ಚಿಕ್ಕಮಗಳೂರು: ಪೂರ್ವಿ ಸುಗಮ ಸಂಗೀತಾ ಅಕಾಡೆಮಿ ಟ್ರಸ್ಟ್ ಹಾಗೂ ಯುರೇಕಾ ಅಕಾಡೆಮಿ ಚಿಕ್ಕಮಗಳೂರು ಇವರ ಸಂಯುಕ್ತಾಶ್ರದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ೨೮ ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ಸಂಜೆ ೫.೩೦ಕ್ಕೆ ನಟ ಪುನೀತ್ ರಾಜ್ಕುಮಾರ್ ಸ್ಮರಣೆಯಲ್ಲಿ ಗೀತ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪೂರ್ವಿ ಸುಗಮ ಸಂಗೀತಾ ಅಕಾಡೆಮಿ ಟ್ರಸ್ಟ್ ಅಧ್ಯಕ್ಷ ಎಂ.ಎಸ್.ಸುಧೀರ್ ತಿಳಿಸಿದರು.
ಕಾರ್ಯಕ್ರಮವನ್ನು ಶಾಸಕ ಸಿ.ಟಿ ರವಿ ಉದ್ಘಾಟನೆ ಮಾಡಲಿದ್ದು, ಯುರೇಕಾ ಅಕಾಡೆಮಿ ಅಧ್ಯಕ್ಷ ದೀಪಕ್ ದೊಡ್ಡಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತರಾದ ಸ.ಗಿರಿಜಾ ಶಂಕರ್, ಆದಿಚುಂಚನಗಿರಿ ವಿವಿ ರಿಜಿಸ್ಟಾçರ್ ಡಾ.ಸಿ.ಕೆ.ಸುಬ್ಬರಾಯ, ಸುಗಮ ಸಂಗೀತ ಗಂಗಾಧ ಉಪಾಧ್ಯಕ್ಷ ನಟರಾಜ್, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಗೀತ ನಮನ ಕಾರ್ಯಕ್ರಮದಲ್ಲಿ ವಿಶೇಷವಾಗಿ ಇತ್ತೀಚೆಗೆ ಅಗಲಿದ ನಟ ಪುನೀತ್ರಾಜ್ಕುಮಾರ್ ಅವರ ಅಭಿನಯದ ಚಿತ್ರಗೀತೆಗಳನ್ನು ಹಾಡಲಾಗುವುದು, ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರ ಜತೆಗೆ ಬೆಂಗಳೂರು, ತುಮಕೂರು ಸೇರಿದಂತೆ ವಿವಿಧ ಕಡೆಗಳಿಂದ ಪ್ರಸಿದ್ದ ಗಾಯಕರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದರು.
ಕಳೆದ ೫ ವರ್ಷದಿಂದ ಎರಡು ಟ್ರಸ್ಟ್ಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ಆದರೆ ಕೋವಿಡ್ ಕಾರಣದಿಂದಾಗಿ ಕಳೆದ ೨ ವರ್ಷಗಳಿಂದ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ ಈ ಬಾರಿ ಪುನೀತ್ ಸ್ಮರಣೆಯಲ್ಲಿ ವಿಶೇಷವಾಗಿ ಆಚರಿಸಲಾಗುತ್ತಿದೆ ಎಂದರು ಈ ಸಂದರ್ಭದಲ್ಲಿ ರೂಪಾ ಆಶ್ವಿನ್, ವೆಂಕಟೇಶ್, ರಾಯನಾಯ್ಕ್ ಉಪಸ್ಥಿತರಿದ್ದರು.
ಇದನ್ನೂ ಓದಿ: Gitanamana to Kannadambe: ಸಂಗೀತ ಸಂಸ್ಥೆ ಸುಗಮ ಸಂಗೀತ ಗಂಗಾ: ಕನ್ನಡಾಂಬೆಗೆ ಗೀತನಮನ
Discussion about this post