• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಬಾಂಗ್ಲಾದೇಶ ಸ್ವಾತಂತ್ರ್ಯ ಪಡೆಯಲು ಕಾರಣರಾದ ಪಾಕಿಸ್ತಾನ ಮಾಜಿ ಯೋಧಗೆ ಭಾರತದ ಪದ್ಮಶ್ರೀ ಗೌರವ

ಕಳೆದ 50 ವರ್ಷಗಳ ಹಿಂದೆ ಜಹೀರ್‌ಗೆ ಪಾಕಿಸ್ತಾನದಲ್ಲಿ ವಿಧಿಸಿದ ಗಲ್ಲುಶಿಕ್ಷೆ ಇನ್ನೂ ಬಾಕಿ ಇದೆಯಂತೆ.

Shri News Desk by Shri News Desk
Nov 12, 2021, 01:15 pm IST
in ರಾಷ್ಟ್ರೀಯ
Padma Shri khawaja sajjad ali zahir

ಲೆಫ್ಟಿನೆಂಟ್ ಕರ್ನಲ್ ಖಾಜಿ ಸಜ್ಜದ್ ಅಲಿ ಜಹೀರ್

Share on FacebookShare on TwitterTelegram

ಇತ್ತೀಚೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಓರ್ವ ವಿಶಿಷ್ಟ ವ್ಯಕ್ತಿಗೆ ಪದ್ಮಶ್ರೀ ಪ್ರದಾನ ಮಾಡಿದರು. ಅವರು ಪಾಕಿಸ್ತಾನದ ಮಾಜಿ ಯೋಧ. ಹೌದು, ಇದು ನಿಜ. ಆ ತನಕ ಈ ಲೆಫ್ಟಿನೆಂಟ್ ಕರ್ನಲ್ ಖಾಜಿ ಸಜ್ಜದ್ ಅಲಿ ಜಹೀರ್ ಯಾರು ಅಂತಾನೇ ಯಾರಿಗೂ ತಿಳಿದಿರಲಿಲ್ಲ. ಅವರ ಬಗ್ಗೆ ಹುಡುಕಿದರೂ ಕಿಂಚಿತ್ತೂ ಮಾಹಿತಿ ಸಿಗದು. ಆದರೂ, ಈ ವ್ಯಕ್ತಿಗೆ ಪದ್ಮಶ್ರೀ ಕೊಡುವ ಘನ ಕಾರ್ಯ ಏನು ಮಾಡಿದ್ದಾರೆ ಅಂತ ಎಲ್ಲರಿಗೂ ಅನುಮಾನ ಶುರುವಾಯಿತು. ಇಡೀ ದೇಶದ ಗಮನ ಲೆಫ್ಟಿನೆಂಟ್ ಕರ್ನಲ್ ಖಾಜಿ ಸಜ್ಜದ್ ಅಲಿ ಜಹೀರ್ ಕಡೆ ಹೊರಳಿದ್ದೇ ಆಗ.

ನಿಜ ಹೇಳಬೇಕೆಂದರೆ, ಸಜ್ಜದ್ ಅಲಿ ಜಹೀರ್, ತಮ್ಮ ಜೀವವನ್ನೇ ಒತ್ತೆ ಇಟ್ಟು ಭಾರತದ ಗುಪ್ತಚರ ಇಲಾಖೆಗೆ ದೇಶ ಮರೆಯಲಾಗದಂಥ ಸಹಾಯ ಮಾಡಿದ್ದಾರೆ. ಬಾಂಗ್ಲಾದೇಶಕ್ಕೆ ಸ್ವಾತಂತ್ರ ಕೊಡಿಸುವ ವಿಚಾರದಲ್ಲಿ ಇವರ ಪಾತ್ರ ಬಹಳ ಹಿರಿದು. ಹೀಗಾಗಿ, ಎಲೆಮರೆ ಕಾಯಂತಿದ್ದ ಸಜ್ಜದ್ ಅಲಿ ಜಹೀರ್ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಪಡೆದುಕೊಂಡರು.

