ಚಿಕ್ಕಮಗಳೂರು: ದೇಶದಲ್ಲಿ ಕೃಷಿ ಕಾಯ್ದೆಗಳನ್ನು ರೈತಸ್ನೇಹಿಯಾಗಿ, ಮತ್ತಷ್ಟು ಪರಿಣಾಮಕಾರಿಯಾಗಿ, ಜಾರಿಗೊಳಿಸಲಾಗುವುದು ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.
ನಗರದಲ್ಲಿ ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದೇಶದ ಹಿತಕ್ಕಾಗಿ, ಕೃಷಿಕರಿಗೆ ಒಳ್ಳೆಯದನ್ನು ಮಾಡುವ ನಿಟ್ಟಿನಲ್ಲಿ ಕೃಷಿ ಕಾಯ್ದೆಗಳನ್ನು ಪ್ರಧಾನಮಂತ್ರಿಗಳು ಜಾರಿಗೊಳಿಸಿದ್ದರು. ಹರಾಜಕತೆಗೆ ಸಂಚು ರೂಪಿಸುವವರನ್ನು ಮಟ್ಟಹಾಕಿ ವಿಫಲಗೊಳಿಸುವ ನಿಟ್ಟಿನಲ್ಲಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ, ಆದರೆ ಮುಂದಿನ ದಿನಗಳಲ್ಲಿ ಕೃಷಿ ತಜ್ಞರುಗಳು, ತಂತ್ರಜ್ಞರು, ಒಳಗೊಂಡ ಸಮಿತಿ ರಚಿಸಿ ಮತ್ತಷ್ಟು ಪರಿಣಾಮಕಾರಿ ಹಾಗೂ ರೈತ ಸ್ನೇಹಿಯಾಗಿ ಕಾಯ್ದೆಗಳನ್ನು ಜಾರಿಗೊಳಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಎಲ್ಲರ ಬೆಂಬಲದೊಂದಿಗೆ ೭೫೦ ಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಅವರು ಎಂದಿಗೂ ರೋಲ್ ಕಾಲ್ ರಾಜಕಾರಣ ಮಾಡಿದವರಲ್ಲ, ಬದಲಾಗಿ ಕಾಲ್ ರಿಸೀವ್ ಮಾಡಿ ರಾಜಕಾರಣ ಮಾಡಿದವರು. ಜಿಲ್ಲೆಯಲ್ಲಿ ಅಟ್ರಾಸಿಟಿ ರಾಜಕಾರಣ ಬೇಡ, ಬದಲಾಗಿ ವಿಶ್ವಾಸದ ರಾಜಕಾರಣ ಬೇಕು, ಆ ನಿಟ್ಟಿನಲ್ಲಿ ಅಭ್ಯರ್ಥಿ ಪ್ರಾಣೇಶ್ ಹೆಚ್ಚು ಮತಗಳೊಂದಿಗೆ ಗೆಲುವು ಸಾಧಿಸಲಿದ್ದಾರೆ ಎಂದರು ಭರವಸೆ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ೨೦ ಸ್ಥಾನಗಳಿಗೆ ಬಿಜೆಪಿ ಸ್ಪರ್ಧಿಸಲಿದ್ದು ೧೫ ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಕೈಗೊಂಡ ಜನಸ್ವರಾಜ್ ಯಾತ್ರೆ ಅಭೂತಪೂರ್ವ ಯಶಸ್ಸು ಕಂಡಿದ್ದು ಗ್ರಾಮಪಂಚಾಯಿತಿ ಸದಸ್ಯರ ಪಕ್ಷಕ್ಕೆ ಉತ್ತಮ ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ಮೋದಿ ಕೃಷಿ ಕಾಯ್ದೆ ಹಿಂಪಡೆದಿರುವ ಕುರಿತು ಹುಟ್ಟಿರುವ ಅನುಮಾನ ಬಗೆಹರಿಸಲಿ: ಹೆಚ್ಡಿಕೆ
Discussion about this post