ಸೆಂಚುರಿಯನ್: ದಕ್ಷಿಣ ಆಫ್ರಿಕಾದ ಸೂಪರ್ಸ್ಪೋರ್ಟ್ಸ್ ಪಾರ್ಕ್ನಲ್ಲಿ ಭಾರತ–ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಬಾಕ್ಸಿಂಗ್ಡೇ ಟೆಸ್ಟ್ ಪಂದ್ಯದ ಎರಡನೇ ದಿನ ಮಳೆಯಿಂದಾಗಿ ಆಟ ನಡೆಯಲಿಲ್ಲ. ಒಂದೂ ಎಸೆತ ಕಾಣದೆ ಎರಡನೇ ದಿನದಾಟ ರದ್ದಾಗಿದೆ.
ಮೊದಲ ದಿನದಾಟದ ಅಂತ್ಯಕ್ಕೆ ಭಾರತ ತಂಡವು 90 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿತ್ತು.
ಎರಡನೇ ದಿನವಾದ ಸೋಮವಾರ ಬೆಳಿಗ್ಗೆಯಿಂದಲೇ ಮಳೆ ಸುರಿದಿತ್ತು. ಹೀಗಾಗಿ ಭೋಜನ ವಿರಾಮವನ್ನು ಬೇಗನೇ ನೀಡಿ ಮತ್ತೆ ಪಂದ್ಯ ಮುಂದುವರಿಸಲು ಅಂಪೈರ್ಗಳು ಮುಂದಾಗಿದ್ದರು. ಆದರೆ ಮತ್ತೆ ಮಳೆ ಸುರಿದಿತ್ತು. ಹೀಗಾಗಿ ದಕ್ಷಿಣ ಆಫ್ರಿಕಾದ ಸ್ಥಳೀಯ ಕಾಲಮಾನ 1.30ಕ್ಕೆ ಮೈದಾನ ಪರಿಶೀಲಿಸಿದ ಅಂಪೈರ್ಗಳು ಆಟ ರದ್ದು ಘೋಷಣೆ ಮಾಡಿದರು.
ಮೊದಲ ದಿನದಾಟದಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ್ದ ಕನ್ನಡಿಗ ಕೆ.ಎಲ್. ರಾಹುಲ್ ಶತಕ ಗಳಿಸಿದ್ದರು. ಸದ್ಯ ರಾಹುಲ್ ಹಾಗೂ ರಹಾನೆ ಕ್ರೀಸ್ನಲ್ಲಿದ್ದಾರೆ.
ಇದನ್ನೂ ಓದಿ: IND vs SA Test Cricket: ರಾಹುಲ್ ಆಕರ್ಷಕ ಶತಕ, ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಮೇಲುಗೈ
Discussion about this post