ಸಜ್ಜದ್ ಅಲಿ ಜಹೀರ್ ಬದುಕಿನ ಕತೆ ಬಹಳ ಕೌತುಕ. ಅದು ಏನು ಅಂತ ನೋಡೋಣ ಬನ್ನಿ.
ಲೆಫ್ಟಿನೆಂಟ್ ಕರ್ನಲ್ ಸಜ್ಜದ್ ಅಲಿ ಜಹೀರ್ 20ನೇ ವಯಸ್ಸಿಗೆ ಪಾಕಿಸ್ತಾನದ ಸಿಯಾಲ್ ಕೋಟದ ಮಿಲಿಟರಿ ಆಫೀಸರ್ ಆಗಿ ನೇಮಕ ಗೊಂಡರು. ಈ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿ ದೌರ್ಜನ್ಯ ಮಿತಿಮೀರಿ ಹೋಗಿತ್ತು. ಇದು ಮಿಲಿಟರಿಗೂ ವ್ಯಾಪಿಸಿತ್ತು. ಬಾಂಗ್ಲಾದೇಶದಲ್ಲಿ ಮಾನವ ಹಕ್ಕಿನ ಉಲ್ಲಂಘನೆಯಾಗುತ್ತಿತ್ತು. ಇದನ್ನು ತಡೆಯಲಾರದೆ ಜಹೀರ್ ಮೆಲ್ಲನೆ ಪಕ್ಕದ ಭಾರತದ ಗಡಿ ದಾಟಿ ಬಂದುಬಿಟ್ಟರು.

ಭಾರತಕ್ಕೆ ಬಂದ ಮೇಲೆ ಜಹೀರರಿಗೆ ತೊಂದರೆಗಳೇನು ತಪ್ಪಲಿಲ್ಲ. ಈತ ಒಬ್ಬ ಪಾಕಿಸ್ತಾನದ ಗೂಢಚಾರಿ ಅಂತಲೇ ಗುಮಾನಿಯಿಂದ ನೋಡತೊಡಗಿದರು. ಅಷ್ಟೇ ಅಲ್ಲ, ಗಡಿ ಭದ್ರತಾ ಪಡೆಯವರು. ಪಠಾಣ್ ಕೋಟದ ಮಿಲಿಟರಿ ಅಧಿಕಾರಿಗಳು ಜಹೀರರನ್ನು ಹಿಡಿದು, ತೀವ್ರ ವಿಚಾರಣೆಗೆ ಗುರಿಪಡಿಸಿದರು.

ಇವರೆಲ್ಲಾ ಅಂದುಕೊಂಡಂತೆ ಜಹೀರ್ ಆಗಿರಲಿಲ್ಲ. ಆಗಲೇ ಜಹೀರ್ ಭಾರತಕ್ಕೆ ಬಂದ ನಿಜವಾದ ಉದ್ದೇಶ ಬೆಳಕಿಗೆ ಬಂದದ್ದು. ಅದು ಏನೆಂದರೆ, ಭಾರತದ ಮಿಲಿಟರಿಗೆ ತಲುಪಿಸಲೆಂದೇ ಜಹೀರ್ ಪಾಕಿಸ್ತಾನಕ್ಕೆ ಸಂಬಂಧಿಸಿದ ಮಹತ್ವದ ಗೌಪ್ಯದಾಖಲೆಗಳನ್ನು ತಮ್ಮ ಜೊತೆಗೆ ತಂದಿದ್ದರು. ಈ ಮೊದಲು ಭಾರತೀಯ ಗುಪ್ತಚರ ದಳದೊಂದಿಗೆ ಜಹೀರ್ ಸಂಬಂಧ ಹೊಂದಿದ್ದರು. ಹೀಗಾಗಿ, ಮಾಹಿತಿ ಪಡೆದ ಮಿಲಿಟರಿ ಅಧಿಕಾರಿಗಳು, ಗೌಪ್ಯ ದಾಖಲೆಗಳನ್ನು ಪಡೆದು ಜಹೀರರನ್ನು ನೇರಾಗಿ ದೆಹಲಿಯ ಗೌಪ್ಯ ಮನೆಗೆ ಬಂದರು.

