ಮೈಸೂರು: ಬಿಜೆಪಿ ಅತಿದೊಡ್ಡ ರಾಜಕೀಯ ಪಕ್ಷವಾಗಿದೆ, JDS ಅಥವಾ ಬೇರೆ ಯಾವುದೇ ಪಕ್ಷಗಳ ಜೊತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ಹೇಳಿದ್ದಾರೆ.
ಮುಂಬರುವ ಪಂಚಾಯತ್, ಪಾಲಿಕೆ ಚುನಾವಣೆಗಳು ಸೇರಿದಂತೆ, ೨೦೨೩ರ ವಿಧಾನಸಭೆ ಚುನಾವಣೆಯು ಪ್ರಮುಖವಾಗಿದ್ದು, ಸರ್ಕಾರವನ್ನು ನಮ್ಮ ಪಕ್ಷ ಬಹುಮತದಿಂದ ರಚಿಸುವ ಗುರಿ ಹೊಂದಿದೆ ಎಂದವರು ಹೇಳಿದ್ದಾರೆ.
ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡಿಯ ದರ್ಶನ ಪಡೆದು, ಪೂಜೆ ಸಲ್ಲಿಸಿ ಬಳಿಕ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು. ಹಳೆ ಮೈಸೂರು ಭಾಗ ಸೇರಿದಂತೆ, ಮೈಸೂರಿನಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಸಾಧಿಸುತ್ತಿದೆ, ಪಕ್ಷ ಸಂಘಟನೆ ಚುರುಕುಗೊಳಿಸುವುದಾಗಿ ಅವರು ಹೇಳಿದರು.
ಪ್ರಸ್ತುತ ಸರ್ಕಾರ ಆಡಳಿತವನ್ನು ಬೊಮ್ಮಾಯಿ ಅವರ ನೇತೃತ್ವದಲ್ಲಿ ಉತ್ತಮ ರೀತಿಯಲ್ಲಿ ನಡೆಸಲಾಗುತ್ತಿದೆ, ಸಚಿವರ ಖಾತೆ ಹಂಚಿಕೆ ಎಂಬುದು ಸಿಎಂ. ಪರಮಾಧಿಕಾರ ಇದರಲ್ಲಿ ನಮ್ಮ ಹಸ್ತಕ್ಷೇಪ ಇರುವುದಿಲ್ಲ, ಖಾತೆ ಹಂಚಿಕೆಯಾದಂತೆ ಎಲ್ಲರು ಕಾರ್ಯ ನಿರ್ವಹಿಸಿಕೊಂಡು ಹೋಗುತ್ತಾ ಇದ್ದಾರೆ ಎಂದು ಅವರು ಸುದ್ದಿಗಾರರೊಂದಿಗೆ ತಿಳಿಸಿದರು.
Discussion about this post