• Home
  • About Us
  • Contact Us
  • Terms of Use
  • Privacy Policy
Monday, June 16, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ವಿಶ್ವಕಪ್‌ನಿಂದ ಟೀಂ ಇಂಡಿಯಾ ಔಟ್: ನಿರ್ಗಮಿತ ಕೋಚ್ ರವಿ ಶಾಸ್ತ್ರಿ ಕೊಟ್ಟ ಕಾರಣಗಳೇನು?

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೋಮವಾರ ರಾತ್ರಿ ನಡೆದ ಎರಡನೇ ಗುಂಪಿನ ಕೊನೆಯ ಪಂದ್ಯದಲ್ಲಿ ನಮೀಬಿಯಾ ವಿರುದ್ಧ 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾವು ತನ್ನ ವಿಶ್ವಕಪ್ ಅಭಿಯಾನಕ್ಕೆ ಅಂತ್ಯ ಹಾಡಿದೆ.

Shri News Desk by Shri News Desk
Nov 9, 2021, 04:41 pm IST
in ಕ್ರೀಡೆ
shastri_647_073117064853

ಟೀಂ ಇಂಡಿಯಾ ಆಟಗಾರರ ಜತೆ ರವಿ ಶಾಸ್ತ್ರಿ

Share on FacebookShare on TwitterTelegram

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೋಮವಾರ ರಾತ್ರಿ ನಡೆದ ಎರಡನೇ ಗುಂಪಿನ ಕೊನೆಯ ಪಂದ್ಯದಲ್ಲಿ ನಮೀಬಿಯಾ ವಿರುದ್ಧ 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾವು ತನ್ನ ವಿಶ್ವಕಪ್ ಅಭಿಯಾನಕ್ಕೆ ಅಂತ್ಯ ಹಾಡಿದೆ.

ಅಭ್ಯಾಸ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ, ಬಳಿಕ ಬಹುಮುಖ್ಯವಾದ ಪಂದ್ಯಗಳಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿತ್ತು ಟೀಮ್ ಇಂಡಿಯಾ.

ಈ ಸೋಲಿಗೆ ಆಟಗಾರರು ದೈಹಿಕವಾಗಿ ಮತ್ತು ಮಾನಸಿಕವಾಗಿ ಬಳಲಿದ್ದೇ ಕಾರಣ ಎಂದು ನಿರ್ಗಮಿತ ಮುಖ್ಯ ಕೋಚ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಈ ವಯಸ್ಸಿನಲ್ಲಿ ಮಾನಸಿಕವಾಗಿ ಬಳಲಿದ್ದೇನೆ ಎಂದರೆ ಒಪ್ಪಬಹುದು. ಆದರೆ ಈ ಹುಡುಗರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಾಕಷ್ಟು ಬಳಲಿದ್ದಾರೆ. ಅವರೆಲ್ಲಾ ಐಪಿಎಲ್ ಟೂರ್ನಿಯ ಕಾರಣದಿಂದ ಆರು ತಿಂಗಳುಗಳಿಂದ ಬಯೋಬಲ್‌ನಲ್ಲಿದ್ದರು. ಐಪಿಎಲ್ ಟೂರ್ನಿ ಮತ್ತು ವಿಶ್ವಕಪ್ ನಡುವೆ ಅಂತರ ಬೇಕಿತ್ತು. ದೊಡ್ಡಮಟ್ಟದ ಟೂರ್ನಿಗಳನ್ನು ಆಡುವಾಗ ಆಟಗಾರರ ಮೇಲೆ ಸಹಜವಾಗಿ ಒತ್ತಡ ಇರುತ್ತದೆ. ಅಂತಹ ಪಂದ್ಯಗಳಿಗೆ ಯಾವ ರೀತಿ ಸಿದ್ಧವಾಗಬೇಕೋ ಹಾಗೆ ತಯಾರಾಗಲು ಆಟಗಾರರಿಗೆ ಸಾಧ್ಯವಾಗಿಲ್ಲ’ ಎಂದು ಹೇಳಿದ್ದಾರೆ.

ಓದಿ: ಐಪಿಎಲ್‌ಗಿಂತ ದೇಶಕ್ಕಾಗಿ ಆಡುವುದಕ್ಕೆ ಗಮನ ನೀಡಿ: ಟೀಂ ಇಂಡಿಯಾ ಆಟಗಾರರ ವಿರುದ್ಧ ಕಪಿಲ್ ದೇವ್ ಗರಂ

