ಚಿಕ್ಕಮಗಳೂರು: ನಗರಸಭೆಗೆ ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ನಗರದ ಎಲ್ಲಾ ವಾರ್ಡ್ಗಳಲ್ಲಿ ಸ್ಪರ್ಧಿಸಲು ಜೆಡಿಎಸ್ ಪಕ್ಷದ ಹುರಿಯಾಳುಗಳು ಹಣಿಗೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ತಿಳಿಸಿದರು.
ಇದನ್ನೂ ಓದಿ: B.R. Ambedkar: ಬಿ.ಆರ್.ಅಂಬೇಡ್ಕರ್ ಚಿಂತನೆಗಳು ಸದಾ ಕಾಲ ಅಮರ
ನಗರದ ಎಂ.ಜಿ.ರಸ್ತೆ ಗಣಪತಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರ ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಹಿತ ದೃಷ್ಟಿಯಿಂದ ಜನಪ್ರತಿನಿಧಿಗಳ ಆಯ್ಕೆ ಮೂಲಕ ಸುಲಲಿತ ಆಡಳಿತ ನಡೆಯಬೇಕು ಎನ್ನುವ ಉದ್ದೇಶದಿಂದ ನಗರಸಭೆ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಯಂತಹ ಸ್ಥಳೀಯ ಸಂಸ್ಥೆಗಳು ರಚನೆಗೊಂಡಿವೆ. ಆದರೆ ಚಿಕ್ಕಮಗಳೂರು ನಗರಸಭೆಗೆ ಕಳೆದ ೪ ವರ್ಷಗಳಿಂದ ಚುನಾವಣೆ ನಡೆಸದೆ ಮುಂದೂಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗೌರವ ತೋರಿದಂತೆ ಎಂದು ವಿಷಾಧ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕಟ್ಟಕಡೆಯ ವ್ಯಕ್ತಿಯ ಅಭ್ಯುದಯಕ್ಕಾಗಿ ಹೋರಾಡಿದ ಮಹಾಶಯ ಅಂಬೇಡ್ಕರ್
ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳ ಆಯ್ಕೆ ಇಲ್ಲದೇ ಹೋದಲ್ಲಿ ಜನಸಾಮಾನ್ಯರು ಹಲವಾರು ಸಮಸ್ಯೆಗಳನ್ನು ಎದುರಿಸಲಿದ್ದಾರೆ. ಜನರ ಅಧಿಕಾರವನ್ನು ಜನತೆಗೆ ವಹಿಸಬೇಕು ಎಂಬ ತೀರ್ಮಾನದೊಂದಿಗೆ ನ್ಯಾಯಾಲಯ ಮಧ್ಯಪ್ರವೇಶಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ತಾಕೀತು ಮಾಡುವ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ, ಆಡಳಿತ ಸಮಸ್ಯೆಯನ್ನು ಮನಗಂಡು ಕೋರ್ಟ್ ಇದೀಗ ಚುನಾವಣೆ ನಡೆಸುವಂತೆ ಆದೇಶ ನೀಡಿರುವುದು ಸ್ವಾಗತಾರ್ಹ ವಿಚಾರ ಎಂದರು.
ಇದನ್ನೂ ಓದಿ: Police service unique: ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅನನ್ಯ
ಚುನಾವಣಾ ಆಯೋಗ ಈಗಾಗಲೇ ನಗರಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು ನಗರದ ಎಲ್ಲಾ ವಾರ್ಡ್ಗಳಲ್ಲಿ ಜೆಡಿಎಸ್ ಸ್ಪರ್ಧಾ ಹುರಿಯಾಳುಗಳು ಕಣಕ್ಕಿಳಿಯದ್ದಾರೆ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಮತದಾರರ ಮನವೊಲಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ ವಿಶೇಷವಾಗಿ ಚುನಾವಣೆ ವೇಳೆ ಯಾವುದೇ ನಿರ್ವಿಜ್ಞಗಳು ಬಾರದಿರಲಿ ಸುಲಲಿತವಾಗಿ ಚುನಾವಣೆ ನಡೆದು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಎನ್ನುವ ಸುದುದ್ದೇಶದಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Police service unique: ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅನನ್ಯ
ಇತ್ತೀಚಿಗೆ ಹಲವು ಜೆಡಿಎಸ್ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು ರಾಜ್ಯ ರಾಜಕಾರಣದಲ್ಲಿ ಈ ಹಿಂದಿನಿಂದಲೂ ಅನೇಕ ಮುಖಂಡರು ಪಕ್ಷವನ್ನು ತೊರೆದು ಬೇರೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅದಾದ ಬಳಿಕ ಪುನಃ ಪಕ್ಷ ಸೇರ್ಪಡೆಗೊಂಡಿದ್ದಾರೆ. ಆದರೆ ಪಕ್ಷದಲ್ಲಿ ಕಾರ್ಯಕರ್ತರ ಬಲ ಇರುವವರೆಗೂ ಯಾವುದೇ ಮುಖಂಡರು ಪಕ್ಷ ತೊರೆದರೂ ಯಾವುದೇ ಹಾನಿಯಿಲ್ಲ ಎಂದು ಸಮರ್ಥನೆ ಮಾಡಿಕೊಂಡರು.
ಇದನ್ನೂ ಓದಿ: Indian Army: ಭಾರತೀಯ ಸೇನೆಯಲ್ಲಿ ಖಾಲಿಯಿದೆ 1 ಲಕ್ಷಕ್ಕೂ ಅಧಿಕ ಹುದ್ದೆಗಳು
ಈ ಸಂದರ್ಭದಲ್ಲಿ ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಹೆಚ್.ಎಸ್.ಮಂಜಪ್ಪ, ಜೆಡಿಎಸ್ ಮುಖಂಡ ತಿಮ್ಮಶೆಟ್ಟಿ, ನಗರಾಧ್ಯಕ್ಷ ಎ.ಸಿ.ಕುಮಾರ್, ಪ್ರಧಾನ ಕಾರ್ಯದರ್ಶಿ ಮೂರ್ತಿ, ಮಾಜಿ ನಗರಸಭಾ ಸದಸ್ಯ ದಿನೇಶ್, ಮುಖಂಡರಾದ ಇರ್ಷಾದ್, ಆನಂದೇಗೌಡ, ಗೋಪಿ, ವೆಂಕಟೇಶ್, ದೇವರಾಜ್ ಅರಸ್, ಮಂಜಣ್ಣ, ಚಿದಾನಂದ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ: Dowry: ವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್
Discussion about this post