ಶ್ರೀರಂಗಪಟ್ಟಣ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಬಹುಮತ ಬಂದರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದೆ ಆ ಮೇಲೆ ಪ್ರದಾನಿ ಮೋದಿ ಬೇಡ ಎಂದು ನನ್ನ ಮನವೊಲಿಸಿದ್ದರು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಬಹುಮತ ಗಳಿಸಿದ್ರೆ ನಾನು ರಾಜೀನಾಮೆ ನೀಡ್ತಿನಿ ಎಂದಿದ್ದೆ. ಅದರಂತೆ ಫಲಿತಾಂಶ ಪ್ರಕಟವಾದ ನಂತರ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಬರುವಂತೆ ನನಗೆ ಪತ್ರ ಬರೆದಿದ್ದರು.
ದೆಹಲಿಗೆ ಹೋದಾಗ ರಾಜೀನಾಮೆ ತೆಗೆದುಕೊಳ್ಳಿ ಎಂದು ಹೇಳಿದ್ದೆ. ರಾಜಕೀಯದಲ್ಲಿ ಹೀಗೆ ಮಾತನಾಡುವುದು ಮಾಮೂಲಿ. ಇದನ್ನೆಲ್ಲ ಸೀರಿಯಸ್ ಆಗಿ ತೆಗೆದುಕೊಳ್ಳಬೇಡಿ ಎಂದು ಮೋದಿ ನನ್ನ ಮನವೊಲಿಸಿದ್ದರು ಎಂದು ಹಿರಿಯ ರಾಜಕಾರಣಿ ದೇವೇಗೌಡರು ತಿಳಿಸಿದರು.
ರೈತನ ಮಗನಾದ ಪ್ರಧಾನಿಯಾಗಿ ಮಾಡಿರುವ ಕೆಲಸಗಳ ಬಗ್ಗೆ ಪುಸ್ತಕವೊಂದು ಬಿಡುಗಡೆಗೆ ಸಿದ್ಧವಾಗುತ್ತಿದೆ. ನಾನು ಏನು ಮಾಡಿದೆ ಎಂದು ಪ್ರಶ್ನಿಸುವವರಿಗೆ ಅದರಲ್ಲಿ ಉತ್ತರ ಸಿಗುತ್ತದೆ. ನಾನು ದೆಹಲಿಗೆ ಹೋದಾಗ ಒಂದು ಲೋಟ ಕಾಫಿ ಕೊಡಲಿಲ್ಲ. ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯನಾದಾಗ ರಾಜ್ಯದಲ್ಲಿ ಆಡಳಿತ ನಡೆಸಿದವರಿಂದಾಗಿ ಆಡಳಿತ ನಡೆಸಿದವರಿಂದ ನಮ್ಮ ಪಕ್ಷ 16 ರಿಂದ 2 ಸ್ಥಾನಕ್ಕೆ ಕುಸಿಯಿತು.
ನನ್ನ ರಾಜಕೀಯ ಜೀವನಕ್ಕೆ ಶಕ್ತಿ ತುಂಬಿದ್ದು ಹಾಸನ ಮತ್ತು ಮಂಡ್ಯ ಜಿಲ್ಲೆಗಳು. ನಾನು ಮುಖ್ಯಮಂತ್ರಿ ಆಗಲು ನಾಡಿನ ಸಮಸ್ತ ಜನರ ಕೊಡುಗೆಯಿದೆ. 2023-2024ರ ಚುನಾವಣೆಗಳಲ್ಲೂ ನಾನು ಸುಮ್ಮನೇ ಕೂರುವುದಿಲ್ಲ. ನನ್ನ ಹೋರಾಟದ ಸಂಕಲ್ಪವನ್ನು ಯಾರೂ ಕಿತ್ತುಕೊಳ್ಳಲು ಆಗುವುದಿಲ್ಲ ಎಂದರು.
ಇದೇ ವೇಳೆ ಪರಿಷತ್ ಚುನಾವಣಾ ಜೆಡಿಎಸ್ ಅಭ್ಯರ್ಥಿ ಅಪ್ಪಾಜಿಗೌಡರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ನಿಖಿಲ್ ಕುಮಾರಸ್ವಾಮಿಯವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಉಂಟಾದ ಸೋಲನ್ನು ನೆನಪಿಸಿಕೊಂಡ ಅವರು, ಅಂದಿನ ಚುನಾವಣೆಯ ಸೋಲನ್ನು ಮರೆಯಲು ಈ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.
Discussion about this post