ದೆಹಲಿ: ಕಾರಣವಾಗಿರುವ ಜವಾದ್ ಚಂಡಮಾರುತವು132 ಕಿ.ಮೀ. ವೇಗದಲ್ಲಿ ಬೀಸಲಿದ್ದು ಆಗಬಹುದಾ ಹಾನಿಯನ್ನು ತಪ್ಪಿಸಲು ಸಕಲ ಸಿದ್ಧತೆಯನ್ನು ನಡೆಸಲಾಗುತ್ತಿದೆ. ವಿಶಾಖಪಟ್ಟಣದಿಂದ 580 ಕಿ.ಮೀ. ದೂರದ ಆಗ್ನೇಯ ಭಾಗದಿಂದ ಚಂಡಮಾರುತ ಬೀಸಲಿದೆ. ಶುಕ್ರವಾರ ಒಡಿಶಾ ರಾಜ್ಯದ ಗೋಪಾಲಪುರ್ದಿಂದ 670 ಕಿಲೋಮೀಟರ್ ಮತ್ತು ಪಾರಾದೀಪ್ ನಿಂದ 760 ಕಿಲೋಮೀಟರ್ ದೂರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಒಡಿಶಾ ದಕ್ಷಿಣ ಮತ್ತು ಆಂಧ್ರ ಪ್ರದೇಶದ ಉತ್ತರ ಕರಾವಳಿಗೆ ಶನಿವಾರ ಸಂಜೆ ಅಪ್ಪಳಿಸುವ ಸಂಭವ ಇದ್ದು, ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಅಂಡಮಾನ್ಮತ್ತು ನಿಕೋಬಾರ್ ದ್ವೀಪದಲ್ಲಿ ವ್ಯಾಪಕ ಮಳೆ ಸುರಿಯಲಿದೆ. ವಾಯುಭಾರ ಕುಸಿತ ಪರಿಣಾಮ ಈಗಾಗಲೇ ಅನೇಕ ಕಡೆಗಳಲ್ಲಿ ಮಳೆ ಆರಂಭವಾಗಿದೆ ಎಂದು ಐಎಂಸಿ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಿರುಸಿನ ಪರಿಹಾರ ಕಾರ್ಯಗಳು ಸಾಗಿವೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ತಂಡದ 62 ತಂಡಗಳನ್ನು ಆಂಧ್ರ ಪ್ರದೇಶದ ಉತ್ತರಮತ್ತು ಒಡಿಶಾದ ದಕ್ಷಿಣ ಕರಾವಳಿಯ 13 ಜಿಲ್ಲೆಗಳಿಗೆ ನಿಯೋಜಿಸಲಾಗಿದೆ.
ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ‘ಜವಾದ್’ ಚಂಡಮಾರುತದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹಿರಿಯ ಅಧಿಕಾರಿಗಳ ಸಭೆಯನ್ನು ನಡೆಸಿದ್ದು, ಒಡಿಶಾ ಮತ್ತು ಆಂಧ್ರ ಪ್ರದೇಶಗಳಿಗೆ ಅಗತ್ಯ ನೆರವನ್ನು ನೀಡುವಂತೆ ತಿಳಿಸಿದ್ದಾರೆ. ಅಪಾಯದ ಸ್ಥಳದಲ್ಲಿರುವ ಜನರನ್ನು ಸ್ಥಳಾಂತರ ಮಾಡಲು ಹೇಳಿದ್ದಾರೆ. ಪೂರ್ವ ಕರಾವಳಿ ರೈಲ್ವೆ ವಲಯವು 95 ರೈಲುಗಳ ಸಂಚಾರವನ್ನು ಶುಕ್ರವಾರದಿಂದಲೇ 3 ದಿನಕ್ಕೆ ಅನ್ವಯವಾಗುವಂತೆ ರದ್ದು ಮಾಡಿದೆ.
ಇದನ್ನೂ ಓದಿ: Crop damage survey: ಮಳೆ ಹಾನಿ ನಷ್ಟ : ತ್ವರಿತ ಸಮೀಕ್ಷೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ. ಶಿಖಾ ಸೂಚನೆ
Discussion about this post