ಚಿಕ್ಕಮಗಳೂರು: ಶಿಕ್ಷಣ ವ್ಯಾಪಾರದ ಸರಕಲ್ಲ ಶಿಕ್ಷಣ ಬದಲಾಗಿ ಮನುಷ್ಯನನ್ನು ಪರಿಪೂರ್ಣನನ್ನಾಗಿ ಮಾಡುವುದರ ಕಡೆಗೆ ತೆಗೆದುಕೊಂಡು ಹೋಗುವಂತಹ ಸಾಧನ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೆತ್ರದ ಶಾಸಕ ಸಿ.ಟಿ ರವಿ ಹೇಳಿದರು.
ಅವರು ನಗರದ ಬಸವನಹಳ್ಳಿ ಸರ್ಕಾರಿ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಚಾರ್ಯರ ಉಪನ್ಯಾಸಕರ ಕೊಠಡಿ ಹಾಗೂ ಶೈಕ್ಷಣಿಕ ವರ್ಷದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಮಾಡಿ ಮಾತನಾಡಿದರು.
ಖಾಸಗಿ ಶಾಲೆಯಲ್ಲಿ ಮಕ್ಕಳು ಓದಿದರೆ ಮಾತ್ರ ಮಕ್ಕಳು ಬುದ್ದಿವಂತರಾಗುತ್ತಾರೆ ಎಂಬುದು ಭ್ರಮೆ ಎಂದ ಅವರು ನಮ್ಮ ಸರ್ಕಾರಿ ಶಾಲೆಯ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದಿ ಉನ್ನತವಾದ ಅಧಿಕಾರಿಗಳು ಹಾಗೂ ಸಮಾಜಕ್ಕೆ ತಮ್ಮದೆ ಆದ ಕೊಡುಗೆಗಳ ನೀಡಿ ಸಾಧನೆ ಮಾಡಿದ್ದಾರೆ ಎಂದು ಹೇಳಿದರು. ಸಮರ್ಥವಾದ ಚಿಂತನೆಗಳು ಶಿಕ್ಷಣದಿಂದ ಮಾತ್ರ ಮೂಡಿಬರಬೇಕು ಮತ್ತು ಮಕ್ಕಳು ಸಮಾಜಮುಖಿ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಒಳ್ಳೆಯ ಕೆಲಸಗಳನ್ನು ಮಾಡುವಂತಹ ವ್ಯಕ್ತಿಗಳಾಗಿ ಬಾಳಬೇಕು ಎಂದು ತಿಳಿಸಿದರು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ ಕಡ್ಡಾಯವಾಗಿ ಎಲ್ಲಾ ಮಕ್ಕಳಿಗೂ ಉಚಿತ ಶಿಕ್ಷಣ ದೊರೆಯುತ್ತಿದ್ದು ಯಾರೊಬ್ಬರು ಕೂಡ ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣವನ್ನು ವಿದ್ಯೆಯನ್ನು ಕಲಿತು ಸಮಾಜಕ್ಕೆ ಮತ್ತು ನಿಮ್ಮ ತಂದೆ ತಾಯಿಗಳಿಗೆ ಒಳ್ಳೆಯ ಹೆಸರು ತಂದು ಕೊಡುವ ವ್ಯಕ್ತಿಗಳಾಗಬೇಕು ಎಂದು ಹೇಳಿದರು. ನಮ್ಮ ಭಾರತಕ್ಕೆ ನೂತನ ಶಿಕ್ಷಣ ನೀತಿಯು ಭದ್ರ ಅಡಿಪಾಯವನ್ನಾಕಿ ಕೊಟ್ಟಿದೆ ಇದರಿಂದ ನವ ಪೀಳಿಗೆ ಬುನಾದಿಯಾಗಲಿದೆ ಆದ್ದರಿಂದ ಮಕ್ಕಳು ಸಿಕ್ಕ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಯೋಗ್ಯರಾಗಿ ಬಾಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಹಾಗೂ ಕಾಲೇಜಿನ ಪ್ರಾಂಶುಪಾಲರು ಸಾವಿತ್ರಿ ಹಾಗೂ ಉಪನ್ಯಾಸಕ ಸಿಬ್ಬಂದಿ ಸೇರಿದಂತೆ ಮತಿತರರಿದ್ದರು.
Discussion about this post