‘ಸೋಲಿಗೆ ನೆಪಗಳನ್ನು ಹೇಳಿ ಸಮರ್ಥಿಸಿಕೊಳ್ಳಬೇಕು ಎಂಬುದು ನನ್ನ ಉದ್ದೇಶವಲ್ಲ. ಆಟದಲ್ಲಿ ಸೋಲು-ಗೆಲುವು ಸಹಜ. ಆದರೆ ಟೀಂ ಇಂಡಿಯಾ ಆಟಗಾರರು ಗೆಲುವಿಗಾಗಿ ಪ್ರಯತ್ನಿಸಲೇ ಇಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇಷ್ಟೇ ಅಲ್ಲದೆ, ಆಟಗಾರರಿಗೆ ವಿಶ್ರಾಂತಿ ನೀಡಬೇಕೆಂದು ಬಿಸಿಸಿಐ ಆಡಳಿತ ಮಂಡಳಿ ಜೊತೆ ಮನವಿ ಮಾಡುವುದು ತಮ್ಮ ಕೆಲಸವಲ್ಲ ಎಂದೂ ಅವರು ಹೇಳಿದ್ದಾರೆ. ತಂಡದ ಮುಖ್ಯ ಕೋಚ್ ಆಗಿ ಐದು ವರ್ಷಗಳ ಕಾಲ ಆಟಗಾರರ ಜೊತೆ ಪಾರದರ್ಶಕವಾಗಿ ಮತ್ತು ಹೊಂದಾಣಿಕೆಯಿಂದ ನಡೆದುಕೊಂಡಿದ್ದೇನೆ. ಹಿರಿಯ–ಕಿರಿಯ ಎಂಬ ಭೇದ ಮಾಡಿಲ್ಲ. ತಂಡದ ಎಲ್ಲಾ ಆಟಗಾರರನ್ನು ಒಂದೇ ರೀತಿ ನೋಡಿಕೊಂಡಿದ್ದೇನೆ. ಅಲ್ಲದೆ ಎಲ್ಲರಿಗೂ ಅವರವರ ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ಅವಕಾಶ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಮತ್ತೆ ವಿಕ್ಷಕವಿವರಣೆಗಾರನಾಗಿ ಕಾಣಿಸಿಕೊಳ್ಳುವ ಬಯಕೆ ಹೊಂದಿರುವುದಾಗಿಯೂ ಅವರು ಹೇಳಿದ್ದಾರೆ. ಟೀಂ ಇಂಡಿಯಾ ಕೋಚ್ ಆಗಿ ಜವಾಬ್ದಾರಿ ವಹಿಸಿ ಕೊಳ್ಳುವುದಕ್ಕೂ ಮುನ್ನ ಶಾಸ್ತ್ರಿಯವರು ಕ್ರಿಕೆಟ್ ವಿಕ್ಷಕವಿವರಣೆಗಾರನಾಗಿ ಕಾರ್ಯನಿರ್ವಹಿಸಿದ್ದರು. 2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಭಾರತ ತಂಡ ವಿಶ್ವಕಪ್ ಗೆದ್ದಾಗ ಶಾಸ್ತ್ರಿಯವರು ವಿಕ್ಷಕ ವಿವರಣೆಗಾರನಾಗಿದ್ದರು.

ಐಪಿಎಲ್‌ ಬಯೋಬಬಲ್‌ನಿಂದ ಬಳಲಿದ್ದಾಗಿಯೂ ವಿಶ್ರಾಂತಿ ಬೇಕಾಗಿತ್ತೆಂದೂ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಇತ್ತೀಚೆಗೆ ಹೇಳಿದ್ದರು. ಅದರ ಬೆನ್ನಲ್ಲೇ ತಂಡದ ಬೌಲಿಂಗ್ ಕೋಚ್ ಸಹ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. 1983ರ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಕೂಡ ಟೀಂ ಇಂಡಿಯಾ ವಿರುದ್ಧ ಸೋಮವಾರವಷ್ಟೇ ಆಕ್ರೋಶ ವ್ಯಕ್ತಪಡಿಸಿದ್ದರು. ಆಟಗಾರರು ದೇಶಕ್ಕಾಗಿ ಆಡುವುದಕ್ಕಿಂತ ಐಪಿಎಲ್‌ಗೆ ಹೆಚ್ಚು ಮಹತ್ವ ನೀಡುವುದು ಸರಿಯಲ್ಲ ಎಂದು ಅವರು ಹೇಳಿದ್ದರು. ಸರಿಯಾಗಿ ವೇಳಾಪಟ್ಟಿ ಸಿದ್ಧ‍ಪಡಿಸಿಕೊಂಡು ಯೋಜನೆರೂಪಿಸುವ ಜವಾಬ್ದಾರಿ ಬಿಸಿಸಿಐ ಮೇಲಿದೆ ಎಂದೂ ಹೇಳಿದ್ದರು. ಪಾಕಿಸ್ತಾನ ವಿರುದ್ಧ ಸೋಲಿನ ಬಳಿಕ ನಾಯಕ ವಿರಾಟ್ ಕೊಹ್ಲಿ ನೀಡಿದ್ದ ಹೇಳಿಕೆಗೂ ಮಾಜಿ ಕ್ರಿಕೆಟಿಗ ಅಜಯ್ ಜಡೇಜ ಸೇರಿದಂತೆ ಅನೇಕರಿಂದ ವಿರೋಧ ವ್ಯಕ್ತವಾಗಿತ್ತು.

ಇನ್ನಷ್ಟು ಓದಿಗಾಗಿ…

ICC T20 WC: ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್‌ಗೆ ಭರ್ಜರಿ ಗೆಲುವು, ಭಾರತದ ಸೆಮಿಫೈನಲ್ ಕನಸು ಭಗ್ನ

‘ಹ್ಯಾಪಿ ಬರ್ತ್‌ಡೇ ಮೈ ಲವ್’: ಆಥಿಯಾ ಶೆಟ್ಟಿ ಜತೆಗಿನ ಬಾಂಧವ್ಯ ದೃಢಪಡಿಸಿದ ಕೆ.ಎಲ್.ರಾಹುಲ್ ಇನ್‌ಸ್ಟಾಗ್ರಾಂ ಪೋಸ್ಟ್

ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ: ದೊಡ್ಡ ಗೌರವ ಎಂದ ‘ವಾಲ್’

Tags: ICC T20 World CupTeam IndiaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In