲಿದೆ ಎಂದು ತಿಳಿಸಿದರು.
ಕಳೆದ ಒಂದು ವಾರದಿಂದ ಸ್ಕೌಟ್ ಗೈಡ್ಸ್ ಸಪ್ತಾಹದ ಅಂಗವಾಗಿ ಸೈಕಲ್ ಜಾಥ, ಮಕ್ಕಳಿಗೆ ರಸಪ್ರಶ್ನೆ ಸೇರಿದಂತೆ ಮತ್ತಿತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆ ಹಿನ್ನಲೆ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್ ಷಡಕ್ಷರಿ, ಜಿಲ್ಲಾ ಸ್ಕೌಟ್ ಆಯುಕ್ತ ಎ. ಎನ್. ಮಹೇಶ್, ಇಸಿಓ ತ್ಯಾಗರಾಜ್ ಅರಸ್, ಜಿಲ್ಲಾ ಸಂಘಟಕರುಗಳಾದ ಕಿರಣ್ ಕುಮಾರ್, ನವೀನ್ ಕುಮಾರ್, ಜ್ಯೋತಿ, ಸಾಯಿರಾಬಾನು, ಹಾಗೂ ವಿವಿಧ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:
Scouts-Guides flag card release: ಜಿಲ್ಲಾಧಿಕಾರಿಗಳಿಂದ ಭಾರತ ಸ್ಕೌಟ್ಸ್-ಗೈಡ್ಸ್ ಧ್ವಜ ಚೀಟಿ ಬಿಡುಗಡೆ
Discussion about this post