ಇದಾದ ನಂತರ ಮಾಜಿ ಲೆಫ್ಟಿನೆಂಟ್, ಪಾಕಿಸ್ತಾನದ ಮಾಜಿ ಯೋಧ ಜಹೀರ್ ಬಾಂಗ್ಲಾದೇಶಕ್ಕೆ ಹೋಗಿ ಅಲ್ಲಿ ಪಾಕಿಸ್ತಾನಿ ಪಡೆಯನ್ನು ಓಡಿಸಲು, ಅಲ್ಲಿನ ಮುಕ್ತಿ ಬಹಿನಿ ಅನ್ನುವ ಸ್ವಾತಂತ್ರ್ಯ ಹೋರಾಟಗಾರರಿಗೆ ಗೆರಿಲ್ಲಾ ತರಬೇತಿ ಕೊಟ್ಟರು. ಇದು ಬಾಂಗ್ಲಾ ಸ್ವತಂತ್ರ ಪಡೆಯಲು ನೆರವಾಯಿತು.

ಇವತ್ತೂ ಸಹ ಜಹೀರ್ ರನ್ನು ಪಾಕಿಸ್ತಾನಿಗಳು ದ್ವೇಷಿಸುತ್ತಾರೆ. ಮಾಜಿ ಯೋಧರೊಬ್ಬರ ಪ್ರಕಾರ, ಕಳೆದ 50 ವರ್ಷಗಳ ಹಿಂದೆ ಜಹೀರ್‌ಗೆ ಪಾಕಿಸ್ತಾನದಲ್ಲಿ ವಿಧಿಸಿದ ಗಲ್ಲುಶಿಕ್ಷೆ ಇನ್ನೂ ಬಾಕಿ ಇದೆಯಂತೆ. ಆದರೆ, ಬಾಂಗ್ಲಾದೇಶದ ಇದಕ್ಕೆ ವೈರುಧ್ಯ. ಗೆರಿಲ್ಲಾ ಯುದ್ಧ ತರಬೇತಿ ನೀಡಿ ದೇಶ ಸ್ವಾತಂತ್ರ್ಯ ಪಡೆಯಲು ನೆರವಾದ ಜಹೀರರನ್ನು ಅಲ್ಲಿನವರು ಸನ್ಮಾನಿಸಿ, ಪದಕ ನೀಡಿದ್ದಾರೆ. ಅಲ್ಲಿನ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯನ್ನು ಜಹೀರರಿಗೆ ನೀಡಿ ಗೌರವಿಸಿದೆ.

ಮೊನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಜಹೀರರು ಭಾರತದ ಭದ್ರತೆಗಾಗಿ ಜೀವದ ಹಂಗು ತೊರೆದು ನೆರವಾದ, ಹಲವು ಯುದ್ಧಗಳಲ್ಲಿ ಭಾಗಿಯಾದ ಜಹೀರರ ಸೇವೆಯನ್ನು ಪರಿಗಣಿಸಿ ಭಾರತದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮಶ್ರೀ ಪ್ರದಾನ ಮಾಡಿದೆ.

ಇದನ್ನೂ ಓದಿ: ವೃಕ್ಷಮಾತೆಗೆ ಸ್ಟಾರ್ ನಟರಿಗಿಂತ ಅದ್ದೂರಿ ಸ್ವಾಗತ; ಪದ್ಮಶ್ರೀ ತುಳಸಿ ಗೌಡ ಜೊತೆ ಸೆಲ್ಫಿಗಾಗಿ ಕಾತುರದಿಂದ ಕಾದ ಜನ

Tags: BangladeshPadma Shri AwardPakistanTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In